===ಕೊರೊನಾ ವ್ಯಾಕ್ಸಿನ್, ಸೋಂಕಿನ ಸ್ಥಿತಿಗತಿ ಬಗ್ಗೆ ಚರ್ಚೆ===
ನವದೆಹಲಿ: ಕರ್ನಾಟಕ ಸೇರಿದಂತೆ ಅತಿಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ದೇಶದ ಪ್ರಮುಖ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಕೆಲವೇ ಕ್ಷಣಗಳಲ್ಲಿ ಪ್ರಧಾನಿ ವಿಡಿಯೋ ಸಂವಾದ ನಡೆಸಲಿದ್ದಾರೆ.
ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರಧಾನಿ ಮೋದಿ ಜತೆಗೆ ನಡೆಯುವ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ರಾಜ್ಯದಲ್ಲಿರುವ ಕೊರೊನಾ ಸೋಂಕಿತ ಸ್ಥಿತಿಗತಿ, ಲಸಿಕೆ ತಯಾರಿಕೆಯ ಹಂತಗಳು, ಒಂದು ವೇಳೆ ಕೊರೊನಾ ಲಸಿಕೆ ಬಿಡುಗಡೆಯಾದರೆ ಸಂಗ್ರಹಕ್ಕೆ ಮಾಡಿಕೊಂಡಿರುವ ವ್ಯವಸ್ಥೆ, ಮೊದಲು ಲಸಿಕೆ ಯಾರಿಗೆ ನೀಡಬೇಕು ಇತ್ಯಾದಿ ಸಿದ್ಧತೆಗಳ ಬಗ್ಗೆ ಸಿಎಂ ಯಡಿಯೂರಪ್ಪ ಅವರಿಂದ ಮೋದಿ ಮಾಹಿತಿ ಪಡೆದುಕೊಳ್ಳಲಿದ್ದಾರೆ.
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ದೆಹಲಿ, ಗುಜರಾತ್, ಹರಿಯಾಣ, ರಾಜಸ್ಥಾನ, ಕೇರಳ, ಪಶ್ಚಿಮ ಬಂಗಾಳ ಮತ್ತಿತರ ರಾಜ್ಯಗಳ ಮುಖ್ಯಮಂತ್ರಿಗಳ ಜತೆಗೂ ಮೋದಿ ಚರ್ಚೆ ನಡೆಸಲಿದ್ದಾರೆ.
ದೇಶದಲ್ಲಿ ತಯಾರಾಗುತ್ತಿರುವ ಕೊರೊನಾ ಲಸಿಕೆ ಯಾವ ಹಂತದಲ್ಲಿದೆ? ಯಾವಾಗ ಅದು ಜನರ ಉಪಯೋಗಕ್ಕೆ ಸಿಗಬಹುದು? ಎರಡನೇ ಅಥವಾ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಗಳು ಹೇಗೆ ನಡೆಯುತ್ತಿವೆ? ಲಸಿಕೆ ಲಭ್ಯವಾದ ಬಳಿಕ ಅದರ ವಿತರಣೆ ಹೇಗಿರಬೇಕೆಂದು ಎಂಬುದರ ಬಗ್ಗೆ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಜತೆಗೆ, ದೆಹಲಿ, ಹರಿಯಾಣ, ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಕೊರೊನಾ 2ನ ಅಲೆ ಹರಡುತ್ತಿದ್ದು, ಸೋಂಕು ತಡೆ ಹಗೂ ಚಿಕಿತ್ಸೆ ಸಂಬಂಧ ಸರ್ಕಾರಗಳು ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆಯಲಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel