ಕೊರೊನಾ ಹರಡುವಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಇಂದು ರಾತ್ರಿ ಎಂಟು ಗಂಟೆಗೆ ದೇಶವನ್ನ ಉದ್ದೇಶಿಸಿ ಪಿ. ಎಂ ಮೋದಿ ಮತ್ತೊಮ್ಮೆ ಮಾತನಾಡಿದ್ದಾರೆ. ದೇಶವನ್ನು ಎಚ್ಚರಿಸಿದ ಮೋದಿ, ಕೊರೊನಾ ಸೋಂಕು ಲೆಕ್ಕಿಸದೆ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ , ಅಂಬುಲೇನ್ಸ್ ಚಾಲಕರ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಬಗ್ಗೆ ಯೋಚಿಸಬೇಕು. ಅವರು ನಮಗಾಗಿ 24 ಗಂಟೆಗಳ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಾಗಿ ದೇಶದ ಜನರ ಮನೆಯಿಂದ ಹೊರ ಬರಬೇಡಿ. ನಿಮಗೆ ನೀವೇ ಲಕ್ಷ್ಮಣ ರೇಖೆ ಹಾಕಿಕೊಳ್ಳಿ. ಕೊರೊನಾ ವಿರುದ್ದ ಹೋರಾಟ ನಡೆಸಲು 15 ಸಾವಿರ ಕೋಟಿ ನೀಡಲಾಗುವುದು. ಎಲ್ಲಾ ರಾಜ್ಯಗಳಿಗೂ ಆರೋಗ್ಯ ವಿಚಾರವೇ ಮುಖ್ಯವಾಗಿರಬೇಕು. ಈ ಬಗ್ಗೆ ರಾಜ್ಯ ಸರ್ಕಾರಗಳಿಗೆ ಪ್ರಧಾನ ಮಂತ್ರಿ ಸೂಚನೆ ನೀಡಲಾಗಿದೆ. ಅಲ್ಲದೆ ದೇಶದ ಜನರು 21 ದಿನಗಳ ಕಾಲ ಮನೆಯಿಂದ ಹೊರ ಬರಬಾರದು ಎಂದು ಮೋದಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...








