ನವದೆಹಲಿ: ಕೊರೊನಾ ಭೀತಿ ಹಿನ್ನೆಲೆ ದೇಶವನ್ನೇ 21 ದಿನಗಳ ಕಾಲ ಲಾಕ್ ಡೌನ್ ಮಾಡಲಾಗಿದೆ. ಮನೆಗಳಿಂದ ಯಾರೂ ಹೊರಬರದಂತೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಕೈ ಮುಗಿದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಸದ್ಯ ಜನರೆಲ್ಲಾ ಮನೆಗಳಿಂದ ಹೊರ ಬರದ ಪರಿಸ್ಥಿತಿಯಲ್ಲಿದ್ದು, ಮನೆಯಲ್ಲೇ ಕುಳಿತು ಸಮಯಕಳೆಯಲಾಗದೆ ಒದ್ದಾಡುತ್ತಿದ್ದಾರೆ. ಹೀಗಾಗಿ ಸರ್ಕಾರವೇ ಡಿಡಿಯಲ್ಲಿ ರಾಮಾಯಣ ಸೀರಿಯಲ್ ಅನ್ನ ರೀ ಟೆಲಿಕಾಸ್ಟ್ ಮಾಡಲು ನಿರ್ಧರಿಸಿದೆ. ಒಂದು ಕಾಲದಲ್ಲಿ ರಾಮಾಯಣ ಸೀರಿಯಲ್ ನೋಡೋಕೆ ಜನರು ಕಾದು ಕುಳಿತಿರುತ್ತಿದ್ದರು. ಯಾವ ಮನೆಯಲ್ಲಿ ಟಿವಿ ಇರ್ತಿತ್ತೋ ಅಲ್ಲಿ ಜಮಾಯಿಸುತ್ತಿದ್ರು.ಸೀರಿಯಲ್ ಪ್ರಸಾರವಾಗುತ್ತಿದ್ದಂತೆ ದೇಶವೇ ಸ್ತಬ್ಧವಾಗುತ್ತಿತ್ತು. ಜನರು ಮನೆಯಲ್ಲೇ ಕುಳಿತು ರಾಮಾಯಣವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಈ ಕಾರಣಕ್ಕಾಗಿ ಮತ್ತೆ
ಇದೀಗ ಆ ಸೀರಿಯಲ್ ಅನ್ನ ರೀ ಟೆಲಿಕಾಸ್ಟ್ ಮಾಡುವುದಾಗಿ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಾರ್ವಜನಿಕರ ಬೇಡಿಕೆಯ ಮೇರೆಗೆ, ನಾಳೆ, ಅಂದ್ರೆ ಮಾರ್ಚ್ 28ರ ಶನಿವಾರದಿಂದ ಡಿಡಿ ನ್ಯಾಷನಲ್ನಲ್ಲಿ, ಬೆಳಿಗ್ಗೆ 9 ರಿಂದ-10 ರವರೆಗೆ ಒಂದು ಎಪಿಸೋಡ್ ಮತ್ತು ರಾತ್ರಿ 9 ರಿಂದ 10 ರವರೆಗೆ ಮತ್ತೊಂದು ಎಪಿಸೋಡ್ ಪ್ರಸಾರ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್
ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...








