ಫಿಲ್ಮಿ 5 ಸ್ಟಾರ್ ಪ್ರಮುಖ ಸುದ್ದಿಗಳು..!
ವ್ಹಾ… ಹೊಸ ಸಾಧನೆಯತ್ತ ಕಿಚ್ಚನ ‘ಫ್ಯಾಂಟಮ್’… ಈ ಸಾಧನೆಯಲ್ಲೇ ಭಾರತದ 2ನೇ ಸಿನಿಮಾ…!
ದುಬೈನಲ್ಲಿರುವ ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಕಿಚ್ಚನ ಅಭಿನಯದ ಫ್ಯಾಂಟಮ್ ಸಿನಿಮಾದ ಆಡೀಯೋ ಲಾಂಚ್ ಮಾಡಲಿದೆಯಂತೆ ಚಿತ್ರತಂಡ. ಎಸ್ ಈ ಹಿಂದೆ ಈ ಸಾಧನೆ ಮಾಡಿದ್ದ ಏಕೈಕ ಸಿನಿಮಾ 0.2 ಸಿನಿಮಾವಾಗಿತ್ತು. ಇದೀಗ ಇದೇ ಹಾದಿ ಹಿಡಿರುವ ಚಿತ್ರತಂಡ ‘ದಿ ವರ್ಡ್ ಆಫ ಫ್ಯಾಂಟಮ್ ‘ ಸಿನಿಮಾವನ್ನ ಎಕ್ಸ್ಟ್ರೀಮ್ ಲೆವೆಲ್ ಕೊಂಡೊಯ್ಯೋ ಮಾಸ್ಟರ್ ಪ್ಲಾನ್ ಮಾಡಿದೆ. ಅನೂಪ್ ಭಂಡಾರಿ ಅವರ ಸಾರಥ್ಯದಲ್ಲಿ ಕಿಚ್ಚ ಸುದೀಪ್ ನಾಯಕತ್ವದ ಈ ಚಿತ್ರ ಸೆಟ್ಟೇರಿದಾಗಿನಿಂದಲೂ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ.
ಅಯ್ಯಯ್ಯೋ ನನ್ನ ಕ್ಷಮಿಸ್ಬಿಡಿ, ನಾನು ಪಾಪ ಮಾಡ್ಬಿಟ್ಟೆ : ವಿಜಯರಂಗ ಕಣ್ಣೀರು
ಬೆಂಗಳೂರು : ಕನ್ನಡದ ಮೇರು ನಟ ವಿಷ್ಣುವರ್ಧನ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಭಾರಿ ಟೀಕೆಗೆ ಒಳಗಾಗಿದ್ದ ತೆಲುಗು ನಟ ವಿಜಯ್ ರಂಗರಾಜು ಕೊನೆಗೂ ಕ್ಷಮೆ ಕೇಳಿದ್ದಾರೆ. ಕಣ್ಣೀರು ಹಾಕುತ್ತಾ ವಿಜಯ್ ವಿಡಿಯೋ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಕರ್ನಾಟಕ ಜನರು, ಕರ್ನಾಟಕ ಮಕ್ಕಳಿಗೆ ನಮಸ್ಕಾರ. ವಿಜಯ್ ರಂಗರಾಜು ಮಾತನಾಡುತ್ತಿದ್ದೇನೆ. ನಾನು ತುಂಬಾ ದೊಡ್ಡ ತಪ್ಪು ಮಾಡಿದ್ದೀನಿ. ಆ ತಪ್ಪುಗೆ ಈಗ ಶಿಕ್ಷೆ ಅನುಭವಿಸುತ್ತಿದ್ದೇನೆ. ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಅದಕ್ಕಾಗಿ ನಾನು ಮಾಸ್ಕ್ ಹಾಕಿಕೊಂಡಿದ್ದೇನೆ. ನಿಮಗೆ ನನ್ನ ಮುಖ ತೋರಿಸಬಾರದೆಂದು ಅಲ್ಲ. ಕೊರೊನಾದಿಂದಾಗಿ ನಾನು ಕಷ್ಟಪಡುತ್ತಿದ್ದೇನೆ. ನಾನು ದೊಡ್ಡ ಪಾಪ ಮಾಡಿದ್ದೇನೆ. ನಾನು ಇಂಡಸ್ಟ್ರೀಗೆ ಬಂದು ತುಂಬಾ ದಿನಗಳಾಗಿವೆ. ಫೈಟರ್ ಆಗಿ ನಾನು ಇಂಡಸ್ಟ್ರೀಗೆ ಬಂದೆ. ದೊಡ್ಡ ಆರ್ಟಿಸ್ಟ್ ಏನಲ್ಲ. ಕೆಲ ವ್ಯಾಪಾರಗಳನ್ನು ಮಾಡಿ ಎಲ್ಲ ಕಳೆದುಕೊಂಡಿದ್ದೇನೆ. ಮತ್ತೆ ನಾನು ಲಂಡನ್ ಗೆ ಹೋಗಿ, ಅಲ್ಲಿ ಕಸಗುಡಿಸಿದ್ದೀನಿ, ಟಾಯ್ಲೆಟ್ ಕ್ಲೀನ್ ಮಾಡ್ದೆ, ಆದ್ರೂ ನನ್ನ ಕಷ್ಟ ತೀರಲಿಲ್ಲ. ಆ ದಿನ ನಾನು ವಿಷ್ಣುವರ್ಧನ್ ಅವರನ್ನ ಹಿಡ್ಕೊಲಿಲ್ಲ. ಅಂತಃ ದೊಡ್ಡ ವ್ಯಕ್ತಿಯನ್ನ ನಾನು ಹಿಡ್ಕೊಂಡಿದ್ರೆ ಅಲ್ಲಿದ್ದ ಯುನಿಟ್ ಅವ್ರು ನನ್ನ ಸುಮ್ನೆ ಬಿಡ್ತೀದ್ರಾ..? ಅಲ್ಲೇ ನನ್ನ ಸಾಯ್ಸಿಬಿಡ್ತಿದ್ರು.
ನಾನು ಯಾವುದೋ ಕೋಪದಲ್ಲಿ, ಏನೋ ಫ್ಲೋನಲ್ಲಿ ಅವ್ರ ಬಗ್ಗೆ ಆ ರೀತಿ ಹೇಳ್ಬಿಟ್ಟೆ. ನಾನು ನಿಮ್ಮ ಪಾದಗಳನ್ನ ಹಿಡಿದು ಬೇಡಿಕೊಳ್ಳುತ್ತೇನೆ ದಯವಿಟ್ಟ ನನ್ನ ಬಿಟ್ಟು ಬಿಡಿ.. ಅಂತಾ ಕಣ್ಣೀರು ಹಾಕುತ್ತಾ ವಿಜಯ್ ರಂಗ ಕ್ಷಮೆ ಕೇಳಿದ್ದಾರೆ.
‘ದಾದಾ’ ಬಗ್ಗೆ ಅವಹೇಳನಕಾರಿ ಹೇಳಿಕೆ : ರಂಗರಾಜನ್ ಗೆ ‘ರಾಖಿಭಾಯ್’ ವಾರ್ನಿಂಗ್
ಸ್ಯಾಂಡಲ್ ವುಡ್ ನ ಯಜಮಾನ ವಿಷ್ಣು ದಾದನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ತೆಲುಗು ನಟ ವಿಜಯ್ ರಂಗರಾಜು ವಿರುದ್ಧ ಅನೇಕ ಸ್ಯಾಂಡಲ್ ವುಡ್ ನಟರು ಆಕ್ರೋಶ ಹೊರಹಾಕಿದ್ದಾರೆ. ಕನ್ನಡಾಭಿಮಾನಿಗಳಂತು ನಿಗಿ ನಿಗಿ ಕೆಂಡಕಾರ್ತಿದ್ದಾರೆ. ಇದೀಗ ರಾಕಿಂಗ್ ಸ್ಟಾರ್ ಯಶ್ ಅವರು ಕೂಡ ರಂಗರಾಜನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ಹೊರಹಾಕಿರೋ ರಾಖಿ ಬಾಯ್ ‘ಸರಿದಾರಿಯಲ್ಲಿ ನಡೆಯುವವರು ಬೆವರುಹರಿಸಿ ಹಂತಹಂತವಾಗಿ ಬೆಳೆದು ಹೆಸರು ಮಾಡಿ ಉಳಿದುಕೊಳ್ಳುತ್ತಾರೆ, ಅಡ್ಡದಾರಿಯಲ್ಲಿ ನಡೆಯುವವರು ಅಂತ ಹೆಸರುಗಳನ್ನು ಬಳಸಿಕೊಳ್ಳಲು ಹೋಗಿ ಬದಿಯಲ್ಲೇ, ಉಳಿದುಬಿಡುತ್ತಾರೆ. ವಿಷ್ಣು ಸರ್ ಕನ್ನಡ ನಾಡು ಕಂಡ ಮಹಾನ್ ಸಾಧಕರು ಅವರ ಶ್ರಮ ಪ್ರತಿಭೆ ಹಾಗೂ ನಟನೆಯ ಜೊತೆಜೊತೆಯಾಗಿ ಅವರ ಬದುಕು ಅವರ ವ್ಯಕ್ತಿತ್ವದಿಂದ ನಮ್ಮ ಮನೆ ಮನದಲ್ಲಿ ಅಜರಾಮರವಾಗಿರುವವರು.
ಅಂತಹ ಸಾಧಕರನ್ನು ನಿಂದಿಸಿ ಹೆಸರು ಮಾಡ ಬಯಸುವ ಹೀನಮಟ್ಟಕ್ಕೆ ಇಳಿಯುವವನು ಕಲಾವಿದನಲ್ಲ. ಕನ್ನಡ ಚಿತ್ರರಂಗ ಎಲ್ಲಾ ಚಿತ್ರರಂಗಗಳ ಜೊತೆ ಪರಸ್ಪರ ಹೊಂದಾಣಿಕೆ ಹಾಗೂ ಗೌರವವನ್ನು ಕಾಪಾಡಿಕೊಂಡು ಬಂದಿದೆ. ಅದು ಇಂತವರಿಂದ ತಪ್ಪುದಾರಿಗೆ ಹೋಗಬಾರದು. ಆ ವ್ಯಕ್ತಿ ಕ್ಷಮೆ ಕೇಳಿ ತಮ್ಮ ಅಸಮಂಜಸ ಮಾತುಗಳನ್ನು ಹಿಂಪಡೆಯಬೇಕು’ ಎಂದು ಆಕ್ರೋಶ ಹೊರಹಾಕಿದ್ದಾರೆ.
ವಿಷ್ಣುವರ್ಧನ್ ಬಗ್ಗೆ ಮಾತಾಡಿದ ವ್ಯಕ್ತಿ ಕ್ಷಮೆಗೆ ಅರ್ಹರಲ್ಲ : ಸುಮಲತಾ
ಚಂದನವನದ ಯಜಮಾನ ವಿಷ್ಣುವರ್ಧನ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ನಟ ವಿಜಯ್ ರಂಗರಾಜು ಕ್ಷಮೆಗೆ ಅರ್ಹರಲ್ಲ ಅಂತಾ ನಟಿ, ಸಂಸದೆ ಸುಮಲತಾ ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಜನಪ್ರಿಯ ವ್ಯಕ್ತಿಗಳ ಬಗ್ಗೆ ಇಲ್ಲ ಸಲ್ಲದ ವಿವಾದ್ಮಕ ಹೇಳಿಕೆ ನೀಡಿ ಬಿಟ್ಟಿ ಪ್ರಚಾರ ಪಡೆಯುವುದೇ ಕೆಲವರಿಗೆ ಹವ್ಯಾಸವಾಗಿ ಹೋಗಿದೆ.ಇಡೀ ದೇಶವೇ, ಅದರಲ್ಲೂ ದಕ್ಷಿಣ ಭಾರತೀಯ ಚಿತ್ರ ರಸಿಕರಿಗೆ ನಮ್ಮ ಕರ್ನಾಟಕದ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ಘನೆತೆ ಏನೆಂಬುವುದು ಚೆನ್ನಾಗಿಯೇ ಗೊತ್ತು.
ಇತ್ತೀಚಿನ ದಿನಗಳಲ್ಲಿ ಜನಪ್ರಿಯ ವ್ಯಕ್ತಿಗಳ ಬಗ್ಗೆ ಇಲ್ಲ ಸಲ್ಲದ ವಿವಾದ್ಮಕ ಹೇಳಿಕೆ ನೀಡಿ ಬಿಟ್ಟಿ ಪ್ರಚಾರ ಪಡೆಯುವುದೇ ಕೆಲವರಿಗೆ ಹವ್ಯಾಸವಾಗಿ ಹೋಗಿದೆ. ಇಡೀ ದೇಶವೇ, ಅದರಲ್ಲೂ ದಕ್ಷಿಣ ಭಾರತೀಯ ಚಿತ್ರ ರಸಿಕರಿಗೆ ನಮ್ಮ ಕರ್ನಾಟಕದ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ಘನೆತೆ ಏನೆಂಬುವುದು ಚೆನ್ನಾಗಿಯೇ ಗೊತ್ತು.
ಅದು ಕೇವಲ ಅಂತಹ ಬಾಯಿಬಡುಕ ವ್ಯಕ್ತಿಯ ಕೆಟ್ಟ ಗುಣ ಹಾಗು ನೀಚ ಬುದ್ದಿಯ ಅನಾವರಣವಲ್ಲದೆ ಬೇರೇನಲ್ಲ. ಅದರಲ್ಲೂ ನಮ್ಮನ್ನು ಅಗಲಿದ ವ್ಯಕ್ತಿಯ ಬಗ್ಗೆ ಈ ರೀತಿಯ ತುಚ್ಛವಾಗಿ ಮಾತನಾಡುವುದು ಕ್ಷಮಿಸಲಾಗದ ದೊಡ್ಡ ಅಪರಾಧ.
ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ವರ್ಚಸ್ಸು ಅವರನ್ನು ಪ್ರೀತಿಸುವ ಅಸಂಖ್ಯಾತ ಅಭಿಮಾನಿಗಳಿಗೆ ಗೊತ್ತು. ನಾಯಿ ಬೊಗಳಿದರೆ ದೇವಲೋಕ ಹಾಳಾಗದು ಎಂಬುದಕ್ಕೆ ಇದೊಂದು ಸರಿಯಾದ ಉದಾಹರಣೆ. ಇಂತಹ ‘ಚೀಪ್ ಪಬ್ಲಿಸಿಟಿ’ ಗಾಗಿ ಮನಬಂದಂತೆ ಬಾಯಿ ಹರಟುವ ವ್ಯಕ್ತಿಗಳು ಕ್ಷಮೆ ಕೇಳಲು ಅರ್ಹರಲ್ಲ. ಕ್ಷಮಿಸಲು ಆಗದು, ಕ್ಷಮಿಸಲು ಬಾರದು ಎಂದು ಆಕ್ರೋಶ ಹೊರಹಾಕಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








