dehli chalo
ಕೇಂದ್ರ ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ : ದೇಶಾದ್ಯಂತ ಅನ್ನದಾತರಿಂದ ದೆಹಲಿ ಚಲೋ..!
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರೋಧಿಸಿ ದೇಶಾದ್ಯಂತದ ರೈತರು ದೆಹಲಿ ಚಲೋ ಚಳುವಳಿ ಆರಂಭಿಸಿದ್ದಾರೆ. ಈ ಹಿನ್ನೆಲೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ಇತ್ತ ಹರಿಯಾಣ ಸರ್ಕಾರದ ಆದೇಶದಂತೆ ಪಂಜಾಬ್ ಗಡಿಯನ್ನು ಬಂದ್ ಮಾಡಲಾಗಿದೆ. ಇತ್ತ ಮುಂಜಾಗ್ರತಾ ಕ್ರಮವಾಗಿ ದೆಹಲಿಯಲ್ಲಿ ಮೆಟ್ರೋ ಸೇವೆ ಬಂದ್ ಮಾಡಲಾಗಿದೆ.
ಪಂಜಾಬ್-ಹರ್ಯಾಣ ಗಡಿಯ ಶಂಭು ಎಂಬಲ್ಲಿ ರೈತರು ಗುಂಪು ಸೇರಿ ದೆಹಲಿ ಚಲೋ ಆರಂಭಿಸಿ ಪೊಲೀಸ್ ಬ್ಯಾರಿಕೇಡ್ ತೆಗೆದು ನುಗ್ಗಲು ಪ್ರಯತ್ನಿಸುತ್ತಿದ್ದರು. ಆಗ ಹರ್ಯಾಣ ಪೊಲೀಸರು ಧ್ವನಿವರ್ಧಕ ಮೂಲಕ ಪ್ರತಿಭಟನಾಕಾರರಿಗೆ ಎಚ್ಚರಿಸುತ್ತಿದ್ದರು. ಈ ವೇಳೆ ಹರ್ಯಾಣ-ಪಂಜಾಬ್ ಶಂಭು ಅಂತರಾಜ್ಯ ಗಡಿಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಪ್ರತಿಭಟನಾ ನಿರತ ರೈತರು ಗಗ್ಗರ್ ನದಿಗೆ ಎಸೆಯಲು ನೋಡಿದರು. ಕೆಲವರು ಕಪ್ಪು ಬಾವುಟ ಪ್ರದರ್ಶಿಸುತ್ತಿದ್ದರು.
2008ರ ಮುಂಬೈ ಉಗ್ರ ದಾಳಿಗೆ ಇಂದಿಗೆ 12 ವರ್ಷ: ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಾಥ್ ಕೊಟ್ಟ ಅಮೆರಿಕಾ..!
ಪ್ರತಿಭಟನಾಕಾರರು ದೆಹಲಿಗೆ ತೆರಳದಂತೆ ಹರ್ಯಾಣ ಪೊಲೀಸರು ಹಲವು ಹಂತಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿದ್ದರು. ಇನ್ನು ದೆಹಲಿಯ ಯಾವುದೇ ನಗರದಲ್ಲಿ ಯಾವುದೇ ಪ್ರತಿಭಟನಾ ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎಂದು ದೆಹಲಿ ಸರ್ಕಾರ ಸ್ಪಷ್ಟಪಡಿಸಿದೆ. ಹೀಗಾಗಿ ಗುರುಗ್ರಾಮ ಮತ್ತು ಫರೀದಾಬಾದ್ ಗಡಿ ಭಾಗಗಳಲ್ಲಿ ಭಾರಿ ಭದ್ರತೆ ಕಲ್ಪಿಸಲಾಗಿದೆ.
ಸದ್ಯ ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದ್ದು, ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯೆತೆಯಿದೆ. ನೂತನ ಕೃಷಿ ಕಾನೂನಿನ ವಿರುದ್ಧ ರೈತರ ಆಕ್ರೋಶ ಮುಗಿಲು ಮುಟ್ಟಿದೆ.
dehli chalo
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel