ನಾನು ಕೆಳಮಟ್ಟದ ರಾಜಕೀಯ ಮಾಡಲ್ಲ : ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ ವಿಚಾರಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಅದು ಅವರ ವೈಯಕ್ತಿಕ ಜೀವನದಲ್ಲಿ ನಡೆದಿರುವ ಘಟನೆ. ಇದನ್ನು ರಾಜಕೀಯ ಅಸ್ತ್ರವಾಗಿ ಬಳಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಕುಟುಂಬ ರಾಜಕಾರಣ ಟೀಕೆಗೆ ಡೋಂಟ್ಕೇರ್: ನಿಖಿಲ್, ಪ್ರಜ್ವಲ್ `ಕುಮಾರಣ್ಣನ’ ಟಿಪ್ಸ್ ಏನು..!
ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿಭವನದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ನಾನು ಎನ್ ಆರ್ ಸಂತೋಷ್ ಆತ್ಮಹತ್ಯೆ ವಿಚಾರವನ್ನು ರಾಜಕೀಯ ಅಸ್ತ್ರವಾಗಿ ಬಳಸಲು ಬಯಸುವುದಿಲ್ಲ.
ಅಷ್ಟು ಕೆಳಮಟ್ಟದ ರಾಜಕೀಯ ನಾನು ಮಾಡಲ್ಲ. ಆದರೆ ಬಿಜೆಪಿಯಲ್ಲಿ ಏನು ನಡೆಯುತ್ತಿದೆ ಎಂಬುದು ನನಗೆ ಗೊತ್ತಿದೆ ಎಂದರು. ಡಿಕೆಶಿ, ಹೆಚ್ಡಿಕೆ ಪಿತೂರಿ: ಮುಂದಿದೆ ಮಾರಿಹಬ್ಬ ಎಂದಿದ್ದೇಕೆ `ಸೈನಿಕ’..!
ಇನ್ನು ಸಿಎಂ ಭೇಟಿ ವಿಚಾರವಾಗಿ ಸಿ.ಪಿ.ಯೋಗೇಶ್ವರ್ ಟೀಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆಗೆ ಮನವಿ ಮಾಡಲು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೇನೆ.
ಯಡಿಯೂರಪ್ಪನವರು ರಾಜ್ಯದ ಆರೂವರೆ ಕೋಟಿ ಜನರಿಗೆ ಮುಖ್ಯಮಂತ್ರಿಗಳು, ಅವರೊಬ್ಬರಿಗೆ ಸಿಎಂ ಅಲ್ಲ ಎಂದು ಸಿ.ಪಿ. ಯೋಗೇಶ್ವರ್ ಗೆ ತಿರುಗೇಟು ನೀಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










