ಕೊಪ್ಪಳ: ಸರ್ಕಾರಿ ಕಚೇರಿಯಲ್ಲೇ ತಮ್ಮ ಅಧೀನದ ಮಹಿಳಾ ಸಿಬ್ಬಂದಿಗೆ ಮುತ್ತುಕೊಟ್ಟಿದ್ದ ಹಿನ್ನೆಲೆಯಲ್ಲಿ ಹಿಂದಿನ ಕುಷ್ಟಗಿ ತಹಶೀಲ್ದಾರ್ ಕೆ.ಎಂ.ಗುರುಬಸವರಾಜ ಅವರನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ.
ಗುರುಬಸವರಾಜ ವಿರುದ್ಧದ ಇಲಾಖಾ ವಿಚಾರಣೆಯನ್ನ ಬಾಕಿಯಿರಿಸಿ ಸೇವೆಯಿಂದ ಅಮಾನತ್ತುಗೊಳಿಸಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ನಾಗರಾಜು ಎಸ್.ಆದೇಶ ಹೊರಡಿಸಿದ್ದಾರೆ.
ಕುಷ್ಟಗಿ ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಮಹಿಳಾ ಗ್ರಾಮ ಲೆಕ್ಕಾಧಿಕಾರಿಯ ಜೊತೆ ಅಶ್ಲೀಲವಾಗಿ ನಡೆದುಕೊಂಡ ವೀಡಿಯೋಯೊಂದು ವೈರಲ್ ಆಗಿತ್ತು.
ಈ ಬಗ್ಗೆ ಕಾರಣ ಕೇಳಿ ನೋಟೀಸ್ ನೀಡಲಾಗಿತ್ತು. ತಹಶೀಲ್ದಾರ ವಿರುದ್ಧ ಕುಷ್ಟಗಿ ಪೆÇಲೀಸ್ ಠಾಣೆಯಲ್ಲಿ ದೂರನ್ನ ಮಹಿಳಾ ಸಿಬ್ಬಂದಿ ನೀಡಿದ್ದರು. ದೂರಿನ ಆಧಾರದ ಮೇಲೆ ಕೆ.ಎಂ.ಗುರುಬಸವರಾಜ ವಿರುದ್ಧ ಐಪಿಸಿ ಸೆಕ್ಷನ್ 354, 354(ಬಿ), 506ಅಡಿ ಎಫ್ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಕೆ.ಎಂ.ಗುರುಬಸವರಾಜ ಅವರನ್ನು ಕರ್ನಾಟಕ ನಾಗರಿಕ ಸೇವೆ(ನಡತೆ) ಅಧಿನಿಯಮ 1966ರ ನಿಯಮ 3(1), (11), (111), 29(ಬಿ) ಉಲ್ಲಂಘಿಸಿರುವುದರಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel