ADVERTISEMENT
Friday, July 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗಮನವಿಟ್ಟು ಕೇಳಿ.. ಜನ ಸಾಮಾನ್ಯರು ಬೀದಿಗೆ ಇಳಿದು ಹೋರಾಟ ಮಾಡೋ ಸಮಯ ಬಂದಿದೆ..!

admin by admin
December 13, 2020
in Newsbeat, Politics, Uncategorized, ರಾಜಕೀಯ
vidhana soudha kanarnataka saakshatv
Share on FacebookShare on TwitterShare on WhatsappShare on Telegram

Related posts

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

July 10, 2026
ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಬಿಜೆಪಿ ನಾಯಕರ ಮಕ್ಕಳು ಯಾಕೆ ಆರ್‌ಎಸ್‌ಎಸ್ ಪ್ರಚಾರಕರಾಗುತ್ತಿಲ್ಲ?- ಬಡವರ ಮಕ್ಕಳನ್ನು ಜೈಲಿಗೆ ಕಳಿಸಿ ಬಿಜೆಪಿ ನಾಯಕರು ಮಜಾ ಮಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

July 10, 2026

ಗಮನವಿಟ್ಟು ಕೇಳಿ.. ಜನ ಸಾಮಾನ್ಯರು ಬೀದಿಗೆ ಇಳಿದು ಹೋರಾಟ ಮಾಡೋ ಸಮಯ ಬಂದಿದೆ..!

ksrtc bmtc protest saakshatvಕರುನಾಡಿನಲ್ಲಿ ಜನ ಸಾಮಾನ್ಯರೇ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಕಡೆ ಕೊರೋನಾ ಆತಂಕ…ಆರ್ಥಿಕವಾಗಿ ಮಾನಸಿಕವಾಗಿ ಕಂಗೆಟ್ಟಿರುವ ಜನ ಸಾಮಾನ್ಯರಿಗೆ ಸಾಲು ಸಾಲು ಬಂದ್‍ಗಳು, ಪ್ರತಿಭಟನೆಗಳು, ಹೋರಾಟಗಳಿಂದ ರೋಸಿ ಹೋಗಿದ್ದಾರೆ.
ಹೌದು, ಸರ್ಕಾರದ ಕೆಲವೊಂದು ಆತುರದ ನಿರ್ಧಾರಗಳಿಂದ ಪ್ರತಿಭಟನೆ ಹೋರಾಟ ನಡೆಯುವುದು ಸಹಜ. ಆದ್ರೆ ನಾವು ಯಾವ ಸ್ಥಿತಿಯಲ್ಲಿ ಇದ್ದೇವೆ ಅನ್ನೋದನ್ನು ನೋಡಬೇಕಾಗುತ್ತದೆ.
ಮರಾಠ ಅಭಿವೃದ್ದಿ ನಿಗಮ ಸ್ಥಾಪನೆಯ ವಿರುದ್ಧ ಕನ್ನಡ ಪರ ಸಂಘಟನೆಗಳು ಬಂದ್ ಗೆ ಕರೆಕೊಟ್ಟಿದ್ದವು. ಆದಾದ ನಂತರ ರೈತರ ಪ್ರತಿಭಟನೆ.. ಭಾರತ ಬಂದ್ ಮತ್ತು ಕರ್ನಾಟಕ ಬಂದ್.. ಅದು ಮುಗಿದ ತಕ್ಷಣ ಈಗ ಸಾರಿಗೆ ನೌಕರರ ಪ್ರತಿಭಟನೆ..
ಕಳೆದ ಏಳೆಂಟು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಗಳಿಂದ ರೋಸಿಹೋಗಿದ್ದು ಮಾತ್ರ ಜನ ಸಾಮಾನ್ಯರು. ಮೊದಲೇ ಆರ್ಥಿಕವಾಗಿ ಕಂಗೆಟ್ಟಿರುವ ಜನ ಸಾಮಾನ್ಯರಿಗೆ ಈ ಬಂದ್, ಪ್ರತಿಭಟನೆಗಳಿಂದ ಸಿಡಿಮಿಡಿಗೊಳ್ಳುವ ಕಾಲ ಕೂಡ ಬಂದಿದೆ.
ರಾಜಕಾರಣಿಗಳ ಮತ್ತು ಸಂಘ ಸಂಸ್ಥೆಗಳ ಸ್ವಪ್ರತಿಷ್ಠೆಯಿಂದಾಗಿ ತೊಂದರೆಯಾಗುತ್ತಿರುವುದು ಮಾತ್ರ ಜನರಿಗೆ. ಹೀಗಾಗಿ ಮುಂದಿನ ದಿನಗಳಲ್ಲಿ ಜನರೇ ದಂಗೆ ಏದ್ರೂ ಅಚ್ಚರಿ ಏನಿಲ್ಲ.
ಒಂದಂತೂ ಸತ್ಯ, ಪ್ರತಿಭಟನೆ, ಹೋರಾಟ ಹಾಗೂ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಡ ಹೇರುವುದು ಪ್ರತಿಯೊಬ್ಬರ ಹಕ್ಕು ಕೂಡ. ಇದನ್ನು ಯಾರು ಕೂಡ ಪ್ರಶ್ನೆ ಮಾಡುವಂಗಿಲ್ಲ. ಆದ್ರೆ ಸಮಯ, ಸಂದರ್ಭ, ಪರಿಸ್ಥಿತಿಯನ್ನು ಕೂಡ ಅರಿತುಕೊಳ್ಳಬೇಕು.
ಕಳೆದ ಎಂಟು ಹತ್ತು ತಿಂಗಳುಗಳಿಂದ ಜನರಿಗೆ ಎಷ್ಟು ತೊಂದರೆಯಾಗಿದೆ ಅನ್ನೋದು ಯಾರಿಗೂ ಗೊತ್ತಿಲ್ಲದ ವಿಚಾರವೇನೂ ಅಲ್ಲ. ಒಂದು ಹೊತ್ತಿನ ಊಟಕ್ಕೂ ಎಷ್ಟು ಒದ್ದಾಟ ನಡೆಸಬೇಕಾಯ್ತು ಅಂತ ಅದನ್ನು ಅನುಭವಿಸಿದವರಿಗೆ ಗೊತ್ತು.
ಇನ್ನು ಹೋರಾಟದ ಮುಂಚೂಣಿಯಲ್ಲಿರು ನಾಯಕ ಕೋಡಿಹಳ್ಳಿ ಚಂದ್ರ ಶೇಖರ್ ಅವರು ಈಗ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರ ಶೇಖರ್ ಅವರಿಗೆ ರೈತರ ಸಮಸ್ಯೆಗಳನ್ನೇ ಬಗೆ ಹರಿಸಲು kannada rakshana vedeike saakshatv narayana gowdaಸಾಧ್ಯವಾಗಿಲ್ಲ. ಇದೀಗ ಸಾರಿಗೆ ನೌಕರರ ಸಮಸ್ಯೆಯನ್ನು ಬಗೆ ಹರಿಸುತ್ತಾರೆ ಅನ್ನೋ ಪ್ರಶ್ನೆಗಳು ಕೇಳಿಬರುತ್ತಿವೆ.
ಅದೇನೇ ಇರಲಿ, ಪ್ರತಿಭಟನೆಗೆ ಬೆಂಬಲ ನೀಡುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದ್ರೆ ಕೋಡಿ ಹಳ್ಳಿ ಚಂದ್ರ ಶೇಖರ್ ಅವರಿಗೊಂದು ಪ್ರಶ್ನೆ ಇದೆ. ಸರ್ಕಾರಿ ನೌಕರರಿಗೆ ಬೆಂಬಲ ನೀಡುವುದು ಸರಿ ಓಕೆ. ಒಪ್ಪಿಕೊಳ್ಳೋಣ. ಆದ್ರೆ ನೆರೆ, ಪ್ರವಾಹ ಹೀಗೆ ರೈತರ ಸಮಸ್ಯೆಗಳಿಗೆ ಎಷ್ಟರ ಮಟ್ಟಿಗೆ ಪರಿಹಾರ ನೀಡಲು ಯಶಸ್ವಿಯಾಗಿದ್ದಾರೆ. ಹಳ್ಳಿ ಪ್ರದೇಶದ ರೈತರಿಗೆ ನಮ್ಮ ರೈತ ಸಂಘಟನೆಗಳಿಂದ ಎಷ್ಟರ ಮಟ್ಟಿಗೆ ಸಹಕಾರಿಯಾಗಿದೆ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಡುವುದು ಯಾರು ?
ಅದೆಲ್ಲಾ ಇರಲಿ, ಸಾರಿಗೆ ನೌಕರರ ಪ್ರತಿಭಟನೆಯನ್ನೇ ಮುಂದಿಟ್ಟುಕೊಳ್ಳೋಣ. ಈ ಪ್ರತಿಭಟನೆಯಿಂದ ರಾಜ್ಯದ ಗ್ರಾಮೀಣ ಭಾಗದ ರೈತರಿಗೆ ತೊಂದರೆಯಾಗಿಲ್ವಾ ? ಕೂಲಿ ಕಾರ್ಮಿಕರಿಗೆ ತೊಂದರೆಯಾಗಿಲ್ವಾ ? ದಿನ ನಿತ್ಯ ಕೆಲಸ ಮಾಡುವ ಅದೆಷ್ಟು ಮಂದಿ ನೌಕಕರಿಗೆ ತೊಂದರೆಯಾಗಿಲ್ವಾ ?
ಪ್ರತಿಭಟನೆಯ ರಾಜಕೀಯದಾಟದಲ್ಲಿ ಜನ ಸಾಮಾನ್ಯರ ತೊಂದರೆಗಳಿಗೆ ಪರಿಹಾರ ನೀಡುವವರು ಯಾರು ? ಸರ್ಕಾರ ಮತ್ತು ರಾಜಕೀಯ ಪಕ್ಷಗಳು, ಜನ ನಾಯಕರು ಎಲ್ಲಾ ಸಭೆ, ಸಂಧಾನ ಸಭೆ ಹಾಗೂ ಪರೋಕ್ಷ ವಾಗ್ದಾಳಿಗಳ ಮೂಲಕ ತಮ್ಮ ತೀಟೆಯನ್ನು ತೀರಿಸಿಕೊಳ್ಳುತ್ತಿದ್ದಾರೆ. ಆದ್ರೆ ಪ್ರತಿ ದಿನ ಕೂಲಿ ಕೆಲಸವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ಜನ ಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಯಾರು ಕೊಡುತ್ತಾರೆ ?
farmers protest saakshatv kodihalli chandrashekharಅಷ್ಟೇ ಅಲ್ಲ, ಇದೀಗ ಇದೇ ಪ್ರತಿಭಟನೆಯನ್ನು ಮಂದಿಟ್ಟುಕೊಂಡು ಖಾಸಗಿ ಬಸ್ ಮಾಲೀಕರ ಸಂಘ, ಮತ್ತೊಂದೆಡೆ ಖಾಸಗಿ ಶಿಕ್ಷಣ ಸಂಸ್ಥೆಗಳು ಬಂದ್ ಮತ್ತು ಪ್ರತಿಭಟನೆ ನಡೆಸಲು ಯೋಜನೆ ರೂಪಿಸುತ್ತಿವೆ.
ಒಟ್ಟಿನಲ್ಲಿ ಈ ಎಲ್ಲಾ ವಿಚಾರಗಳನ್ನು ನೋಡಿದಾಗ ಮತ್ತು ಗಮನಿಸಿದಾಗ ಈ ಪ್ರತಿಭಟನೆ, ಬಂದ್ ಹಿಂದೆ ರಾಜಕೀಯ ಲೆಕ್ಕಚಾರಗಳೂ ಇವೆ. ರಾಜಕೀಯ ಪಕ್ಷಗಳ ಕೈವಾಡವೂ ಇದೆ ಎಂಬುದು ಗುಟ್ಟಾಗಿ ಏನು ಉಳಿದಿಲ್ಲ.
ಒಟ್ಟಿನಲ್ಲಿ ಕರುನಾಡಿನಲ್ಲಿ ಇದೇ ರೀತಿ ಪ್ರತಿಭಟನೆ ನಡೆದ್ರೆ ಕೊನೆಗೂ ಸರ್ಕಾರ ಮತ್ತು ಸಂಘಟನೆಗಳ ವಿರುದ್ಧ ಜನ ಸಾಮಾನ್ಯರು ತಿರುಗಿ ಬೀಳುವ ದಿನ ದೂರವಿಲ್ಲ ಅನ್ಸುತ್ತೆ.

Tags: bengalurubjp govtbmtc ksrtc protestbsy govtCongressJDSkarnatakakodi halli chandrashekarlakshman savadividhan soudha
ShareTweetSendShare
Join us on:

Related Posts

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

by Shwetha
July 10, 2026
0

ಡೊನಾಲ್ಡ್ ಟ್ರಂಪ್ ಅವರು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ ನಡುವೆ ಇರಾನ್ ತನ್ನ ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂದು ಹೇಳಿದ್ದಾರೆ. ಇರಾನ್‌ಗೆ ನಾನೇ ನಂಬರ್-1 ಟಾರ್ಗೆಟ್. ಇರಾನ್ ನಾಯಕರು...

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಬಿಜೆಪಿ ನಾಯಕರ ಮಕ್ಕಳು ಯಾಕೆ ಆರ್‌ಎಸ್‌ಎಸ್ ಪ್ರಚಾರಕರಾಗುತ್ತಿಲ್ಲ?- ಬಡವರ ಮಕ್ಕಳನ್ನು ಜೈಲಿಗೆ ಕಳಿಸಿ ಬಿಜೆಪಿ ನಾಯಕರು ಮಜಾ ಮಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 10, 2026
0

ಬೆಂಗಳೂರು: ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದು, ಬಿಜೆಪಿಯ ದೊಡ್ಡ ನಾಯಕರ ಮಕ್ಕಳು ಯಾರು ಕೂಡ ಆರ್‌ಎಸ್‌ಎಸ್‌ನಲ್ಲಿ ಪೂರ್ಣಕಾಲಿಕ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ರಾಜ್ಯ ರಾಜಕಾರಣಕ್ಕೆ ನಾನು ಮರಳುವುದು ಖಚಿತ- ಸರಿಯಾದ ಸಮಯ ಬಂದಾಗ ಎಲ್ಲವನ್ನೂ ಬಿಚ್ಚಿಡ್ತೀನಿ: ಟೆಂಡರ್ ವಿಚಾರದಲ್ಲಿ ಡಿಕೆಶಿಗೆ ಎಚ್ ಡಿಕೆ ಎಚ್ಚರಿಕೆ

by Shwetha
July 10, 2026
0

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುತ್ತಾರೆಯೇ ಎಂಬ ಚರ್ಚೆಗಳಿಗೆ ಈಗ ಸ್ವತಃ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ...

ಇನ್ನೆರಡು ದಿನ ಮಾತ್ರ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ಇನ್ನೆರಡು ದಿನ ಮಾತ್ರ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

by Shwetha
July 10, 2026
0

ಹವಾಮಾನ ಇಲಾಖೆಯ (IMD) ಪ್ರಕಾರ, ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಇನ್ನೆರಡು ದಿನಗಳ ಕಾಲ ಮುಂದುವರಿಯಲಿದ್ದು, ಬಳಿಕ ಮಳೆಯ ತೀವ್ರತೆ ಕಡಿಮೆಯಾಗುವ...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿಕೆ ಶಿವಕುಮಾರ್ ಇತಿಹಾಸದಲ್ಲೇ ಅತ್ಯಂತ ಪುಕ್ಕಲು ಮತ್ತು ಅಸಮರ್ಥ ಮುಖ್ಯಮಂತ್ರಿ- ಡಿಕೆಶಿ ನಾಲಾಯಕ್ ಸರ್ಕಾರದಲ್ಲಿ ರೈತರಿಗಿಲ್ಲ ರಕ್ಷಣೆ: ವಿಪಕ್ಷ ನಾಯಕ ಆರ್ ಅಶೋಕ ಕಿಡಿಕಾರಿದ್ದೇಕೆ?

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳು ಕಳೆದರೂ ಪೂರ್ಣ ಪ್ರಮಾಣದ ಆಡಳಿತ ನಡೆಸಲು ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram