ಬಿಎಸ್ ವೈ, ಸಿದ್ದರಾಮಯ್ಯ ಮಕ್ಕಳು ರಾಜಕಾರಣದಲ್ಲಿಲ್ವಾ : ನಿಖಿಲ್ ಖಡಕ್ ಮಾತು
ಮಂಡ್ಯ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಕ್ಕಳು ರಾಜಕಾರಣ ಮಾಡ್ತಿಲ್ವಾ..? ಸಿದ್ದರಾಮಯ್ಯ ಮಕ್ಕಳು ರಾಜಕಾರಣದಲ್ಲಿಲ್ವಾ..? ಎಂದು ಕುಟುಂಬ ರಾಜಕಾರಣ ಕುರಿತಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದೇವೇಗೌಡರು ಕುಟುಂಬ ರಾಜಕಾರಣ ಮಾಡುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿ, ಯಡಿಯೂರಪ್ಪರ ಮಕ್ಕಳು ರಾಜಕಾರಣ ಮಾಡ್ತಿಲ್ವಾ, ಸಿದ್ದರಾಮಯ್ಯ ಮಕ್ಕಳು ರಾಜಕಾರಣದಲ್ಲಿಲ್ವ..?
ಅವರಿಗೂ ಪ್ರಶ್ನೆ ಮಾಡಬೇಕಾಗುತ್ತೆ. ನಾವು ಜನಗಳ ಜೊತೆ ಬೆರಿತೀವಿ, ಇರ್ತಿವಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ರೈತರನ್ನು ಗೌರದಿಂದ ನೋಡಿ, ಸಮಸ್ಯೆ ಬಗ್ಗೆ ಕುಳಿತು ಚರ್ಚೆ ಮಾಡಿ: ಮೋದಿಗೆ ಗೌಡರ ಕಿವಿಮಾತು..!
ಇದೇ ವೇಳೆ ನಾಗಮಂಗಲ ಕ್ಷೇತ್ರದ ಮುಂದಿನ ಜೆಡಿಎಸ್ ಅಭ್ಯರ್ಥಿ ಕುರಿತಾಗಿ ಎದ್ದಿರುವ ಗೊಂದಲ ಬಗ್ಗೆ ಮಾತನಾಡಿ, ನಾನು ಬಹಳ ಸ್ಪಷ್ಟವಾಗಿ ಹೇಳುತ್ತೇನೆ, ನಮ್ಮ ಪಕ್ಷದ ತೀರ್ಮಾನ.
ರಾಷ್ಟ್ರೀಯ ಅಧ್ಯಕ್ಷ ಕುಮಾರಣ್ಣ, ಕಾರ್ಯಕರ್ತರ ತೀರ್ಮಾನವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಸುರೇಶ್ ಗೌಡ ಅವರನ್ನು ಆಯ್ಕೆ ಮಾಡಲಾಗುತ್ತದೆ.
ಈ ವಿಚಾರದಲ್ಲಿ ಯಾವುದೇ ಗೊಂದಲ ಸೃಷ್ಟಿ ಮಾಡಲು ನಾವು ಬಿಡುವುದಿಲ್ಲ ಎಂದು ಹೇಳಿದರು. ಒಂದು ರಾಷ್ಟ್ರಕ್ಕೆ ಒಂದೇ ಚುನಾವಣೆ ಏಕಾಗಬಾರದು: ಮತ್ತೆ ಚರ್ಚೆ ಹುಟ್ಟುಹಾಕಿದ ಪ್ರಧಾನಿ ಮೋದಿ..!
ಇನ್ನು ರಾಜಕೀಯಕ್ಕೆ ರೀ ಎಂಟ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಶಾಸಕ ಆಗಬೇಕೆಂದು ಹುಚ್ಚು ಹಿಡಿಸಿಕೊಂಡಿದ್ರೇ ಯಾವತ್ತೋ ರಾಜಕಾರಣಕ್ಕೆ ನುಗ್ಗುತ್ತಿದೆ.
ಎಷ್ಟೋ ಜನ ನಮ್ಮ ತಂದೆ ಹೆಸರಲ್ಲಿ ಶಾಸಕರಾಗಿದ್ದಾರೆ. ನಾನು 10 ವರ್ಷದ ಹಿಂದೆಯೇ ಶಾಸಕ ಆಗಿಬಿಡ್ತಿದ್ದೆನೇನೋ. ಸಿನಿಮಾ ರಂಗದಲ್ಲಿ ನನ್ನನ್ನ ನಾನು ತೊಡಗಿಸಿಕೊಂಡಿದ್ದೇನೆ.
ನನಗೆ ಒಂದು ಪ್ಯಾಷನ್ ಇತ್ತು, ಅದನ್ನು ಮುಂದುವರಿಸುತ್ತೇನೆ ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel