ADVERTISEMENT
Monday, August 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಮಿತ್ ಶಾ ಆಟ, ಆಪ್ತನ ರಹಸ್ಯ ಭೇಟಿ, ನಾಯಕತ್ವ ಬದಲಾವಣೆ ಸಿಕ್ತಾ ಮುನ್ಸೂಚನೆ..?

Kariyappa N by Kariyappa N
December 18, 2020
in Newsbeat, Politics, Samagra karnataka, ರಾಜ್ಯ
bjp
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ವೈಖರಿ ಬಗ್ಗೆ ತಲೆ ಕೆಡಿಸಿಕೊಂಡಿಲ್ಲವೆಂಬಂತೆ ಕಾಣುತ್ತಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸದ್ದಿಲ್ಲದೆ ರಹಸ್ಯ ಆಟ ಆರಂಭಿಸಿದ್ದಾರೆ. ತಮ್ಮ ಅತ್ಯಾಪ್ತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಅವರನ್ನು ಸದ್ದಿಲ್ಲದೇ ಬೆಂಗಳೂರಿಗೆ ಕಳಿಸಿ ವರದಿ ತರಿಸಿಕೊಂಡಿರುವುದು ರಾಜ್ಯ ಬಿಜೆಪಿ ಪಾಳಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

bjp
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಆರ್‍ಎಸ್‍ಎಸ್ ಕಚೇರಿ ಕೇಶವಕೃಪಾಕ್ಕೆ ಭೇಟಿ ನೀಡಿದ್ದ ಭೂಪೇಂದ್ರ ಯಾದವ್,ಸಂಘದ ಹಿರಿಯ ನಾಯಕರ ಜೊತೆಗೆ ರಾಜ್ಯದ ರಾಜಕೀಯ ಬೆಳವಣಿಗೆ ಹಾಗೂ ಸರ್ಕಾರದ ಆಡಳಿತ ವೈಖರಿ, ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ರಾಜ್ಯ ಬಿಜೆಪಿ ಅದರಲ್ಲೂ ಸರ್ಕಾರ ನಡೆಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬದಲಾವಣೆ ಹಿನ್ನೆಲೆಯಲ್ಲಿ ಭೂಪೇಂದ್ರ ಯಾದವ್ ರಹಸ್ಯ ಭೇಟಿ ಮಾಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆದಷ್ಟು ಶೀಘ್ರ ಸಿಎಂ ಗಾದಿಯಿಂದ ಕೆಳಗಿಳಿಸಲಾಗುತ್ತಿದೆ ಎಂಬ ಬಿಜೆಪಿ ವಲಯದಲ್ಲಿ ಬೀಸುತ್ತಿರುವ ಗಾಳಿ ಸುದ್ದಿಗೆ ಈ ಬೆಳವಣಿಗೆ ಪುಷ್ಠಿ ನೀಡಿದಂತಾಗಿದೆ.

Related posts

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

August 24, 2026
ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

August 23, 2026


ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ಹಾಗೂ ಯಡಿಯೂರಪ್ಪ ಅವರಿಗೆ ಪರ್ಯಾಯ ನಾಯಕರ ಹುಡುಕಾಟದಲ್ಲಿರುವ ಹೈಕಮಾಂಡ್, ಮುಖ್ಯಮಂತ್ರಿ ಬದಲಾವಣೆಯ ಮೊದಲ ಅಸ್ತ್ರ ಪ್ರಯೋಗಿಸಲು ಸಜ್ಜಾಗಿದೆ ಎಂದು ಉನ್ನತ ಮೂಗಳೂ ಹೇಳುತ್ತಿವೆ.
ನಾಯಕತ್ವ ಬದಲಾವಣೆ ಮಾಡಿದರೆ ಎದುರಾಗಬಹುದಾದ ಸಮಸ್ಯೆಗಳು, ಯಾರನ್ನು ಮುಂದಿನ ನಾಯಕರಾಗಿ ಆಯ್ಕೆ ಮಾಡಿದರೆ ಸೂಕ್ತ, ಸದ್ಯದ ರಾಜಕೀಯ ಸ್ಥಿತಿಗತಿಗಳು, ಪರಿಸ್ಥಿಗಳ ಗ್ರೌಂಡ್ ರಿಪೋರ್ಟನ್ನು  ಅಮಿತ್ ಶಾ ಪಡೆದಿದ್ದಾರೆ ಎನ್ನಲಾಗಿದೆ.
ಸಚಿವ ಸಂಪುಟ ವಿಸ್ತರಣೆ ಗೊಂದಲ, ಇದರಿಂದ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನ, ನಾಯಕತ್ವ ಬದಲಾವಣೆ ಕುರಿತು ಪದೇ ಪದೇ ಕೇಳಿಬರುತ್ತಿರುವ ವದಂತಿಗಳ ಹಿನ್ನಲೆಯಲ್ಲಿ ಆರ್‍ಎಸ್‍ಎಸ್ ನಾಯಕರ ಜೊತೆ ಮಾತುಕತೆ ನಡೆಸಿ ಭೂಪೇಂದ್ರ ಯಾದವ್ ಅಭಿಪ್ರಾಯ ಸಂಗ್ರಹ ಮಾಡಿ ಹೈಕಮಾಂಡ್‍ಗೆ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.


ಸಾಮಾನ್ಯವಾಗಿ ರಾಷ್ಟ್ರೀಯ ನಾಯಕರು ಯಾರೇ ರಾಜ್ಯಕ್ಕೆ ಆಗಮಿಸಿದರೂ ರಾಜ್ಯ ಬಿಜೆಪಿ ಕಚೇರಿಯಿಂದ ಮಾಹಿತಿ ನೀಡಲಾಗುತ್ತದೆ. ಆದರೆ ಈ ಬಾರಿ ಬಿಜೆಪಿ ಕಚೇರಿಗೂ ಮಾಹಿತಿ ನೀಡದೆ ಭೂಪೇಂದ್ರ ಯಾದವ್ ಬೆಂಗಳೂರಿಗೆ ಬಂದಿದ್ದಾರೆ.
ಬೆಂಗಳೂರಿಗೆ ಬಂದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್, ಆರ್‍ಎಸ್‍ಎಸ್ ಕಚೇರಿ ಹುಡುಕಲು ಹರಸಾಹಸ ನಡೆಸಿದ್ದಾರೆ. ಚಾಮರಾಜ ಪೇಟೆಗೆ ಹೋಗಿ ಆರ್.ಎಸ್.ಎಸ್ ಕಚೇರಿ ಕೇಶವಕೃಪಾಕ್ಕಾಗಿ ಹುಡುಕಾಡಿದ್ದಾರೆ. ಕೇಶವಾಕೃಪಾ ಸಮೀಪವೇ ಹೋಗಿದ್ದರೂ ಭೂಪೇಂದ್ರ ಯಾದವ್‍ಗೆ ಗೊತ್ತಾಗಲೇ ಇಲ್ಲವಂತೆ. ಕೊನೆಗೆ ಬಳಿಕ ಸ್ಥಳೀಯರನ್ನ ಕೇಳಿ ಕೇಶವಕೃಪಾಗೆ ತೆರಳಿದರು ಎನ್ನಲಾಗಿದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: amith shawB S YADIYURAPPABhupendra yadavBJPbjp Leadership changekarnatakasecret visit to Bangalore
ShareTweetSendShare
Join us on:

Related Posts

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

by Shwetha
August 23, 2026
0

ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

by Shwetha
August 23, 2026
0

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಇ20 (ಶೇ. 20ರಷ್ಟು ಎಥೆನಾಲ್ ಮಿಶ್ರಿತ ಇಂಧನ) ನೀತಿಯು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನೇರ ಕಾರಣವಾಗಿದೆ ಎಂದು ಕಾಂಗ್ರೆಸ್...

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

by Shwetha
August 23, 2026
0

ಬೆಂಗಳೂರು: ನೈಸ್ ರಸ್ತೆಯ ಅಕ್ರಮ ಟೋಲ್ ವಸೂಲಾತಿ ವಿರುದ್ಧ ಸಮರ ಸಾರಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದೀಗ ಮತ್ತಷ್ಟು ಆಕ್ರಮಣಕಾರಿ ನಿಲುವು ತಳೆದಿದ್ದಾರೆ. ಎಫ್‌ಐಆರ್ ದಾಖಲಾದರೂ...

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

by Shwetha
August 23, 2026
0

ತಿರುವನಂತಪುರಂ: ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿದ್ದ ಮಂಗಳೂರು ಪ್ರದೇಶವನ್ನು ನೈರುತ್ಯ ರೈಲ್ವೆಗೆ ವರ್ಗಾವಣೆ ಮಾಡಿ ರೈಲ್ವೆ ಮಂಡಳಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ತೀವ್ರ ಆಕ್ಷೇಪ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram