ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊನೆಗೂ 4 ದಿನಗಳ ಬಳಿಕ ಸಾರಿಗೆ ಮುಷ್ಕರ ಅಂತ್ಯ, ಕೋಡಿಹಳ್ಳಿ ಚಂದ್ರಶೇಖರ್ ಅಧಿಕೃತ ಘೋಷಣೆ

Kariyappa N by Kariyappa N
December 14, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

                                   ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 3 ತಿಂಗಳ ಡೆಡ್‍ಲೈನ್
ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದೇ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನಿಗಮಗಳ ನೌಕರರು ಆರಂಭಿಸಿದ್ದ ಮುಷ್ಕರ ನಾಲ್ಕು ದಿನಗಳ ಬಳಿಕ ಅಂತ್ಯಗೊಂಡಿದೆ.
ಸಾರಿಗೆ ನೌಕರರ 10 ಬೇಡಿಕೆಗಳ ಪೈಕಿ ಸರ್ಕಾರಿ ನೌಕರರೆಂದು ಪರಿಗಣಿಸುವ ಪ್ರಮುಖ ಬೇಡಿಕೆ ಹೊರತುಪಡಿಸಿ 9 ಬೇಡಿಕೆಗಳನ್ನು ಈಡೇರಿಸುವುದಾಗಿ ರಾಜ್ಯ ಸರ್ಕಾರ ಲಿಖಿತ ಭರವಸೆ ನೀಡಿದೆ. ಈ ಲಿಖಿತ ಭರವಸೆಯನ್ನು 3 ತಿಂಗಳ ಒಳಗೆ ಈಡೇರಿಸುವಂತೆ ಡೆಡ್‍ಲೈನ್ ನೀಡಿ ಮುಷ್ಕರ ಅಂತ್ಯಗೊಳಿಸಲಾಗಿದೆ. ನಾಲ್ಕು ದಿನಗಳ ಬಳಿಕ ಸಾರಿಗೆ ಮುಷ್ಕರ ಅಂತ್ಯಗೊಳಿಸಲಾಗಿದ್ದು, ಇಂದು ಹಾಗೂ ನಾಳೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ನಾಳೆಯಿಂದ ಪೂರ್ಣಪ್ರಮಾಣದಲ್ಲಿ ನೌಕರರು ಕೆಲಸಕ್ಕೆ ಹಾಜರಾಗಲಿದ್ದಾರೆ ಎಂದು ಫ್ರೀಡಂಪಾರ್ಕ್‍ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಅಧಿಕೃತ ಘೋಷಣೆ ಮಾಡಿದ್ದಾರೆ.


ನಿನ್ನೆಯೂ ಸಹ ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸಾರಿಗೆ ಮುಷ್ಕರ ಅಂತ್ಯಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿತ್ತು. ಇದರ ಬೆನ್ನಲ್ಲೇ ಮೆಜೆಸ್ಟಿಕ್ ಸೇರಿ ಕೆಲವೆಡೆ ಬಸ್ ಸಂಚಾರವೂ ಆರಂಭವಾಗಿತ್ತು. ಆದರೆ, ಸವದಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಪಾಲ್ಗೊಂಡಿದ್ದ ನೌಕರರು, ಫ್ರೀಡಂಪಾರ್ಕ್‍ಗೆ ತೆರಳಿ ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ಕೋಡಿಹಳ್ಳಿ ಚಂದ್ರಶೇಖರ್ ಜತೆ ಚರ್ಚಿಸಿದ ಬಳಿಕ ಮುಷ್ಕರ ಮುಂದುವರೆಸಲಾಗುವುದು ಎಂದು ಹೇಳುವ ಮೂಲಕ ಗೊಂದಲ ಸೃಷ್ಟಿಯಾಗಿತ್ತು.
ಪ್ರಯಾಣಿಕರ ಹಿತದೃಷ್ಟಿಯಿಂದ ಸಾರಿಗೆ ಮುಷ್ಕರ ಹಿಂಪಡೆಯಲು ಚಿಂತನೆ ನಡೆದಿದೆ ಎಂದು ಇಂದು ಬೆಳಿಗ್ಗೆ ಕೋಡಿಹಳ್ಳಿ ಚಂದ್ರಶೇಖರ್ ಸುಳಿವು ನೀಡಿದ್ದರು. ಈ ಸಂಬಂಧ ಫ್ರೀಡಂಪಾರ್ಕಿನಲ್ಲಿ ಸತ್ಯಾಗ್ರಹ ನಡೆಸುತ್ತಿರುವ ನೌಕರರ ಜತೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದರು.
ಕೋಡಿಹಳ್ಳಿ ಚಂದ್ರಶೇಖರ್ ಫ್ರೀಡಂಪಾರ್ಕ್‍ಗೆ ತೆರಳಿದ ಬಳಿಕ ಸರ್ಕಾರ ಲಿಖಿತ ರೂಪದಲ್ಲಿ ಭರವಸೆ ನೀಡಬೇಕೆಂದು ನೌಕರರು ಪಟ್ಟು ಹಿಡಿದರು. 10 ಬೇಡಿಕೆಗಳ ಪೈಕಿ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವ ಬೇಡಿಕೆ ಹೊರತುಪಡಿಸಿ 9 ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಲಿಖಿತ ರೂಪದಲ್ಲಿ ನೀಡಿತು. ಆದರೂ. ಗೊಂದಲ ಮುಂದುವರೆಯಿತು.

Related posts

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

August 11, 2026
asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

August 11, 2026


ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಜಾರಿ ಮಾಡುವ ನೀಡುವ ಭರವಸೆಯನ್ನು ಖುದ್ದು ಡಿಸಿಎಂ ಲಕ್ಷ್ಮಣ್ ಸವದಿ ಫ್ರೀಡಂಪಾರ್ಕ್‍ಗೆ ಬಂದು ನೀಡುವಂತೆ ಪಟ್ಟುಹಿಡಿದರು. ಆದರೆ, ಸರ್ಕಾರದ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದಾಗ 3 ತಿಂಗಳ ಗಡುವು ನೀಡಿ 4 ದಿನಗಳ ಬಳಿಕ ಮುಷ್ಕರ ಅಂತ್ಯಗೊಳಿಸಲಾಯಿತು. ತಮ್ಮ ಪ್ರಮುಖ ಬೇಡಿಕೆಯಾದ ಸರ್ಕಾರಿ ನೌಕರರೆಂದು ಪರಿಗಣಿಸುವ ಬೇಡಿಕೆಯಿಂದ ಹಿಂದೆ ಸರಿಯದಂತೆ ಪ್ರತಿಭಟನಾನಿರತ ನೌಕರರು ಪಟ್ಟು ಹಿಡಿದರು. ಆದರೆ, ಸರ್ಕಾರಕ್ಕೆ 3 ತಿಂಗಳ ಗಡುವು ನೀಡೋಣ, ಪ್ರಯಾಣಿಕರ ಹಿತದೃಷ್ಟಿಯಿಂದ ಮುಷ್ಕರ ವಾಪಸ್ ಪಡೆಯೋಣ. ಸರ್ಕಾರ ಬೇಡಿಕೆ ಈಡೇರಿಸದೇ ನಿರ್ಲಕ್ಷ್ಯ ವಹಿಸಿದರೆ ಮತ್ತೆ ಹೋರಾಟ ಮಾಡುವ ಎಚ್ಚರಿಕೆ ನೀಡೋಣ ಎಂದು ಹೇಳುವ ಮೂಲಕ ಸಾರಿಗೆ ನೌಕರರ ಮುಷ್ಕರ ಅಂತ್ಯಗೊಂಡಿದೆ ಎಂದು ಸಾರಿಗೆ ನೌಕರರ ಹೋರಾಟದ ನೇತೃತ್ವ ವಹಿಸಿದ್ದ ಕೋಡಿಹಳ್ಳಿ ಚಂದ್ರಶೇಖರ್ ಅಧಿಕೃತ ಘೋಷಣೆ ಮಾಡಿದರು.

 

 

ಇದರೊಂದಿಗೆ ಸಾರಿಗೆ ನೌಕರರ ಮುಷ್ಕರ ಕೊನೆಗೂ ಅಂತ್ಯಗೊಂಡಿದ್ದು, ಮೆಜೆಸ್ಟಿಕ್‍ನಿಂದ ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಆರಂಭವಾಗಿದೆ. ರಾಜ್ಯದ ಉಳಿದ ಜಿಲ್ಲೆಗಳಿಂದಲೂ ಸರ್ಕಾರಿ ಬಸ್ ಸಂಚಾರ ಆರಂಭವಾಗಿದೆ. ನಾಳೆಯಿಂದ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭವಾಗಲಿದೆ ಎಂದು ಸಾರಿಗೆ ನೌಕರರು ತಿಳಿಸಿದ್ದಾರೆ.

ಸರ್ಕಾರ ನೀಡಿದ 9 ಭರವಸೆಗಳು
1. ಸಾರಿಗೆ ನಿಗಮಗಳ ನೌಕರರಿಗೆ ಆರೋಗ್ಯ ಭಾಗ್ಯ ಯೋಜನೆ ವಿಸ್ತರಿಸು ತೀರ್ಮಾನ
2. ಕೋವಿಡ್‍ನಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ ಆರೋಗ್ಯ ಸಂಜೀವಿನಿ ವಿಮಾ ಯೋಜನೆಯಡಿ 30 ಲಕ್ಷ ಪರಿಹಾರ
3. ಸಾರಿಗೆ ನೌಕರರನ್ನೂ 6ನೇ ವೇತನ ಆಯೋಗದ ವ್ಯಾಪ್ತಿಗೆ ತರಲು ಒಪ್ಪಿಗೆ ನೀಡಿದ್ದು, ಆರ್ಥಿಕ ಅಂಶಗಳನ್ನು ಪರಿಗಣಿಸಿ ಮುಂದಿನ ದಿನಗಳಲ್ಲಿ ತೀರ್ಮಾನ.
4. ಸಿಬ್ಬಂದಿ ಕರ್ತವ್ಯ ನಿರ್ವಹಿಸಿದ ಸಂದರ್ಭ 2020ರ ಜನವರಿಯಿಂದ ಸ್ಥಗಿತಗೊಂಡಿದ್ದ ಭತ್ಯೆ(ಬಾಟಾ) ಆರಂಭ
5. ಅಂತರ್ ನಿಗಮ ವರ್ಗಾವಣೆಗೆ ಸೂಕ್ತ ನೀತಿ ರಚನೆಗೆ ಒಪ್ಪಿಗೆ
6. ಮೇಲಧಿಕಾರಿಗಳ ಕಿರುಕುಳ ತಡೆಗೆ ಸಮಿತಿ ರಚಿಸುಸವುದು ಸೇರಿ ಆಡಳಿತ ವ್ಯವಸ್ಥೆ ರೂಪಿಸಲು ತೀರ್ಮಾನ
7. ಸಿಬ್ಬಂದಿಯ ತರಬೇತಿ ಅವಧಿ 2 ವರ್ಷದಿಂದ 1 ವರ್ಷಕ್ಕೆ ಇಳಿಸಲು ತೀರ್ಮಾನ
8. ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಮಾನವ ಸಂಪನ್ಮೂಲ ವ್ಯವಸ್ಥೆ ಜಾರಿಗೆ ಸಮ್ಮತಿ
9. ಎನ್‍ಐಎನ್‍ಸಿ (ನಾಟ್ ಇಶ್ಯೂಡ್-ನಾಟ್ ಕಲೆಕ್ಟೆಡ್) ಪದ್ದತಿ ಬದಲಾಗಿ ಪರ್ಯಾಯ ವ್ಯವಸ್ಥೆ ಜಾರಿ ಮಾಡಲು ರಾಜ್ಯ ಸರ್ಕಾರ ಲಿಖಿತ ಒಪ್ಪಿಗೆ ನೀಡಿದೆ.

ರಾಜ್ಯ ಸರ್ಕಾರದ ಲಿಖಿತ ಭರವಸೆ ಮೇರೆಗೆ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆದರೆ, ಸರ್ಕಾರ ಕೊಟ್ಟ ಭರವಸೆಯಂತೆ ನಡೆದುಕೊಳ್ಳುತ್ತಾ, ಮಾತು ಮರೆತು ಭರವಸೆ ನೀಡದೆ ನಿರ್ಲಕ್ಷ್ಯ ಧೋರಣೆ ತಳೆಯುತ್ತಾ ಎಂಬುದನ್ನು ಕಾದು ನೋಡಬೇಕಿದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 4 day after endB S YADIYURAPPAfreedom park strikekodihalli chandrashekarKSRTClakshman savadimbtctransport wokers strike
ShareTweetSendShare
Join us on:

Related Posts

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram