ಮುಂದುವರಿದ ಸಾರಿಗೆ ನೌಕರರ ಪ್ರೊಟೆಸ್ಟ್ : ಸರ್ಕಾರದ ವಿರುದ್ಧ `ಕೈ’ ಟ್ವೀಟ್ ಕಿಡಿ
ಬೆಂಗಳೂರು : ಇಂದು ಕೂಡ ಸಾರಿಗೆ ನೌಕರರ ಪ್ರತಿಭಟನೆ ಮುಂದುವರಿದಿದೆ. ಆದ್ರೆ ಇದುವರೆಗೂ ಸರ್ಕಾರ ಪ್ರತಿಭಟನಾ ನಿರತ ನೌಕರರ ಮನವೊಲಿಸುವ ಕೆಲಸಕ್ಕೆ ಮುಂದಾಗಿಲ್ಲ. ಹೀಗಾಗಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್ ಆರ್ ಪಾಟೀಲ್, ಅಪ್ಪ, ಅಮ್ಮನ ಜಗಳದಲ್ಲಿ ಕೂಸು ಬಡವಾಯಿತು ಎಂಬಂತಾಗಿದೆ ಜನ ಸಾಮಾನ್ಯರ ಸ್ಥಿತಿ.
ಸಾರಿಗೆ ನೌಕರರು ಹಾಗೂ ರಾಜ್ಯ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ. ಇಬ್ಬರ ಈ ಜಗಳದಲ್ಲಿ ಶ್ರೀಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ.
ದೂರದ ಊರುಗಳಿಗೆ ತೆರಳಲಾಗದೆ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಈ ಕೂಡಲೇ ರಾಜ್ಯ ಸರ್ಕಾರ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ. ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು.
ದೂರದ ಊರುಗಳಿಗೆ ತೆರಳಲಾಗದೆ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಈ ಕೂಡಲೇ ರಾಜ್ಯ ಸರ್ಕಾರ ಈ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬೇಕಾಗಿದೆ. ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದಿದ್ದಾರೆ.
ಇನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ, ಸಾರಿಗೆ ನೌಕರರ ಮುಷ್ಕರದಿಂದ ಲಕ್ಷಾಂತರ ಪ್ರಯಾಣಿಕರು ತೊಂದರೆಗೀಡಾಗಿದ್ದಾರೆ.
ಮುಷ್ಕರ ನಿರತರ ಮೇಲೆ ಕಾನೂನಿನ ಅಸ್ತ್ರ ಪ್ರಯೋಗಿಸುವ ಸಾರಿಗೆ ಸಚಿವರ ಮಾತು ಪ್ರಬುದ್ಧ ನಡೆಯಲ್ಲ. ಸರ್ಕಾರ ಎಲ್ಲವೂ ತನ್ನ ಮೂಗಿನ ನೇರಕ್ಕೆ ನಡೆಯಬೇಕೆಂಬ ಸರ್ವಾಧಿಕಾರಿ ಧೋರಣೆ ಬಿಟ್ಟು ಸಮಸ್ಯೆ ಬಗೆಹರಿಸುವತ್ತ ಚಿತ್ತ ಹರಿಸಲಿ ಎಂದು ಬರೆದುಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










