ಜನರಿಂದ ಬಿಜೆಪಿಗೆ ತಕ್ಕಪಾಠ : ಪಕ್ಷದ ವಿರುದ್ಧ ಸಿಡಿದ ಸೋಮಶೇಖರ್
ಬಳ್ಳಾರಿ : ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿದರೆ ಮುಂದಿನ ಚುನಾವಣೆಯಲ್ಲಿ ಜನರೇ ಬಿಜೆಪಿ ತಕ್ಕ ಪಾಠ ಕಲಿಸುತ್ತಾರೆ ಎಂದು ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ಸಿಎಂ ತಾತ್ವಿಕ ಒಪ್ಪಿಗೆ ನೀಡಿದ ವಿಚಾರವಾಗಿ ಬಳ್ಳಾರಿಯಲ್ಲಿ ಮಾತನಾಡಿದ ಸೋಮಶೇಖರ್ ರೆಡ್ಡಿ, ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ನನ್ನ ಬೆಂಬಲ ಇಲ್ಲ.
ದುಡ್ಡಿಲ್ಲ ಅನ್ನೋ ಸರ್ಕಾರಕ್ಕೆ `ನಿಗಮ ಸ್ಥಾಪನೆಗೆ ನೂರಾರು ಕೋಟಿ ಹೇಗೆ ಬಂತು’
ರಾಜ್ಯ ಸರ್ಕಾರ ಇಂತಹ ನಿರ್ಣಯ ಕೈಗೊಳ್ಳಬಾರದಿತ್ತು. ಜನರು ಈ ಬಗ್ಗೆ ಹೋರಾಟ ಮಾಡುತ್ತಾರೆ.
ನನಗೆ ಪಕ್ಷ ಮುಖ್ಯ ಅಲ್ಲ, ನನಗೆ ಜನರೇ ಮುಖ್ಯ. ಜನರು ಹೋರಾಟ ಮಾಡಿದರೆ ನಾನೂ ಜನರ ಪರವಾಗಿ ಹೋರಾಟಕ್ಕೆ ಇಳಿಯುವೆ ಎಂದು ಸಿಎಂ ವಿರುದ್ಧ ಗುಡುಗಿದ್ದಾರೆ.
ಬಳ್ಳಾರಿ ಜಿಲ್ಲೆ ವಿಭಜನೆಯಾದ್ರೆ ಜಿಲ್ಲೆಯಲ್ಲಿ ಬಿಜೆಪಿ ಎರಡು ಹೋಳಾಗುತ್ತದೆ ಎಂದು ಎಚ್ಚರಿಸಿದ ಸೋಮಶೇಖರ್, ಈ ಜಿಲ್ಲೆಯಲ್ಲಿ ಜನರು ಬಿಜೆಪಿಗೆ ತಕ್ಕಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ಮಾತುಗಳನ್ನಾಡಿದರು.
ಇನ್ನು ವಿಜಯನಗರ ಜಿಲ್ಲೆ ಬೇಡ ಬೇಡ ಅಂತ ಎಷ್ಟು ಬಾರಿ ಸಿಎಂ ಬಿಎಸ್ ವೈ ಅವರಿಗೆ ಹೇಳಬೇಕು.
ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ತೆಗೆದುಕೊಂಡು ಹೋಗಿ ಹೇಳಿದ್ದೇವೆ. ಇನ್ನೆಷ್ಟು ಬಾರಿ ಹೇಳಬೇಕು.
ಡಿವೈಡ್ ಆಗಲೇಬೇಕು ಎಂದು ಡಿಸೈಡ್ ಆದರೆ ನಾವೇನು ಮಾಡಬೇಕು. ರಾಜ್ಯ ಸರ್ಕಾರ ಮೊಂಡುತನಕ್ಕೆ ಬಿದ್ರೆ ನಾವೇನು ಮಾಡಬೇಕು.
ಪಕ್ಷ ಬಲವರ್ಧನೆಗೆ ಡಿಕೆಶಿ ಪಣ : ನ.22 ರಿಂದ ಹೈದರಾಬಾದ್ ಕರ್ನಾಟಕ ಪ್ರವಾಸ
ನಾನಂತೂ ಇನ್ನೊಂದು ಬಾರಿ ಸಿಎಂಗೆ ಹೇಳಲ್ಲ. ಯಾರಾದರೂ ಈ ಬಗ್ಗೆ ಹೋರಾಟ ಮಾಡಿದರೆ ಅವರಿಗೆ ನಾನು ಬೆಂಬಲ ಕೊಡುತ್ತೇನೆ ಎಂದು ಸಿಎಂ ವಿರುದ್ಧ ಸೋಮಶೇಖರ್ ತಿರುಗಿ ಬಿದ್ದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel