ಕೊರೊನಾ ವೈರಸ್ ಹರಡುವಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ದೇಶ ಸಂಪೂರ್ಣ ಲಾಕ್ ಡೌನ್ ಆಗಿದೆ. ನಿನ್ನೆ ರಾತ್ರಿ ಈ ವಿಚಾರ ಘೋಷಣೆ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಕ್ಯಾಬಿನೆಟ್ ಸಭೆ ನಡೆಸಿದ್ದಾರೆ. ದೇಶವು 21 ದಿನಗಳ ಕಾಲ ಬಂದ್ ಇರುತ್ತದೆ. ಈ ಕುರಿತು ಚರ್ಚಿಸಲು ಇಂದು ದೇಹಲಿಯ 7 ಲೋಕಕಲ್ಯಾಣ ಮಾರ್ಗ್ ದಲ್ಲಿರುವ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಕೊರೊನಾ ಹರುಡುವಿಕೆ ತಡೆಗಟ್ಟಲು ಸಾಮಾಜಿಕ ಅಂತರ ಬಹುಮುಖ್ಯ ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು. ಅದರ ಪ್ರಕಾರ ಮೋದಿ ಮತ್ತು ಅವರ ಸಚಿವ ಸಂಪುಟದ ಸದಸ್ಯರು ನುಡಿದಂತೆ ನಡೆದಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮೋದಿ ಸೇರಿದಂತೆ ಎಲ್ಲಾ ಸಚಿವರು ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದಾರೆ. ಪ್ರತಿಯೊಬ್ಬ ಸಚಿವರು ಎರಡು ಅಡಿ ದೂರದಷ್ಟು ಕುಳಿತು ಸಭೆಯಲ್ಲಿ ಭಾಗಿಯಾಗಿದ್ದರು. ಆ ಮೂಲಕ ಇಡಿ ಕ್ಯಾಬಿನೆಟ್ ಸಾಮಾಜಿಕ ಅಂತರ ಕಾಪಾಡಿಕೊಂಡಿದೆ.
ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ
ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...








