dehli chalo
ದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ಪ್ರಯೋಗ..!
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆ ವಿರುದ್ಧ ಇಡೀ ದೇಶಾದ್ಯಂತ ರೈತರು ಸಿಡಿದೆದ್ದಿದ್ದಾರೆ. ಹೀಗಾಗಿ ದೆಹಲಿ ಚಲೋಗೆ ಕರೆ ನೀಡಿರುವ ರೈತರ ಪ್ರತಿಭಟನೆ ಇದೀಗ ಉಗ್ರ ಸ್ವರೂಪ ತಾಳಿದೆ.
ಪಂಚಾಬ್ ರೈತರು ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆ ತಡೆಯಲು ಪೊಲೀಸರು ಹರಸಾಹಸ ಪಡ್ತಿದ್ದಾರೆ. ಪರಿಸ್ಥಿತಿ ನಿಯಂತ್ರಕ್ಕೆ ಪ್ರತಿಭಟನಾ ನಿರತ ರೈತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಬಳಸಿದ್ದಾರೆ. ಅಲ್ಲದೆ, ಸ್ಟೇಡಿಯಂನ್ನು ತಾತ್ಕಾಲಿಕ ಜೈಲಾಗಿ ಮಾರ್ಪಡಿಸಲು ಪೊಲೀಸರು ದೆಹಲಿ ಸರ್ಕಾರದ ಅನುಮತಿಯನ್ನು ಕೋರಿದ್ದಾರೆ.
ಕೊರೋನಾ ಸಾಂಕ್ರಾಮಿಕ ರೋಗ ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಯಾವುದೇ ರ್ಯಾಲಿ ಹಾಗೂ ಧರಣಿ ನಡೆಸಲು ಅನುಮತಿಯಿಲ್ಲ. ಅನುಮತಿ ನಿರಾಕರಿಸಿದ್ದರೂ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರು ದೆಹಲಿ ಪ್ರವೇಶಿಸಲು ಮರಳಿ ಯತ್ನ ನಡೆಸಿದ್ದೇ ಆದರೆ, ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಇತ್ತ ದೆಹಲಿ-ಹರಿಯಾಣ ಗಡಿ ಭಾಗದಲ್ಲಿ ರೈತರನ್ನು ತಡೆಯಲು ಪೊಲೀಸರು ಅಶ್ರುವಾಯು ಬಳಸಿದ್ದಾರೆಂದು ಹೇಳಲಾಗ್ತಿದೆ. ಈ ನಡುವೆ ದೆಹಲಿ ಹಾಗೂ ಹರಿಯಾಣ ಗಡಿ ಭಾಗಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ರೈತರು ಗಡಿ ಪ್ರವೇಶಿಸಲು ಮುಂದಾಗಿದ್ದೇ ಆದರೆ, ಚದುರಿಸಲು ಜಲಫಿರಂಗಿ ವಾಹನಗಳನ್ನು ಸಿದ್ಧಪಡಿಸಿ ನಿಲ್ಲಿಸಲಾಗಿದೆ,
26/11ರ ಮುಂಬೈ ದಾಳಿಯ ರುವಾರಿ ಹಫೀಜ್ ಜೈಲಿನಲ್ಲೇ ಇಲ್ಲ..!
ಮತ್ತೊಂದೆಡೆ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯ 9 ಕ್ರೀಡಾಂಗಣಗಳನ್ನು ಕಾರಾಗೃಹಗಳನ್ನಾಗಿ ಪರಿವರ್ತಿಸಲು ಪೊಲೀಸರು ದೆಹಲಿ ಸರ್ಕಾರದ ಅನುಮತಿ ಕೋರಿದ್ದಾರೆ. ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಸದಸ್ಯರು ಅಮೃತಸರದಿಂದ ದೆಹಲಿಗೆ ಹೊರಡಲು ತಯಾರಿ ನಡೆಸಿದ್ದಾರೆ. ಇತ್ತ ಮುಂಜಾಗ್ರತಾ ಕ್ರಮವಾಗಿ ದೆಹಲಿಯ ಹಲವು ಮೆಟ್ರೊ ರೈಲು ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ. ಕೆಲವೆಡೆ ಹೆಚ್ಚುವರಿ ಪೊಲೀಸರನ್ನ ಭದ್ತೆಗಾಗಿ ನಿಯೋಜನೆ ಮಾಡಲಾಗಿದೆ.
ಅನ್ನದಾತರ ಕೂಗು ಕೇಂದ್ರಕ್ಕೆ ಕೇಳಿಸುತ್ತಿಲ್ಲ, ಕೇಳುವ ತಾಳ್ಮೆಯೂ ಇಲ್ಲ : ಪ್ರಿಯಾಂಕಾ ವಾದ್ರಾ..!
dehli chalo
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel