ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ರೀತಿಯಲ್ಲಿ ದುರಂತ ಅಂತ್ಯ ಕಂಡವರು.. ಪ್ರಮುಖ ಸುದ್ದಿಗಳು..!  

Namratha Rao by Namratha Rao
December 12, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಪ್ರೀತಿಯಲ್ಲಿ ದುರಂತ ಅಂತ್ಯ ಕಂಡವರು.. ಪ್ರಮುಖ ಸುದ್ದಿಗಳು..!  

ನಿನ್ನ ಪ್ರೀತಿ ಒಪ್ಪಿದ್ದೇವೆ ತಂಗ್ಯವ್ವ… ಮನೆಗೆ ಬಾ ಎಂದ ಅಣ್ಣ ಕೊಟ್ಟ ಗಿಫ್ಟ್ ಏನ್ ಗೊತ್ತಾ..!

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಉತ್ತರಪ್ರದೇಶ:  ಉತ್ತರ ಪ್ರದೇಶದ ಮೈನ್​ಪುರಿ ಜಿಲ್ಲೆಯ 23 ವರ್ದ ಚಾಂದಿನಿ ಕಶ್ಯಪ್ ಎಂಬಾಕೆ ಹಾಗೂ 25 ವರ್ಷದ ದಲಿತ ಯುವಕ ಅರ್ಜುನ್ ಕುಮಾರ್ ಎಂಬಾತರು ಸುಮಾರು 8 ವರ್ಷಗಳ ಕಾಲ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ ಯುವಕ ದಲಿತ ಎಂಬ ಕಾರಣಕ್ಕೆ  ಯುವತಿಯ ಮನೆಯರು ಪ್ರೀತಿಯನ್ನ ಒಪ್ಪಿರಲಿಲ್ಲ. ಮನೆಯವರ ವಿರೋಧದ ನಡುವೆಯೂ ಈ ಜೋಡಿ ಲಾಕ್​ಡೌನ್​ ಸಮಯದಲ್ಲಿ ಮದುವೆಯಾಗಿದ್ದರು.

ಆದ್ರೆ ಇತ್ತೀಚೆಗೆ ಮನೆಯರು ಯುವತಿಯ ಜೊತೆಗೆ ಮಾತನಾಡುವ ನಾಟಕ ಮಾಡಿ ಮನೆಗೆ ಬಾ ಎಂದು ಕರೆಸಿಕೊಂಡಿದ್ದಾರೆ. ಆನಂತರ ಆಕೆಗೆ ಚಿತ್ರಹಿಂಸೆ ಕೊಡಲಾರಂಭಿಸಿದ್ದಾರೆ. ಈ ಬಗ್ಗೆ ಯುವತಿ ತನ್ನ ಗಂಡನಿಗೆ ಫೋನ್ ಮೂಲಕ ತಿಳಿಸಿದ್ದಾಳೆ. ಇದಾದ ಬಳಿಕ ಪತ್ನಿಯ ಜೊತೆಗೆ ಸಂಪರ್ಕಿಸಲು ಸಾಧ್ಯವಾಗದ ಹಿನ್ನೆಲೆ ಆಕೆಯ ಪತಿ ಅರ್ಜುನ್ ಪೊಲೀಸರಿಗೆ ದೂರು ನೀಡಿದ ಬಳಿಕ ಪತ್ನಿ ಕೊಲೆಯಾಗಿರುವ ಆಘಾತಕಾರಿ ವಿಚಾರ ಗೊತ್ತಾಗಿದೆ. ಆಕೆಯ ಅಣ್ಣನೇ ಇನ್ನಿತರರ ಜೊತೆ ಸೇರಿ ಕೊಲೆ ಮಾಡಿ ತಮ್ಮ ಹೊಲದಲ್ಲಿ ಅಂತ್ಯಸಂಸ್ಕಾರವನ್ನೂ ನೆರವೇರಿಸಿದ್ದಾನಂತೆ.

ಆಕೆ ಅಪ್ರಾಪ್ತೆ.. ಈತ ವಿವಾಹಿತ : ಹುಚ್ಚು ಪ್ರೀತಿ ಕಂಡದ್ದೇ ದುರಂತ ಅಂತ್ಯ..!

ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ವಿವಾಹಿತನ ಜೊತೆಗೆ ಪ್ರೀತಿಯ ಬಲೆಯಲ್ಲಿ ಸಿಲುಕಿದ್ದ ಅಪ್ರಾಪ್ತೆ ಹಾಗೂ ವಿವಾಹಿತ ವ್ಯಕ್ತಿ ತಮ್ಮ ಲವ್ ಗೆ ಸಪೋರ್ಟ್ ಸಿಗದಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಜಾಲೇರದೊಡ್ಡಿಯ (17) ಮಹಾದೇವಿ ಹಾಗೂ ಯರಜಂತಿ ಗ್ರಾಮದ (28)ನರಸಪ್ಪ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ ನರಸಪ್ಪಗೆ ಮದುವೆಯಾಗಿ  ಇಬ್ಬರು ಮಕ್ಕಳಿದ್ದರು. ಹೀಗಾಗಿ ಬಾಲಕಿಯ ಮನೆಯಲ್ಲಿ ಇವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಈ ಇಬ್ಬರು ಊರು ಬಿಟ್ಟು ಓಡಿ ಹೋಗಿದ್ದರು. ಬಳಿಕ  ಅಪ್ರಾಪ್ತೆಯಾಗಿದ್ದರಿಂದ ಮೇಜರ್ ಆಗೋವರೆಗೆ ಬಾಲಮಂದಿರದಲ್ಲಿರಿಸಿ, ಆನಂತ್ರ ವಿವಾಹವಾಗಲು ಬಾಲಮಂದಿರದ ಅಧಿಕಾರಿಗಳು ತಿಳಿಸಿದ್ದರಂತೆ. ಆದರೆ ಅಷ್ಟರೊಳಗೇ ಈ ಇಬ್ಬರು ದುಡುಕಿ ನಿರ್ಧಾರ ತೆಗೆದುಕೊಂಡಿದ್ದಾರೆ. ಪೈದೊಡ್ಡಿ ಗ್ರಾಮದ ಹೊರವಲಯದಲ್ಲಿ ವಿಷ ಸೇವಿಸಿದ್ದಾರೆ. ಬಾಲಕಿ ಸಾವನಪ್ಪಿದ್ದಾಳೆ. ನರಸಪ್ಪ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದಾನೆ.

ನಾನು 10 ಮಹಿಳೆಯರಿಗೆ ಸೇರಿದವನು : ಪತ್ನಿಗೆ ಶಾಕ್ ಕೊಟ್ಟ ಪತಿರಾಯ ಮಾಡಿದ್ದೇನು ಗೊತ್ತಾ..!

ಮುಂಬೈ: ಮಹಾರಾಷ್ಟ್ರದಲ್ಲಿ ಪತಿಯೋರ್ವ ಪತ್ನಿಗೆ  ತಲಾಖ್ ನೀಡಿ ಪತ್ನಿಗೆ ಆಘಾತಕಾರಿ ವಿಚಾರವೊಂದನ್ನೂ ಹೇಳಿದ್ದಾನೆ.  ಈತ ತಲಾಖ್ ನೀಡಿರೋದು 10 ಜನ ಮಹಿಳೆಯರಿಗಾಗಿ. ಹೌದು 10 ಮಹಿಳೆಯರ ಜೊತೆಗೆ ಸಂಬಂಧ ಇಟ್ಟುಕೊಳ್ಳುವ ಸಲುವಾಗಿ ಈ ಕಿರಾತಕ ಪತ್ನಿಗೆ ತಲಾಖ್​ ನೀಡಿದ್ದಾರೆ.

ಮೊಹ್ಶಿನ್​ ಎಂಬಾಕೆ ಈತನ ಜೊತೆಗೆ ಸುಮಾರು ಒಂದೂವರೆ ವರ್ಷಗಳ  ಹಿಂದೆ ಮದುವೆಯಾಗಿದ್ದಳು. ಇನ್ನೂ ಈತನಿಗೆ ಮದುವೆಗೂ ಮುಂಚೆಯೂ  ಅನೇಕರ ಜೊತೆಗೆ ಅಕ್ರಮ ಸಂಬಂಧವಿತ್ತಂತೆ.  ಆದ್ರೆ ಮದುವೆಯಾದ ಮೇಲೂ ಈತ ತನ್ನ ಚಾಳಿ ಮುಂದುವರೆಸಿದ್ದಾನೆ. ಇದೇ ವಿಚಾರವಾಗಿ ಇವರಿಬ್ಬರ ನಡುವೆ ಕಿತ್ತಾಟ ನಡೆದಿದ್ದು, ತಾರಕ್ಕೇರಿದೆ. ಈ ವೇಳೆ ನಾನು ನಿನ್ನಬ್ಬನಿಗೆ ಸೀಮಿತವಾಗಿಲ್ಲ ಇನ್ನೂ 10 ಜನರಿಗೆ ಸೇರಿದವನು ಎಂದು ಮೂರು ಬಾರಿ ತಲಾಖ್​ ಹೇಳಿ ಹೊರಟು ಹೋಗಿದ್ದಾನೆ.

8 ವರ್ಷಗಳ ಡೇಟಿಂಗ್ ನಂತರವೂ ವಿವಾಹಕ್ಕೆ ಒಪ್ಪದ ಗೆಳೆಯ – ನ್ಯಾಯಾಲಯದ ಕದ ತಟ್ಟಿದ ಮಹಿಳೆ

ಜಾಂಬಿಯಾ: ಜಾಂಬಿಯಾದ ಮಹಿಳೆಯೊಬ್ಬಳು ತನ್ನ ಗೆಳೆಯನ ಮೇಲೆ ಭರವಸೆಯನ್ನು ಇಟ್ಟುಕೊಂಡಿದ್ದು, 8 ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದಳು. 8 ವರ್ಷ ಒಟ್ಟಿಗೆ ಕಳೆದ ನಂತರವೂ, ಗೆರ್ಟ್ರೂಡ್ ನ್ಗೋಮಾ ಎಂಬ ಮಹಿಳೆ ತನ್ನ ಸಂಗಾತಿ ಹರ್ಬರ್ಟ್ ಸಲಾಲಿಕಿ ವಿವಾಹದ ಬಗ್ಗೆ ಯೋಚಿಸದ ಕಾರಣ ನಿರಾಶೆಗೊಂಡಳು ಮತ್ತು ಅವಳು ಆತನನ್ನು ಮದುವೆಯಾಗುವಂತೆ ಕೇಳಿಕೊಂಡಳು.
ಆದರೆ ಆತ ಇದಕ್ಕೆ ‌ನಿರಾಕರಿಸಿದಾಗ ಕೋಪಗೊಂಡ ಆಕೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಿದಳು. ಅವನು ತನ್ನ ಮದುವೆಯನ್ನು ಪ್ರಸ್ತಾಪಿಸದೆ ಸುಮಾರು ಒಂದು ದಶಕದಿಂದ ತನ್ನ ಸಮಯವನ್ನು ವ್ಯರ್ಥ ಮಾಡಿದನೆಂದು ಆರೋಪಿಸಿದಳು.
ತನ್ನ ಮಗುವಿನ ತಂದೆಯಾದ ಸಲಾಲಿಕಿ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದನು. ಆದರೆ ಈಗ ಆತ ತನ್ನ ಸಮಯವನ್ನು ವ್ಯರ್ಥ ಮಾಡುತ್ತಿದ್ದಾನೆ ಎಂದು ಎನ್‌ಗೋಮಾ ಹೇಳಿದಳು. ಅಷ್ಟೇ ಅಲ್ಲ, ಹರ್ಬರ್ಟ್ ತನ್ನನ್ನು ಮೋಸ ಮಾಡುತ್ತಿದ್ದಾನೆ ಎಂದು ಅವಳು ಅನುಮಾನಿಸಿದಳು.

ಬದುಕಿದ್ದಾಗ ಮಾತಾಡಿದ್ರೆ ಗಂಡಸ್ತನ : ತೆಲುಗು ನಟನಿಗೆ ಕಿಚ್ಚ ವಾರ್ನಿಂಗ್

ಅವನು ಎಂದಿಗೂ ಮದುವೆಯ ವಿಷಯದಲ್ಲಿ ಗಂಭೀರವಾಗಿರಲಿಲ್ಲ. ಮುಂದಿನ ದಾರಿ ಮತ್ತು ನಮ್ಮ ಭವಿಷ್ಯವನ್ನು ತಿಳಿಯಲು ನಾನು ಅರ್ಹಳಾಗಿದ್ದು, ಅದಕ್ಕಾಗಿಯೇ ನಾನು ಆತನನ್ನು ನ್ಯಾಯಾಲಯಕ್ಕೆ ಎಳೆದೆ ಎಂದು ಆಕೆ ಕೀನ್ಯಾದ ಸುದ್ದಿ ಸಂಸ್ಥೆಗೆ ತಿಳಿಸಿದಳು.

ಸಲಾಲಿಕಿ ವರದಕ್ಷಿಣೆಯನ್ನು ಸಹ‌ ಪಡೆದಿದ್ದಾನೆ, ಆದರೆ ಇದೀಗ ಆತ ಮದುವೆಯಾಗಲು ಆರ್ಥಿಕವಾಗಿ ಸದೃಢನಾಗಿಲ್ಲ‌ ಎಂದು ಹೇಳುತ್ತಿರುವುದಾಗಿ ಆಕೆ ಆರೋಪಿಸಿದಳು.
ಏತನ್ಮಧ್ಯೆ, ಮೊಕದ್ದಮೆಗೆ ಪ್ರತಿಕ್ರಿಯೆಯಾಗಿ, ಎನ್‌ಗೋಮಾ ತನಗೆ ಅಗತ್ಯವಾದ ಗಮನವನ್ನು ನೀಡುತ್ತಿಲ್ಲ ಎಂದು ಹರ್ಬರ್ಟ್ ಆರೋಪಿಸಿದ್ದಾನೆ.

ಆದರೆ, ಪ್ರಕರಣದ ಅಧ್ಯಕ್ಷತೆ ವಹಿಸಿದ್ದ ನ್ಯಾಯಾಧೀಶರು, ಈ ಪ್ರಕರಣದಲ್ಲಿ ನ್ಯಾಯಾಲಯವು ಏನೂ ಮಾಡಲು ಸಾಧ್ಯವಿಲ್ಲ. ಏಕೆಂದರೆ ನೀವು ಕಾನೂನುಬದ್ಧವಾಗಿ ಮದುವೆಯಾಗಿಲ್ಲ. ನಿಮ್ಮ ಭಿನ್ನಾಭಿಪ್ರಾಯಗಳನ್ನು ನ್ಯಾಯಾಲಯದಿಂದ ಹೊರಗೆ ಬಗೆಹರಿಸಲು ಪ್ರಯತ್ನಿಸುವಂತೆ ಸೂಚಿಸಿದರು.

ಸಿಬಿಐ ವಶದಲ್ಲಿದ್ದ 103 ಕೆ.ಜಿ. ಚಿನ್ನ ನಾಪತ್ತೆ : ಹಾಗಾದ್ರೆ ಕದ್ದವರು ಯಾರು..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: cheating in loveintresting storieslove
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram