tablig jamath
‘ತಬ್ಲಿಗ್ ಪ್ರಕರಣ’ : ಕೇಂದ್ರದ ಪ್ರಮಾಣತ್ರದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ
ನವದೆಹಲಿ: ತಬ್ಲಿಗ್ ಜಮಾತ್ ಸಭೆಯಿಂದಾಗಿಯೇ ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾದ ಬಳಿಕ ಇಡೀ ದೇಶಾದ್ಯಂತ ಸಂಚಲ ಸೃಷ್ಟಿಯಾಗಿತ್ತು. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಸಲ್ಲಿಕೆಯಾಗಿರುವ ಪ್ರಮಾಣ ಪತ್ರ ತೃಪ್ತಿಕರವಾಗಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಈ ಸಂಬಂಧ ‘ಕೋಮು ದ್ವೇಷ ಹರಡಲಾಗ್ತಿದೆ’ ಎಂದು ಆರೋಪಿಸಿ ಜಮೀಯತ್ ಉಲಮಾ-ಐ-ಹಿಂದ್ ಹಾಗೂ ಇತರ ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಇಂದು ಸುಪ್ರೀಂ ಕೋರ್ಟ್ ನಲ್ಲಿ ಇದರ ವಿಚಾರಣೆ ನಡೆದಿದ್ದು, ಕೇಂದ್ರ ಸಲ್ಲಿಸಿರುವ ಪ್ರಮಾಣತ್ರ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ಹೊರಹಾಕಿದೆ.
ಕಬ್ಜ ಸಿನಿಮಾದ ಮೋಷನ್ ಪೋಸ್ಟರ್ ನಲ್ಲಿ , ಉಪ್ಪಿ ರೆಟ್ರೋ ಲುಕ್ ಗೆ ಅಭಿಮಾನಿಗಳು ಫಿದಾ..!
ಹೌದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣ್ಯಂ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠವು, ಈ ಸಂಬಂಧ ವಿಚಾರಣೆ ನಡೆಸಿದೆ. ಈ ವೇಳೆ ‘ನೀವು ಸೂಕ್ತ ಪ್ರಮಾಣಪತ್ರವನ್ನೇ ಸಲ್ಲಿಸಿಲ್ಲ. ನೀವು ಸಲ್ಲಿರುವ ಪ್ರಮಾಣಪತ್ರದಲ್ಲಿ ಪ್ರಮುಖ ಎರಡು ಪ್ರಶ್ನೆಗಳಿಗೆ ಉತ್ತರವೇ ಇಲ್ಲ. ಈ ನಡೆ ಒಪ್ಪುವಂತಹದಲ್ಲ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿದೆ. ಇದೇ ವೇಳೆ ನಿಮ್ಮ ಉತ್ತರವು ತೃಪ್ತಿದಾಯಕವಾಗಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾಗುವ ಇಂತಹ ಸುದ್ದಿಗಳಿಗೆ ಕಡಿವಾಣ ಹಾಕಲು ಇರುವ ಮಾರ್ಗೋಪಾಯಗಳ ಕುರಿತ ಮಾಹಿತಿಯನ್ನು ನಿಮ್ಮಿಂದ ಬಯಸಿದ್ದೆವು. ಇಂತಹ ಸುದ್ದಿಗಳಿಗೆ ಕಡಿವಾಣ ಹಾಕಲು ಈಗ ಯಾವುದೇ ಕಾರ್ಯವಿಧಾನಗಳು ಇಲ್ಲದಿದ್ದ ಪಕ್ಷದಲ್ಲಿ ಹೊಸ ಕಾರ್ಯವಿಧಾನವೊಂದನ್ನು ಜಾರಿಗೆ ತನ್ನಿ ಎಂದು ನಿರ್ದೇಶಿಸಿದೆ. ಅಲ್ಲದೇ ಪ್ರಕರಣದ ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿದೆ.
tablig jamath
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








