ಕೋವಿಡ್ -19 ಕಾರಣದಿಂದಾಗಿ ಈ ವರ್ಷ ಸಂಸತ್ತಿನ ಚಳಿಗಾಲದ ಅಧಿವೇಶನ ಇಲ್ಲ
ಹೊಸದಿಲ್ಲಿ, ಡಿಸೆಂಬರ್15: ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಈ ವರ್ಷ ಸಂಸತ್ತಿನ ಚಳಿಗಾಲದ ಅಧಿವೇಶನ ಇರುವುದಿಲ್ಲ ಎಂದು ಸರ್ಕಾರ ತಿಳಿಸಿದೆ. ಕಾಂಗ್ರೆಸ್ ಸಂಸದ ಆಧೀರ್ ರಂಜನ್ ಚೌಧರಿ ಅವರಿಗೆ ಬರೆದ ಪತ್ರದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸಂಸತ್ತಿನ ಮುಂದಿನ ಅಧಿವೇಶನವನ್ನು ಈ ಮೊದಲು ನಡೆಸಲು ಸಿದ್ಧರಿದ್ದಾರೆ ಎಂದು ಹೇಳಿದರು.

ಕೋವಿಡ್ -19 ಸಾಂಕ್ರಾಮಿಕ ಸೃಷ್ಟಿಸಿರುವ ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು 2021 ರ ಜನವರಿಯಲ್ಲಿ 2021 ರ ಬಜೆಟ್ ಅಧಿವೇಶನ ನಡೆಸುವುದು ಸೂಕ್ತವಾಗಿದೆ ಎಂದು ಜೋಶಿ ಚೌಧರಿಗೆ ತಿಳಿಸಿದರು.
ಸಾಂಕ್ರಾಮಿಕವನ್ನು ತಡೆಗಟ್ಟಲು ಚಳಿಗಾಲದ ತಿಂಗಳುಗಳು ಬಹಳ ನಿರ್ಣಾಯಕವಾಗಿವೆ. ಏಕೆಂದರೆ ಈ ಅವಧಿಯಲ್ಲಿ ದೆಹಲಿಯಲ್ಲಿ ಇತ್ತೀಚೆಗೆ ಪ್ರಕರಣಗಳು ಹೆಚ್ಚಿದೆ. ಪ್ರಸ್ತುತ, ನಾವು ಡಿಸೆಂಬರ್ ನಡುವಿನ ವಾರದಲ್ಲಿದ್ದು, ಕೋವಿಡ್ ಲಸಿಕೆಯನ್ನು ಶೀಘ್ರದಲ್ಲೇ ನಿರೀಕ್ಷಿಸಲಾಗಿದೆ.

ಈ ನಿಟ್ಟಿನಲ್ಲಿ, ನಾನು ವಿವಿಧ ರಾಜಕೀಯ ಪಕ್ಷಗಳ ಮುಖಂಡರನ್ನು ಅನೌಪಚಾರಿಕವಾಗಿ ಸಂಪರ್ಕಿಸಿದ್ದೇನೆ. ಅವರು ನಡೆಯುತ್ತಿರುವ ಸಾಂಕ್ರಾಮಿಕ ರೋಗದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಹಾಗೂ ಚಳಿಗಾಲದ ಅಧಿವೇಶನವನ್ನು ರದ್ದುಗೊಳಿಸಲು ಉದ್ದೇಶಿಸಿದ್ದಾರೆ ಎಂದು ಜೋಶಿ ಹೇಳಿದರು.
ಸೆಪ್ಟೆಂಬರ್ನಲ್ಲಿ, ಅನೇಕ ಸಂಸದರಿಗೆ ಕೊರೋನವೈರಸ್ ಧೃಡಪಟ್ಟ ನಂತರ ಮಾನ್ಸೂನ್ ಅಧಿವೇಶನವನ್ನು ಮೊಟಕುಗೊಳಿಸಲಾಯಿತು. 19 ಲೋಕಸಭಾ ಸಂಸದರು ಮತ್ತು ಎಂಟು ರಾಜ್ಯಸಭಾ ಸಂಸದರಿಗೆ ಕೊರೋನಾ ಸೋಂಕು ತಗುಲಿರುವುದು ಪರೀಕ್ಷೆಯಲ್ಲಿ ಪತ್ತೆಯಾಯಿತು.








