ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯುಎಇನಲ್ಲಿ ನಿರಾಸೆ.. ಸಿಡ್ನಿಯಲ್ಲಿ ಮಂದಹಾಸ ಬೀರಿದ ಆಸೀಸ್ ಬ್ಯಾಟ್ಸ್ ಮೆನ್ ಗಳು..!

admin by admin
November 28, 2020
in Newsbeat, Sports, ಕ್ರೀಡೆ
stewe smith austrelia saakshatv
Share on FacebookShare on TwitterShare on WhatsappShare on Telegram

ಯುಎಇನಲ್ಲಿ ನಿರಾಸೆ.. ಸಿಡ್ನಿಯಲ್ಲಿ ಮಂದಹಾಸ ಬೀರಿದ ಆಸೀಸ್ ಬ್ಯಾಟ್ಸ್ ಮೆನ್ ಗಳು..!

aron finch austrelia saakshatvಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿದೆ. ಆಸ್ಟ್ರೇಲಿಯಾದ 374 ರನ್ ಗಳಿಗೆ ಉತ್ತರವಾಗಿ ವಿರಾಟ್ ಕೊಹ್ಲಿ ಪಡೆ ಗಳಿಸಿದ್ದು 308 ರನ್. ಈ ಮೂಲಕ ಮೂರು ಏಕದಿನ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 66 ರನ್ ಗಳಿಂದ ಪರಾಭವಗೊಂಡಿದೆ.
ಅಷ್ಟಕ್ಕೂ ಟೀಮ್ ಇಂಡಿಯಾದ ಸೋಲಿಗೆ ಕಾರಣಗಳು ಏನೇನು ? ವಿರಾಟ್ ಪಡೆ ಎಡವಿದ್ದು ಎಲ್ಲಿ ? ಈ ಪ್ರಶ್ನೆಗಳಿಗೆ ಉತ್ತರನೂ ಅಷ್ಟೇ ಸಿಂಪಲ್. ಆಸ್ಟ್ರೇಲಿಯಾ ಸಿಕ್ಕ ಅವಕಾಶವನ್ನು ಸರಿಯಾಗಿಯೇ ಬಳಸಿಕೊಂಡಿತ್ತು. ಟೀಮ್ ಇಂಡಿಯಾದ ಬೌಲರ್ ಗಳು ದುಬಾರಿಯಾದ್ರು.. ಹಾಗೇ ವಿರಾಟ್ ಪಡೆಯ ಪ್ರಮುಖ ಬ್ಯಾಟ್ಸ್ ಮೆನ್ ಗಳು ಅಬ್ಬರಿಸಲು ವಿಫಲರಾದ್ರು.. ಹೀಗೆ ಹೇಳಬಹುದು.
ಆದ್ರೆ ವಿರಾಟ್ ಕೊಹ್ಲಿಯ ಪ್ರಕಾರ ಟೀಮ್ ಇಂಡಿಯಾ ಆಟಗಾರರ ಬಾಡಿ ಲಾಂಗ್ವೇಜ್ ಸರಿಯಾಗಿ ಇರಲಿಲ್ಲ. 25 ಓವರ್ ಗಳ ನಂತರ ಬೌಲರ್ ಗಳು ತುಂಬಾನೇ ದುಬಾರಿಯಾಗಿಬಿಟ್ಟರು. ಪಂದ್ಯದ ಮೇಲಿನ ಹಿಡಿತವೂ ಕೈತಪ್ಪಿ ಹೋಗಿತ್ತು ಅಂತ ಹೇಳ್ತಾರೆ.
ಆದ್ರೆ ಆಸ್ಟ್ರೇಲಿಯಾ ಆಟಗಾರರು ಪಕ್ಕಾ ಗೇಮ್ ಪ್ಲಾನ್ ಮಾಡಿಕೊಂಡು ಅಂಗಣಕ್ಕೆ ಇಳಿದಿದ್ದರು. ವಿರಾಟ್ ಪಡೆಯ ವೇಗಿಗಳು ಮತ್ತು ಸ್ಪಿನ್ನರ್ ಗಳು ಟಾರ್ಗೆಟ್ ಮಾಡಿಕೊಂಡ ಆಸೀಸ್ ಬ್ಯಾಟ್ಸ್ ಮೆನ್ ಗಳು ಯಶ ಕೂಡ ಸಾಧಿಸಿದ್ದರು.
ಟೀಮ್ ಇಂಡಿಯಾದ ಪರ ಮಹಮ್ಮದ್ ಶಮಿ 59 ರನ್ ಗೆ ಮೂರು ವಿಕೆಟ್ ಕಬಳಿಸಿದ್ದರು. ಇದನ್ನು ಹೊರತುಪಡಿಸಿ ಬೂಮ್ರಾ 73 ರನ್ ನೀಡಿದ್ರೆ, ನವದೀಪ್ ಸೈನಿ 83 ರನ್, ಯುಜುವೇಂದ್ರ ಚಾಹಲ್ 89 ರನ್ ಹಾಗೂ ರವೀಂದ್ರ ಜಡೇಜಾ 63 ರನ್ ನೀಡಿದ್ದರು.
ಅಂದ ಹಾಗೇ, ಟೀಮ್ ಇಂಡಿಯಾದ ಬೌಲರ್ ಗಳ ಬೆವರಳಿಸಿದ್ದು ಆಸೀಸ್‍ನ ಸ್ಟಾರ್ ಬ್ಯಾಟ್ಸ್ ಮೆನ್ ಗಳು. ನಾಯಕ ಆರೋನ್ ಫಿಂಚ್, ಸ್ಟೀವನ್ ಸ್ಮಿತ್ ಹಾಗೂ ಗ್ಲೇನ್ ಮ್ಯಾಕ್ಸ್ ವೆಲ್. ಆರಂಭಿಕ ಡೇವಿಡ್ ವಾರ್ನರ್ 69 ರನ್ ಗಳಿಸಿದ್ರು.
ಇದನ್ನು ಬಿಟ್ಟು ಐಪಿಎಲ್ ನಲ್ಲಿ ನೀರಸ ಪ್ರದರ್ಶನ ನೀಡಿದ್ದ ಆರೋನ್ ಫಿಂಚ್ ಆಕರ್ಷಕ 114 ರನ್ ಗಳಿಸಿದ್ದರು. ಐಪಿಎಲ್ ನಲ್ಲಿ ಆರ್ ಸಿಬಿ ಪರ ಆಡಿದ್ದ ಆರೋನ್ ಫಿಂಚ್ ಅವರ ಬ್ಯಾಟ್ ನಿಂದ ರನ್ ಗಳು ಹರಿದು ಬರಲಿಲ್ಲ. ಆದ್ರೆ ಸಿಡ್ನಿಯಲ್ಲಿ ಆರೋನ್ ಫಿಂಚ್ ತಾಳ್ಮೆಯ ಆಟವನ್ನಾಡಿ ತನ್ನ 17ನೇ ಶತಕದ ಸಂಭ್ರಮದಲ್ಲೂ ತೇಲಾಡಿದ್ರು.
ಇನ್ನು ಸ್ಟೀವನ್ ಸ್ಮಿತ್.. ಐಪಿಎಲ್ ನಲ್ಲಿ ರಾಜಸ್ತಾನ ರಾಯಲ್ಸ್ ತಂಡದ ನಾಯಕ. ಐಪಿಎಲ್ ನಲ್ಲಿ ಸ್ಥಿರ ಪ್ರದರ್ಶನ ನೀಡಲು ವಿಫಲರಾಗಿದ್ದ ಸ್ಟೀವನ್ ಸ್ಮಿತ್ ಸಿಡ್ನಿ ಅಂಗಣದಲ್ಲಿ ಟೀಮ್ ಇಂಡಿಯಾ ಬೌಲರ್ ಗಳಿಗೆ ಮಾರಕವಾಗಿ ಕಾಡಿದ್ರು. ಕೇವಲ 66 ಎಸೆತಗಳಲ್ಲಿ 106 ರನ್ ದಾಖಲಿಸಿದ್ದ ಸ್ಟೀವನ್ ಸ್ಮಿತ್ ಆಸ್ಟ್ರೇಲಿಯಾ ಬೃಹತ್ ಮೊತ್ತ ಪೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Glenn Maxwell  austrelia saakshatvಹಾಗೇ ಗ್ಲೇನ್ ಮ್ಯಾಕ್ಸ್ ವೆಲ್.. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರ ಐಪಿಎಲ್ ನಲ್ಲಿ ಆಡಿದ್ದರು. ಮ್ಯಾಕ್ಸ್‍ವೆಲ್ ತೀರಾ ಕಳಪೆ ಪ್ರದರ್ಶನ ನೀಡಿದ್ದರು. ಆದ್ರೆ ಟೀಮ್ ಇಂಡಿಯಾ ವಿರುದ್ಧ ಮ್ಯಾಕ್ಸ್ ವೆಲ್ ಸವಾರಿ ನಡೆಸಿದ್ರು. ಕೇವಲ 19 ಎಸೆತಗಳಲ್ಲಿ 45 ರನ್ ಕೂಡ ಸಿಡಿಸಿದ್ದರು.
ಹೀಗೆ ಐಪಿಎಲ್ ನಲ್ಲಿ ಫ್ಲಾಫ್ ಆಗಿದ್ದ ಆರೋನ್ ಫಿಂಚ್, ಸ್ಟೀವನ್ ಸ್ಮಿತ್ ಮತ್ತು ಮ್ಯಾಕ್ಸ್ ವೆಲ್ ಟೀಮ್ ಇಂಡಿಯಾದ ವಿರುದ್ಧ ಪ್ರಹಾರ ನಡೆಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇನ್ನು ಆಸ್ಟ್ರೇಲಿಯಾದ 374 ರನ್ ಗಳಿಗೆ ಉತ್ತರವಾಗಿ ಟೀಮ್ ಇಂಡಿಯಾ ದಿಟ್ಟ ಉತ್ತರ ನೀಡಿದ್ರೂ ಪ್ರಮುಖ ಬ್ಯಾಟ್ಸ್ ಮೆನ್ ಗಳು ವೈಫಲ್ಯ ಅನುಭವಿಸಿದ್ದರು.
ಮಯಾಂಕ್ 22 ರನ್ ಗೆ ಸೀಮಿತವಾದ್ರೆ, ಶಿಖರ್ ಧವನ್ 74 ರನ್ ಗಳಿಸಿದ್ರು. ಇನ್ನುಳಿದಂತೆ ವಿರಾಟ್ ಕೊಹ್ಲಿ 21 ರನ್, ಶ್ರೇಯಸ್ ಅಯ್ಯರ್ 2 ರನ್ ಹಾಗೂ ಕೆ.ಎಲ್. ರಾಹುಲ್ 12 ಗೆ ತನ್ನ ಹೋರಾಟವನ್ನು ಮುಗಿಸಿದ್ರು.
ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ 76 ಎಸೆತಗಳಲ್ಲಿ 90 ರನ್ ಸಿಡಿಸಿ ತನ್ನ ಫಾರ್ಮ್ ಅನ್ನು ಮುಂದುರಿಸಿದ್ದಾರೆ.
ಒಟ್ಟಿನಲ್ಲಿ ಟೀಮ್ ಇಂಡಿಯಾ ಮೊದಲ ಏಕದಿನ ಪಂದ್ಯದಲ್ಲಿ ಸೋತಿದೆ. ಇದೀಗ ಮಾಡಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದಿನ ಪಂದ್ಯಕ್ಕೆ ತಯಾರಾಗಬೇಕಿದೆ. ಅಲ್ಲದೆ ಸರಣಿಯನ್ನು ಜೀವಂತವಾಗಿರಿಸಿಕೊಳ್ಳಲು ಮುಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ.

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026
Tags: #Aaron Finch#saakshatv#shikhar dhavan#Steve SmithaustreliaGlenn Maxwellindia -austrelia one day matchIPL 2020team indiavirat kohli
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram