ಕೊರೊನ್ ಭೀತಿಯಿಂದ ರಾಜ್ಯ ಲಾಕ್ ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಕೊರೊನಾ ವೈರಸ್ ಹರಡುವಿಕೆ ಹೆಚ್ಚಾಗಿದೆ. ಇದರಿಂದ ರಾಜ್ಯ ಲಾಕ್ ಡೌನ್ ಆಗಿದೆ. ಹಾಗಾಗಿ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗಿದೆ. ಅದರಲ್ಲೂ ಕಾರ್ಮಿಕರಲ್ಲಿ ಆತಂಕ ಹೆಚ್ಚಾಗಿತ್ತು. ಈ ಕಾರಣಕ್ಕಾಗಿ ಕಟ್ಟಡ ಕಾರ್ಮಿಕರಿಗೆ ತಿಂಗಳಿಗೆ 1000 ರೂ ಸಹಾಯ ಧನ ನೀಡಲು ನಿರ್ಧರಿಸಲಾಗಿದೆ. ರೇಷನ್ ಕಾರ್ಡ್ ಹೊಂದಿದ ಸಾರ್ವಜನಿಕರಿಗೆ 2 ತಿಂಗಳ ಪಡಿತರವನ್ನು ಮುಂಗಡವಾಗಿ ನೀಡಲು ಸೂಚನೆ ನೀಡಲಾಗಿದೆ. ಅಲ್ಲದೆ ಸಾಮಾಜಿಕ ಭದ್ರತಾ ಪಿಂಚಣಿ ಹಣವನ್ನು ಸಹ ಮುಂಗಡವಾಗಿ ನೀಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಜೊತೆಗೆ ಎರಡು ತಿಂಗಳ ಮಾನವ ದಿನಗಳ ಬಾಬ್ತು ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ. ಇನ್ನೂ ವಿಶೇಷ ಎಂದರೆ ಬಡವರ ಬಂಧು ಯೋಜನೆಯಲ್ಲಿ ಸಾಲ ಪಡೆದವರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ
ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್
ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...








