ADVERTISEMENT
Sunday, August 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿಎಂ ಯಡಿಯೂರಪ್ಪ ಆಧುನಿಕ ಕಾಲದ ಬಸವಣ್ಣ; ಬಿಎಸ್‍ವೈ ಹಾಡಿಹೊಗಳಿದ ರೇಣುಕಾಚಾರ್ಯ..!

Kariyappa N by Kariyappa N
November 24, 2020
in Newsbeat, Politics, Samagra karnataka, ರಾಜ್ಯ
bsy praises
Share on FacebookShare on TwitterShare on WhatsappShare on Telegram

ದಾವಣಗೆರೆ: ಸಚಿವ ಸ್ಥಾನಕ್ಕೆ ತೀವ್ರ ಲಾಬಿ ನಡೆಸುತ್ತಿರುವ ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಆಧುನಿಕ ಕಾಲದ ಬಸವಣ್ಣ ಎಂದು ಹಾಡಿ ಹೊಗಳಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಯಡಿಯೂರಪ್ಪ ಜನರ ಧ್ವನಿಯಾಗಿ ಎಲ್ಲ ಸಮುದಾಯದವರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಸಾಮಾಜಿಕ ನ್ಯಾಯ ಕೊಡಿಸುತ್ತಿರುವ ಯಾರಾದರೂ ಒಬ್ಬ ನಾಯಕರಿದ್ದಾರೆ ಎಂದರೆ ಅವರು ಯಡಿಯೂರಪ್ಪ ಮಾತ್ರ ಎಂದರು.


ಅಂದು 12ನೇ ಶತಮಾನದಲ್ಲಿ ಬಸಣ್ಣನವರು ಸಾಮಾಜಿಕ ನ್ಯಾಯ ಕೊಡಿಸಿದ್ದರು. ಇಂದು 21ನೇ ಶತಮಾನದಲ್ಲಿ ಯಡಿಯೂರಪ್ಪ ಅವರು ಎಲ್ಲಾ ಸಮುದಾಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರು ಆಧುನಿಕ ಕಾಲದ ಬಸವಣ್ಣ ಬಣ್ಣಿಸಿದ್ದಾರೆ.

Related posts

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

August 30, 2026
‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಾಲ್ಮೀಕಿ ನಿಗಮ ಹಗರಣ: ‘ಬಿ. ನಾಗೇಂದ್ರರನ್ನು ಬಿಜೆಪಿ ಷಡ್ಯಂತ್ರದಿಂದ ಗುರಿಯಾಗಿಸಿದೆ’ ಎಂದ BK ಹರಿಪ್ರಸಾದ್

August 30, 2026

ಸಚಿವ ಸ್ಥಾನಕ್ಕಾಗಿ ವರಿಷ್ಠ ಭೇಟಿ
ದಾವಣಗೆರೆ ಜಿಲ್ಲೆ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದೆ. ಪ್ರಾದೇಶಿಕ ಅಸಮತೋಲನ ಜತೆಗೆ ದಾವಣಗೆರೆ ಜಿಲ್ಲೆ ಸಚಿವ ಸ್ಥಾನದಿಂದಲೂ ವಂಚಿತವಾಗಿದೆ. ಹೀಗಾಗಿ ದಾವಣಗೆರೆ ಜಿಲ್ಲೆಯ ಸಚಿವ ಸ್ಥಾನ ನೀಡಬೇಕೆಂದು ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಮುಖ್ಯಮಂತ್ರಿ ಯಡಿಯೂರಪ್ಪ, ದೆಹಲಿಯಲ್ಲಿ ಕೇಂದ್ರ ಸಚಿವರು, ಬಿ.ಎಲ್ ಸಂತೋಷ್ ಸೇರಿದಂತೆ ಪಕ್ಷದ ವರಿಷ್ಠರು ಹಾಗೂ ಸಂಘ ಪರಿವಾರದ ಪ್ರಮುಖರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ ಎಂದು ರೇಣುಕಾಚಾರ್ಯ ಸ್ಪಷ್ಟಪಡಿಸಿದ್ದಾರೆ.

ಯತ್ನಾಳ್ ವಿರುದ್ಧ ಅಸಮಾಧಾನ
ಮಾಜಿ ಕೇಂದ್ರ ಸಚಿವರು ಹಾಗೂ ಶಾಸಕರೂ ಆಗಿರುವ ಬಸನಗೌಡ ಪಾಟೀಲ್ ಯತ್ನಾಳ್, ಸಿಎಂ ಯಡಿಯೂರಪ್ಪ ಅವರ ಬಗ್ಗೆ ಹಾದಿ ಬೀದಿಯಲ್ಲಿ ಏಕ ವಚನದಲ್ಲಿ ಮಾತನಾಡುವುದು ಎಷ್ಟು ಸರಿ. ಇದರಿಂದ ಪಕ್ಷದ ವರ್ಚಸ್ಸು, ಮುಖ್ಯಮಂಂತ್ರಿಗಳು ಹಾಗೂ ಅವರ ವರ್ಚಸ್ಸು ಕಡಿಮೆ ಆಗುತ್ತದೆ ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಬಸ್‍ನ ಸೀಟಿನಲ್ಲಿ ಟವಲ್ ಹಾಕುವುದು ಸಾಮಾನ್ಯ, ಸಿಎಂ ಸ್ಥಾನಕ್ಕೆ ಟವೆಲ್ ಹಾಕಲಾಗುವುದೇ ಎಂದ ರೇಣುಕಾಚಾರ್ಯ, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಯಾರು ಅಸೆ ಇಟ್ಟುಕೊಂಡಿದ್ದಾರೆ ಅವರಿಗೆ ನಿರಾಸೆ ಆಗುತ್ತದೆ. ನಾಯಕತ್ವ ಬದಲಾವಣೆ ಮಾಡುವುದೇ ಆದರೆ, ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷರು ಕುಳಿತು ತೀರ್ಮಾನ ಮಾಡುತ್ತಾರೆ ಎಂದರು.

ಕನ್ನಡ ಸಂಘಟನೆಗಳ ವಿರುದ್ಧ ಕಿಡಿ
ಮರಾಠಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿರುವ ಸರ್ಕಾರದ ವಿರುದ್ಧ ಕರ್ನಾಟಕ ಬಂದ್‍ಗೆ ಕರೆ ನೀಡಿರುವ ಕನ್ನಡ ಸಂಘಟನೆಗಳ ವಿರುದ್ಧ ಕಿಡಿಕಾರಿದ ರೇಣುಕಾಚಾರ್ಯ, ಬೆಳಗಾವಿಯ ಗಡಿಭಾಗದಲ್ಲಿ ಗಡಿತಂಟೆ ಮಾಡುವುದನ್ನು ಖಂಡಿಸುತ್ತೇವೆ. ಆದರೆ, ನಾವು ಮರಾಠಿ ಭಾಷೆಗೆ ಆದ್ಯತೆ ಕೊಡುತ್ತಿಲ್ಲ, ಕನ್ನಡ ಭಾಷೆಯನ್ನು ಪ್ರೀತಿಸುವ, ಗೌರವಿಸುವ ಮರಾಠಿಗರಿಗೆ ಆದ್ಯತೆ ಕೊಡುತ್ತಿದ್ದೇವೆ. ವಿಕೃತಿ ಮನಸ್ಸಿನವರು ಯತ್ನಾಳ್ ಫೋಟೋ ಗೆ ಚಪ್ಪಲಿ ಹೊಡೆದದ್ದು ಯಾವ ಸಂಸ್ಕøತಿ. ನಾನು ಬೂಟಾಟಿಕೆ, ಡೊಂಬರಾಟ ಮಾಡಲ್ಲ, ಪ್ರಚಾರಕ್ಕಾಗಿ ಹೋರಾಟ ಮಾಡಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: cabinet lobbyChief Minister BS Yeddyurappamodern BasavannaMP Renukacharya
ShareTweetSendShare
Join us on:

Related Posts

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

by Shwetha
August 30, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಾಲ್ಮೀಕಿ ನಿಗಮ ಹಗರಣ: ‘ಬಿ. ನಾಗೇಂದ್ರರನ್ನು ಬಿಜೆಪಿ ಷಡ್ಯಂತ್ರದಿಂದ ಗುರಿಯಾಗಿಸಿದೆ’ ಎಂದ BK ಹರಿಪ್ರಸಾದ್

by Shwetha
August 30, 2026
0

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರ ಇದೀಗ ರಾಜ್ಯ...

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

by Shwetha
August 30, 2026
0

ಭಾರತೀಯ ಕಾರ್ಪೊರೇಟ್ ವಲಯದಲ್ಲಿ ದಶಕಗಳಿಂದ ಕುತೂಹಲ ಮೂಡಿಸಿರುವ ಟಾಟಾ ಸನ್ಸ್ ಮತ್ತು ಶಾಪೂರ್ಜಿ ಪಲ್ಲೊಂಜಿ (SP) ಗ್ರೂಪ್ ನಡುವಿನ ಸಂಬಂಧದ ಬಿಕ್ಕಟ್ಟು ಇದೀಗ ಮತ್ತೊಂದು ಪ್ರಮುಖ ಹಂತ...

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

by Shwetha
August 30, 2026
0

ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಜೀವನ ಪಯಣವನ್ನು ಅನಾವರಣಗೊಳಿಸುವ Belonging: A Journey of Love ಎಂಬ ಆತ್ಮಚರಿತ್ರೆ ಈಗ...

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

by Shwetha
August 30, 2026
0

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಬೆನ್ನಿಗೆ ನಿಂತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಬಿಜೆಪಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram