ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರೈತ ಸಂಘಗಳು ಕಾಂಗ್ರೆಸ್ ಪರ ಕೆಲ್ಸ ಮಾಡ್ತೀವೆ : ಕುಮಾರಸ್ವಾಮಿ

Mahesh M Dhandu by Mahesh M Dhandu
December 10, 2020
in Newsbeat, Politics, ರಾಜಕೀಯ
G.T.Deve Gowda
Share on FacebookShare on TwitterShare on WhatsappShare on Telegram

ರೈತ ಸಂಘಗಳು ಕಾಂಗ್ರೆಸ್ ಪರ ಕೆಲ್ಸ ಮಾಡ್ತೀವೆ : ಕುಮಾರಸ್ವಾಮಿ

ಬೆಂಗಳೂರು : ಇವತ್ತಿನ ಕೆಲ ರೈತ ಸಂಘಗಳು ರೈತರಿಗಾಗಿ ಹೋರಾಡುವುದನ್ನು ಬಿಟ್ಟು ಕಾಂಗ್ರೆಸ್‍ನಂಥ ಸಮಾಜವನ್ನು ಒಡೆಯುವ, ಜನರ ಆಶಯಗಳಿಗೆ ವಿರುದ್ಧವಾದ ಚಿಂತನೆಗಳನ್ನು ಹೊಂದಿರುವ ಪಕ್ಷದ ಪರವಾಗಿ ಕೆಲಸ ಮಾಡುತ್ತಿವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತೆ ರೈತ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

Related posts

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

July 31, 2026
ರಾಜೀನಾಮೆ ವದಂತಿಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ

ರಾಜೀನಾಮೆ ವದಂತಿಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ

July 31, 2026

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, 2013-14ರ ಕಾಲ. ಕಾಂಗ್ರೆಸ್ ಅಧಿಕಾರದಲ್ಲಿತ್ತು. ಜಾನುವಾರುಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿತ್ತು. ರಾಮನಗರ, ಮಂಡ್ಯದಲ್ಲಿ ರೋಗದ ರುದ್ರ ನರ್ತನ. ಸರ್ಕಾರ ಸುಮ್ಮನಿತ್ತು. ಆಗ ಚನ್ನಪಟ್ಟಣ, ರಾಮನಗರ, ಕನಕಪುರ, ಮಂಡ್ಯದಲ್ಲಿ ಪ್ರತಿ ಕುಟುಂಬಕ್ಕೆ 25 ಸಾವಿರ ನೆರವು ವೈಯಕ್ತಿವಾಗಿ ನೀಡಿದ್ದೆ. ಆಗ ಈ ರೈತ ನಾಯಕರು ಎಲ್ಲಿದ್ದರು?

 Kumaraswamy

ಮಹದಾಯಿಗಾಗಿ ಯಮನೂರಿನಲ್ಲಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಕಾಂಗ್ರೆಸ್ ಸರ್ಕಾರ ಹಲ್ಲೆ ಮಾಡಿತ್ತು. ಆ ದಾಳಿಯನ್ನು ರೈತರು ಇಂದೂ ಮರೆತಿಲ್ಲ ಎಂದು ಇತ್ತೀಚೆಗೆ ಪತ್ರಿಕೆಗಳೂ ವರದಿ ಮಾಡಿವೆ. ಅಂದು ಯಮನೂರಿಗೆ ಧಾವಿಸಿ ರೈತರಿಗೆ ಸಾಂತ್ವನ ಹೇಳಿದ್ದು, ನಾನು. ಸರ್ಕಾರ ರೈತರ ಮೇಲೆ ದಾಳಿ ನಡೆಸುತ್ತಿದ್ದಾಗ ಈ ರೈತ ನಾಯಕರು ಎಲ್ಲಿದ್ದರು?

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು. ನಿತ್ಯವೂ ಆತ್ಮಹತ್ಯೆಗಳು ವರದಿಯಾಗುತ್ತಿದ್ದವು. ಆಗ ರಾಜ್ಯದಾದ್ಯಂತ ಪ್ರವಾಸ ಮಾಡಿ, ಸಂಕಷ್ಟದಲ್ಲಿದ್ದ ರೈತರಿಗೆ ಕೈಲಾದಷ್ಟು ನೆರವು ನೀಡಿ, ಅವರಲ್ಲಿ ವಿಶ್ವಾಸ ಮೂಡಿಸುವ ಪ್ರಯತ್ನವನ್ನು ನಾನು ಮಾಡಿದೆ. ಆಗ ಈ ರೈತ ನಾಯಕರು ಎಲ್ಲಿದ್ದರು?

ಕುಮಾರಸ್ವಾಮಿ ಅವರೇ ಬಡಾಯಿ ಕೊಚ್ಚಿಕೊಳ್ಳೋದನ್ನ ನಿಲ್ಲಿಸಿ : ಎಸ್.ಆರ್ ಪಾಟೀಲ್

ರೈತರ 25 ಸಾವಿರ ಕೋಟಿ ಮೊತ್ತದ ಸಾಲಮನ್ನಾ ಮಾಡುವಾಗ ರೈತ ಸಂಘಗಗಳ ಬಳಿ ಏನಾದರೂ ಕಮಿಷನ್ ಪಡೆದೆನೇ? ಕೆಲ ರೈತ ನಾಯಕರ ಬಾಯಲ್ಲಿ ಬರುತ್ತಿರುವ ‘ಕಿಕ್‍ಬ್ಯಾಕ್’ ಏನಾದರೂ ಪಡೆದೆನೇ? ರೈತ ನಾಯಕರು ಎನಿಸಿಕೊಂಡವರಿಗೆ ಸಾಲಮನ್ನಾ ವಿಚಾರವಾಗಿ ನನ್ನ ಕಡೆಗೆ ಕೃತಜ್ಞತೆ ಇದೆಯೇ? ರೈತರು ಸಾಲದ ಸುಳಿಯಲ್ಲಿದ್ದಾಗ ಈ ರೈತ ನಾಯಕರು ಎಲ್ಲಿದ್ದರು?

ರೈತರಿಗಾಗಿ ಇಂಥ ಹಲವು ಕಾರ್ಯಕ್ರಮಗಳನ್ನು ನಾನು ಸ್ವಯಂ ಪ್ರೇರಣೆಯಿಂದ ಮಾಡಿದ್ದೇನೆ. ಇವತ್ತು ನನ್ನ ವಿರುದ್ಧ ಅರಚುತ್ತಿರುವ ಇದೇ ರೈತ ನಾಯಕರೇನಾದರೂ ರೈತರ ಸಾಲಮನ್ನಾಕ್ಕಾಗಿ ನನ್ನ ಬಳಿ ಅರ್ಜಿ ಕೊಟ್ಟಿದ್ದರೇ? ಸಾಲಮನ್ನ ನನ್ನ ಕಾರ್ಯಕ್ರಮ. ಇಷ್ಟಾದರೂ 8 ಕೋಟಿ ಕಿಕ್ ಬ್ಯಾಕ್ ಪಡೆದ ಆರೋಪ ಮಾಡಿರುವ ಆ ನಾಯಕರಿಗೆ ದೇವರು ಒಳ್ಳೆಯದು ಮಾಡಲಿ.

Kumaraswamy

ರಾಜ್ಯದಲ್ಲಿ ರೈತರಿಗೆ ಸ್ಪಂದಿಸುವ ಪಕ್ಷವೇನಾದರೂ ಇದ್ದರೆ ಅದು ಜೆಡಿಎಸ್ ಮಾತ್ರ. ನೀರಾವರಿ, ಕೃಷಿ, ರೈತರ ಆರ್ಥಿಕ ಸಬಲೀಕರಣಕ್ಕೆ ರಾಜ್ಯದಲ್ಲಿ ಏನಾದರೂ ಒಳ್ಳೆಯದಾಗಿದ್ದರೆ ಅದು ಜೆಡಿಎಸ್ ನಿಂದ ಮಾತ್ರ. ಜೆಡಿಎಸ್ ರಾಜಕೀಯ ಪಕ್ಷ ಮಾತ್ರವಲ್ಲ. ಅದು ರೈತರಿಗಾಗಿ ಹೋರಾಡುವ ರೈತ ಸಂಘವೂ ಹೌದು ಎಂಬುದನ್ನು ಹೇಳಿಕೊಳ್ಳಲು ನನಗೆ ಹೆಮ್ಮೆ ಇದೆ.

ಇವತ್ತಿನ ಕೆಲ ರೈತ ಸಂಘಗಳು ರೈತರಿಗಾಗಿ ಹೋರಾಡುವುದನ್ನು ಬಿಟ್ಟು ಕಾಂಗ್ರೆಸ್‍ನಂಥ ಸಮಾಜವನ್ನು ಒಡೆಯುವ, ಜನರ ಆಶಯಗಳಿಗೆ ವಿರುದ್ಧವಾದ ಚಿಂತನೆಗಳನ್ನು ಹೊಂದಿರುವ ಪಕ್ಷದ ಪರವಾಗಿ ಕೆಲಸ ಮಾಡುತ್ತಿವೆ. ಭೂ ಸುಧಾರಣೆ ಕಾಯ್ದೆ ವಿಚಾರವಾಗಿ ಅನಗತ್ಯ ಹೋರಾಟ ನಡೆಸುತ್ತಿರುವ ಕೆಲ ರೈತ ಸಂಘಗಳ ಹಿಂದೆ ಕಾಂಗ್ರೆಸ್ ತೆರೆಮರೆಯ ರಾಜಕಾರಣ ಮಾಡುತ್ತಿದೆ.

ಕಾಂಗ್ರೆಸ್‍ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್ ಈಗ ಅಡಗಿ ಕುಳಿತಿದೆ. ಅವರ ಮೂಲಕ ರಾಜಕೀಯದ ಹೇಳಿಕೆಗಳನ್ನು ಕೊಡಿಸುತ್ತಿದೆ. ಈ ಮೂಲಕ ಕಾಂಗ್ರೆಸ್ ರೈತ ಸಂಘಗಳನ್ನೂ ಒಡೆಯುವ ಕೆಲಸಕ್ಕೆ ಕೈ ಹಾಕಿದೆ ಎಂದು ಆರೋಪಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangaloreCongressH D KUMARASWAMYJDS
ShareTweetSendShare
Join us on:

Related Posts

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

by Shwetha
July 31, 2026
0

ನೀಟ್ ಪರೀಕ್ಷಾ ಅಕ್ರಮದ ಹೆಸರಿನಲ್ಲಿ ನಡೆದ ಪ್ರತಿಭಟನೆಗಳ ಹಿಂದೆ ದೊಡ್ಡ ಮಟ್ಟದ ವ್ಯವಸ್ಥಿತ ಪಿತೂರಿ ನಡೆದಿದೆಯೇ ಎಂಬ ಬಲವಾದ ಸಂಶಯ ಈಗ ವ್ಯಕ್ತವಾಗುತ್ತಿದೆ. ಈ ಪ್ರತಿಭಟನೆಯಲ್ಲಿ ಸತತ...

ರಾಜೀನಾಮೆ ವದಂತಿಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ

ರಾಜೀನಾಮೆ ವದಂತಿಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ

by Shwetha
July 31, 2026
0

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ಮಾಡಿ ಮನವಿ ಮಾಡಿದ್ದಾರೆ ಎಂಬ ವರದಿಗಳನ್ನು ಸಭಾಪತಿ ಬಸವರಾಜ ಹೊರಟ್ಟಿ ತಳ್ಳಿಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ...

ರಾಮಾಯಣ ಟ್ರೈಲರ್ ನೋಡಿ ಸಿನಿಪ್ರಿಯರು ಸುಸ್ತು- ಎಐ ಯುಗದಲ್ಲೂ ಕಾರ್ಟೂನ್ ತರಹದ ದೃಶ್ಯಗಳೇ? ಯಶ್ ನಟನೆ ಹೊರತುಪಡಿಸಿ ರಾಮಾಯಣದಲ್ಲಿ ಮತ್ತೇನೂ ಇಲ್ಲ: ಧಾರಾವಾಹಿ ರೇಂಜ್ ಗೆ ಇಳಿಯಿತೇ ಬಹುನಿರೀಕ್ಷಿತ ಸಿನಿಮಾ?

ರಾಮಾಯಣ ಟ್ರೈಲರ್ ನೋಡಿ ಸಿನಿಪ್ರಿಯರು ಸುಸ್ತು- ಎಐ ಯುಗದಲ್ಲೂ ಕಾರ್ಟೂನ್ ತರಹದ ದೃಶ್ಯಗಳೇ? ಯಶ್ ನಟನೆ ಹೊರತುಪಡಿಸಿ ರಾಮಾಯಣದಲ್ಲಿ ಮತ್ತೇನೂ ಇಲ್ಲ: ಧಾರಾವಾಹಿ ರೇಂಜ್ ಗೆ ಇಳಿಯಿತೇ ಬಹುನಿರೀಕ್ಷಿತ ಸಿನಿಮಾ?

by Shwetha
July 31, 2026
0

ಭಾರತೀಯ ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ನಿತೀಶ್ ತಿವಾರಿ ನಿರ್ದೇಶನದ ಪೌರಾಣಿಕ ಚಿತ್ರ ರಾಮಾಯಣದ ಮೊದಲ ಭಾಗದ ಟ್ರೈಲರ್ ನಿನ್ನೆ ಅಧಿಕೃತವಾಗಿ ಬಿಡುಗಡೆಯಾಗಿದೆ. ಆದರೆ ನಿರೀಕ್ಷೆಗೂ ಮೀರಿದ...

ಕಾವೇರಿ ನೀರು: ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ CWMA ಆದೇಶ

ಕಾವೇರಿ ನೀರು: ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ CWMA ಆದೇಶ

by Shwetha
July 31, 2026
0

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ದೆಹಲಿಯಲ್ಲಿ ನಡೆದ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಸಭೆಯಲ್ಲಿ, ಕಾವೇರಿ ಜಲ ನಿಯಂತ್ರಣ ಸಮಿತಿ (CWRC)...

ಕೇಸರಿ ಪಡೆಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು: ಆರೆಸ್ಸೆಸ್ ನೋಂದಣಿ ಆಗದಿದ್ದರೆ ಬಿಡಲ್ಲ, ಅವರಿಂದ ಹೇಗೆ ಉತ್ತರ ಪಡೀಬೇಕು ಅಂತಾ ನನಗೆ ಗೊತ್ತಿದೆ!

ಕೇಸರಿ ಪಡೆಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು: ಆರೆಸ್ಸೆಸ್ ನೋಂದಣಿ ಆಗದಿದ್ದರೆ ಬಿಡಲ್ಲ, ಅವರಿಂದ ಹೇಗೆ ಉತ್ತರ ಪಡೀಬೇಕು ಅಂತಾ ನನಗೆ ಗೊತ್ತಿದೆ!

by Shwetha
July 31, 2026
0

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯವೈಖರಿ ಮತ್ತು ಸಿದ್ಧಾಂತದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಗುಡುಗಿದ್ದಾರೆ. ಕರ್ನಾಟಕದಲ್ಲಿ ಸಮವಸ್ತ್ರ ಧರಿಸಿ, ಕೈಯಲ್ಲಿ ಲಾಠಿ ಹಿಡಿದು ರಸ್ತೆಗಿಳಿಯುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram