ಸಿಎಂ ನಮ್ಮನ್ನು ಮಂತ್ರಿ ಮಾಡಲು ನಿರ್ಧಾರ ಮಾಡಿಲ್ಲ : ಎಂಟಿಬಿ ಅಸಮಾಧಾನ
ಬೆಂಗಳೂರು : ಸಚಿವಸ್ಥಾನ ವಿಚಾರವಾಗಿ ಸಚಿವಾಕಾಂಕ್ಷಿ ವಿಧಾನಪರಿಷತ್ ಸದ್ಯಸ ಎಂಟಿಬಿ ನಾಗರಾಜ್ ಅವರು ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿದ್ದಾರೆ.
ಸಂಪುಟ ವಿಸ್ತರಣೆ/ ಪುನರ್ ರಚನೆಯಲ್ಲಿ ಸರ್ಕಾರ ನಿರತವಾಗಿದೆ. ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆ ವಿಚಾರವಾಗಿ ಸರ್ಕಸ್ ನಡೆಸುತ್ತಲೇ ಇದ್ದಾರೆ. ಬಿಎಸ್ ವೈ, ಸಿದ್ದರಾಮಯ್ಯ ಮಕ್ಕಳು ರಾಜಕಾರಣದಲ್ಲಿಲ್ವಾ : ನಿಖಿಲ್ ಖಡಕ್ ಮಾತು
ಇತ್ತ ಪಕ್ಷದಲ್ಲಿ ಮೂಲ – ವಲಸೆ ಬಿಜೆಪಿಗರ ಮಧ್ಯೆ ಭಿನ್ನಮತ ಭುಗಿಲೆದ್ದಿದೆ. ಮೂಲ ಬಿಜೆಪಿ ಶಾಸಕರು ಯಾವುದೇ ಕಾರಣಕ್ಕೂ ಮಂತ್ರಿ ಸ್ಥಾನ ನೀಡಬಾರದೆಂದು ಪಟ್ಟು ಹಿಡಿದಿದ್ದರೇ, ವಲಸಿಗರು ಕೊಟ್ಟ ಮಾತು ಉಳಿಸಿಕೊಳ್ಳಿ ಎಂದು ಓಡಾಡುತ್ತಿದ್ದಾರೆ.
ಇದರ ಮಧ್ಯೆ ಸಂಪುಟ ವಿಸ್ತರಣೆ ವಿಚಾರವಾಗಿ ಎಂಟಿಬಿ ನಾಗರಾಜ್ ಮಾತನಾಡಿ, ಸಿಎಂ ಬಿ.ಎಸ್.ಯಡಿಯೂರಪ್ಪ ನಮ್ಮನ್ನು ನೋಡಿದ ಕೂಡಲೇ ಮಂತ್ರಿ ಮಾಡ್ತೀನಿ ಅಂತಾರೆ, ಆದರೆ ಸಿಎಂ ನಮ್ಮನ್ನು ಮಂತ್ರಿ ಮಾಡಲು ನಿರ್ಧಾರ ಮಾಡಿಲ್ಲ ಎಂದು ಎಂಟಿಬಿ ನಾಗರಾಜ್ ಅಸಮಾಧಾನ ಹೊರಹಾಕಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದಗಲೆಲ್ಲ ಮಂತ್ರಿ ಮಾಡ್ತೀನಿ ಅಂತಾರೆ. ಒಂದು ರಾಷ್ಟ್ರಕ್ಕೆ ಒಂದೇ ಚುನಾವಣೆ ಏಕಾಗಬಾರದು: ಮತ್ತೆ ಚರ್ಚೆ ಹುಟ್ಟುಹಾಕಿದ ಪ್ರಧಾನಿ ಮೋದಿ..!
ಆದರೆ ನಮ್ಮನ್ನು ಮಂತ್ರಿ ಮಾಡಲು ಸಿಎಂ ಇನ್ನೂ ನಿರ್ಧಾರ ಮಾಡಿಲ್ಲ. ಯಡಿಯೂರಪ್ಪ ಅವರು ಯಾರನ್ನೂ ಬೇಕಾದರೂ ಮಂತ್ರಿ ಮಾಡಿಕೊಳ್ಳಲಿ, ತ್ಯಾಗ ಮಾಡಿ ಬಂದಿರುವ ನಮಗೆ ಮೊದಲು ಮಂತ್ರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel