ಯಡಿಯೂರಪ್ಪ ನನ್ನ ಹೆದರಿಸಬೇಡಿ, ನೀವು ನನಗಿಂತ ಜ್ಯೂನಿಯರ್

ಬೆಂಗಳೂರು : ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಬಲವಂತವಾಗಿ ಬಂದ್ ಮಾಡಿದ್ರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂಬ ಸಿಎಂ ಬಿಎಸ್ ವೈ ಗೆ ಹೇಳಿಕೆಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.
ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಡಿಸೆಂಬರ್ 5ರಂದು ಕರ್ನಾಟಕ ಬಂದ್ ಮಾಡಲು ಕನ್ನಡ ಪರ ಸಂಘಟನೆಗಳು ತೀರ್ಮಾನ ಮಾಡಿವೆ. ಈ ವಿಚಾರವಾಗಿ ನಗರದಲ್ಲಿ ವಾಟಾಳ್ ನೇತೃತ್ವದಲ್ಲಿ ಸಭೆ ನಡೆಯಿತು.
ಕರ್ನಾಟಕ ಉಸ್ಕಾ ಬಾಪ್ ಕಾ ನಹೀ ಹಮಾರಾ ಹೈ : ಪ್ರಭು ಚವ್ಹಾಣ್
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ಸಿಎಂ ಅವರ ಬಂದ್ ಮಾಡಿದ್ರೆ ಕಠಿಣ ಕ್ರಮ ಹೇಳಿಕೆಗೆ ಪ್ರತಿಕ್ರಿಯಿಸಿ,
ಯಾರು ಏನ್ ಬೇಕಾದರೂ ಕಠಿಣ ಕ್ರಮಕೈಗೊಳ್ಳಲಿ. ನಾವಂತೂ ಬಂದ್ ಮಾಡೇ ಮಾಡುತ್ತೇವೆ. ಡಿಸೆಂಬರ್ 5ರಂದು ಬಂದ್ ನಡೆದೇ ನಡೆಯುತ್ತದೆ. ಮರಾಠಿ ಪ್ರಾಧಿಕಾರ ಮಾಡಿದರೆ ಯಡಿಯೂರಪ್ಪನವರ ರಾಜೀನಾಮೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಸಿಎಂ ಬಿಎಸ್ ವೈ ವಿರುದ್ಧ ಕಿಡಿಕಾರಿದ ವಾಟಾಳ್ ನಾಗರಾಜ್, ಕಠಿಣ ಕ್ರಮ ಏನ್ರೀ ಮಾಡುತ್ತೀರಾ ಯಡಿಯೂರಪ್ಪನವರೇ.. ನನ್ನನ್ನು ಹೆದರಿಸಬೇಡಿ, ನೀವು ನನಗಿಂತ ವಿಧಾನಸಭೆಗೆ ಜ್ಯೂನಿಯರ್. ನಾವು ಕರ್ನಾಟಕದ ಜನ ನಿಮ್ಮ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಎಂದು ವಾರ್ನಿಂಗ್ ನೀಡಿದರು.
ಅಜಿತ್ ಪವಾರ್ ಬೆಳಗಾವಿ ಬೆಂಕಿ: ಉದ್ಧಟನ ಮಾಡಿದ್ರೆ ಸುಮ್ಮನಿರಲ್ಲ ಅಂದ್ರು ಬಿಎಸ್ವೈ
ಇನ್ನು ವಿರೋಧ ಪಕ್ಷದ ಬಗ್ಗೆ ಮಾತನಾಡಿ, ಕರ್ನಾಟಕದಲ್ಲಿ ವಿರೋಧ ಪಕ್ಷವೇ ಇಲ್ಲ. ಇಲ್ಲಿ ಯಡಿಯೂರಪ್ಪನ ಪಕ್ಷ ಅಷ್ಟೇ. ವಿರೋಧ ಪಕ್ಷದವರು ಈ ಪ್ರಾಧಿಕಾರದ ವಿರುದ್ಧ ಮಾತಾನಾಡದೇ ಮನೆಯಲ್ಲಿ ಸೇರಿಕೊಂಡಿದ್ದಾರೆ ಎಂದು ವಾಟಾಳ್ ನಾಗರಾಜ್ ಟೀಕಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









