ಮಾರ್ಚ್ 28ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಚಟುವಟಿಕೆ, ವಾಣಿಜ್ಯ ವ್ಯವಹಾರ, ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಶುಕ್ರವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇಲ್ಲಿಯವರೆಗೆ ದ.ಕ.ಜಿಲ್ಲೆಯಲ್ಲಿ 7 ಪ್ರಕರಣಗಳು ವರದಿಯಾಗಿದ್ದು, ನೆರೆಯ ಕಾಸರಗೋಡು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕೊರೊನಾ ಪ್ರಕರಣಗಳು ತೀವ್ರ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂಧಿಸದಿದ್ದರೆ, ಮುಂದಿನ ದಿನಗಳು ಮತ್ತಷ್ಟು ಅಪಾಯಕಾರಿಯಾಗಿದ್ದು, ಜನರ ಉತ್ತಮ ಭವಿಷ್ಯಕ್ಕಾಗಿ ಕೈಗೊಳ್ಳುವ ಈ ನಿರ್ಧಾರವನ್ನು ಎಲ್ಲರೂ ಬೆಂಬಲಿಸಬೇಕು. ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಅನಿವಾರ್ಯವಾಗಿದ್ದು, ಪ್ರತಿಯೊಬ್ಬರು ಮನೆಯೊಳಗೆ ಕೂತು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪ್ರಧಾನ ಮಂತ್ರಿ, ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರ್ಚ್ 28ರಿಂದ ಎಲ್ಲಾ ಚಟುವಟಿಕೆ, ವಾಣಿಜ್ಯ ವ್ಯವಹಾರ, ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಸಭೆಯಲ್ಲಿ ಸಂಸದರು, ಜಿಲ್ಲೆಯ ಶಾಸಕರು, ಜಿ.ಪ.ಅಧ್ಯಕ್ಷರು, ಮೇಯರ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಎಸ್ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜತಾಂತ್ರಿಕ ವೈಫಲ್ಯಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ....








