ADVERTISEMENT
Friday, February 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜ.1ರಿಂದ ಸ್ಕೂಲ್ ಡೇಟ್ ಫಿಕ್ಸ್, ಸ್ಕೂಲ್‍ಬ್ಯಾಗ್, ಬುಕ್ಸ್ ರೆಡಿ ಮಾಡ್ಕೊಳ್ಳಿ ಮಕ್ಕಳೇ..!

Kariyappa N by Kariyappa N
December 20, 2020
in Newsbeat, Politics, Samagra karnataka, ರಾಜ್ಯ
School bag
Share on FacebookShare on TwitterShare on WhatsappShare on Telegram

Related posts

60,000 ಖಾಲಿ ಹುದ್ದೆಗಳ ಭರ್ತಿ: ಉದ್ಯೋಗ ಹೋರಾಟದ ಬಳಿಕ ಸರ್ಕಾರ ಸಿದ್ಧತೆ

60,000 ಖಾಲಿ ಹುದ್ದೆಗಳ ಭರ್ತಿ: ಉದ್ಯೋಗ ಹೋರಾಟದ ಬಳಿಕ ಸರ್ಕಾರ ಸಿದ್ಧತೆ

February 27, 2026
ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಸರ್ಕಾರದ ಮಹತ್ವದ ನಿರ್ಧಾರ

ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಸರ್ಕಾರದ ಮಹತ್ವದ ನಿರ್ಧಾರ

February 27, 2026

ಜ.1ರಿಂದ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಕ್ಲಾಸ್ ಶುರು,, ವಿದ್ಯಾಗಮವೂ ಪುನರಾರಂಭ

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 10 ಮತ್ತು 12ನೇ ತರಗತಿಗಳನ್ನು 2021ರ ಜನವರಿ 1ರಿಂದ ಆರಂಭಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಾಲಾರಂಭ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆರೋಗ್ಯ ಸಚಿವರು ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯಲ್ಲಿ ರಾಜ್ಯದ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ನೀಡಿರುವ ವರದಿಯನ್ನು ಪರಿಶೀಲಿಸಿ ಶಾಲಾರಂಭದ ನಿರ್ಧಾರಕ್ಕೆ ಬರಲಾಯಿತು ಎಂದು ಹೇಳಿದ್ದಾರೆ.

school meeting
ಜ. 1ರಿಂದ 6ರಿಂದ 9ನೇ ತರಗತಿಗಳಿಗೆ ಜನವರಿ 1ರಿಂದ ವಿದ್ಯಾಗಮ ತರಗತಿಗಳೂ ಪುನರಾರಂಭವಾಗಲಿವೆ. ಕೋವಿಡ್-19 ರಾಜ್ಯ ಸಲಹಾ ಸಮಿತಿ ನೀಡಿದ ನಿರ್ದೇಶನಗಳನ್ನು ವಿವರಿಸಿದ ಸುರೇಶ್ ಕುಮಾರ್, 10 ಮತ್ತು 12ನೇ ತರಗತಿಗಳ ಆರಂಭದ ಅನುಭವದ ಆಧಾರದಲ್ಲಿ ಜ. 15ರಿಂದ 11ನೇ ತರಗತಿ ಆರಂಭಿಸಲಾಗುವುದು ಎಂದರು.

ಜನವರಿ 1ರಿಂದಲೇ ವಿದ್ಯಾಗಮ
ಜನವರಿ 1ರಿಂದ 6ರಿಂದ 9ನೇ ತರಗತಿಗಳಿಗೆ ವಿದ್ಯಾಗಮ ಕಾರ್ಯಕ್ರಮ ಪುನರಾರಂಭವಾಗಲಿದ್ದು, ಅದರ ಅನುಭವದ ಆಧಾರದಲ್ಲಿ ಜ.14ರಿಂದ 1ರಿಂದ 5ನೇ ತರಗತಿಗಳಿಗೆ ವಿದ್ಯಾಗಮ ವಿಸ್ತರಿಸಲಾಗುತ್ತದೆ. ಪ್ರಮಾಣಿತ ಕಾರ್ಯಾಚರಣೆ ವಿಧಾನ -ಎಸ್‍ಒಪಿಗಳನ್ನು ಸೂಚಿಸಿದ್ದು, ಅದರ ಆಧಾರದಲ್ಲಿ ವಿವಿಧ ಇಲಾಖೆಗಳ ಸಹಕಾರದಲ್ಲಿ ಶಾಲಾರಂಭಕ್ಕೆ ಕ್ರಮಗಳನ್ನು ಕೈಗೊಳ್ಳಬೇಕಿರುತ್ತದೆ. ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳನ್ನು ಖಾತರಿಪಡಿಸುವ ಮೂಲಸೌಲಭ್ಯಗಳನ್ನು ಮತ್ತು ಇತರೆ ಸೌಲಭ್ಯಗಳ ಗಮನಿಸಿದ ನಂತರವೇ ತರಗತಿಗಳನ್ನು ಆರಂಭಿಸಲಾಗುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದರು.


ಕಳೆದ ಗುರುವಾರ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಲಾಗಿತ್ತು. ಆ ಸಭೆಯಲ್ಲಿ ರಾಜ್ಯದ ಪ್ರಸ್ತುತ ಕೋವಿಡ್ ಪ್ರಸರಣ, ಕೋವಿಡ್ ಪಾಸಿಟಿವ್ ಪ್ರಕರಣಗಳ ದಾಖಲು, ಮರಣ ಪ್ರಮಾಣ ಸೇರಿದಂತೆ ಕೋವಿಡ್‍ಗೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಲ್ಲಿಯೂ ಚರ್ಚೆ ನಡೆಸಿ ಶಾಲಾರಂಭದ ಸಂಗತಿಯಲ್ಲಿ ತೆಗೆದುಕೊಳ್ಳಬಹುದಾದ ನಿರ್ಧಾರಗಳ ಬಗ್ಗೆ ತನ್ನ ಅಭಿಪ್ರಾಯಗಳನ್ನು ನೀಡಿತ್ತು. ಈ ವರದಿ ಕುರಿತು ಪರಾಮರ್ಶೆ ನಡೆಸಿ ಮುಖ್ಯಮಂತ್ರಿಗಳು ಶಾಲಾರಂಭ ಕುರಿತು ಸಮ್ಮತಿ ನೀಡಿದರು ಎಂದು ಅವರು ತಿಳಿಸಿದರು.

ಶೀತ, ನೆಗಡಿ, ಕೆಮ್ಮು ಇದ್ದರೆ ಬರುವಂತಿಲ್ಲ
ತರಗತಿಗಳಿಗೆ ಹಾಜರಾಗಬೇಕಾದ ವಿದ್ಯಾರ್ಥಿಗಳು ಶಾಲೆಗೆ ಬರುವ ಮೊದಲು ತಮ್ಮ ಪೋಷಕರಿಂದ ಅನುಮತಿ ಪತ್ರವನ್ನು ತರುವುದು ಕಡ್ಡಾಯವಾಗಿದೆ. ಆರೋಗ್ಯ ತೊಂದರೆ ಇಲ್ಲವೇ ಶೀತ, ನೆಗಡಿ, ಕೆಮ್ಮು ಹಾಗೆಯೇ ಕೋವಿಡ್ ಲಕ್ಷಣಗಳಿರುವ ಮಕ್ಕಳು ಶಾಲೆಗೆ ಬರುವಂತಿಲ್ಲ. ಅವರು ಪರೀಕ್ಷೆ ಮಾಡಿಸಿಕೊಂಡು ವೈದ್ಯಕೀಯ ವರದಿಯೊಂದಿಗೆ ಹಾಜರಾಗಬೇಕಿದೆ. ತಮ್ಮ ಮಕ್ಕಳಿಗೆ ರುಚಿ, ವಾಸನೆ ಕೊರತೆ, ಉಸಿರಾಟ ತೊಂದರೆ, ಗಂಟಲು ನೋವು ಸೇರಿದಂತೆ ಮೇಲ್ಕಂಡ ಯಾವುದೇ ಲಕ್ಷಣಗಳಿಲ್ಲ ಎಂದು  ಪೋಷಕರು ತಾವು ತಮ್ಮ ಮಕ್ಕಳು ಶಾಲೆಗೆ ಹಾಜರಾಗುವಾಗ ನೀಡುವ ಅನುಮತಿ ಪತ್ರದಲ್ಲಿ ತಿಳಿಸುವುದು ಕಡ್ಡಾಯವಾಗಿದೆ.

ಹಾಸ್ಟೆಲ್‍ಗಳ ಆರಂಭಕ್ಕೆ ಸಮ್ಮತಿ
ಸಮಾಜಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳು ಶಾಲೆಗೆ ಹಾಜರಾಗುವ ಹಾಸ್ಟೆಲ್ ವಾಸಿ ಮಕ್ಕಳಿಗೆ ಅನುವಾಗುವಂತೆ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲಿವೆ. ವಸತಿ ಶಾಲೆಗಳ ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ವಸತಿ ಶಾಲೆಗೆ ಹಾಜರಾಗುವ ಮೊದಲು ಕೋವಿಡ್ ಪರೀಕ್ಷೆಗೆ ಒಳಗಾಗಿ ಕೋವಿಡ್ ಮುಕ್ತ ಪ್ರಮಾಣ ಪತ್ರ ತರುವುದು ಕಡ್ಡಾಯವಾಗಿದೆ
ತರಗತಿಗಳಲ್ಲಿ ಶಿಕ್ಷಕರು ಕೋವಿಡ್ ಲಕ್ಷಣಗಳ ಕುರಿತು ವಿದ್ಯಾರ್ಥಿಗಳನ್ನು ಪ್ರತಿದಿನವೂ ಪರೀಕ್ಷೆಗೆ ಒಳಪಡಿಸಬೇಕು. ಕೋವಿಡ್ ಲಕ್ಷಣಗಳು ಕಂಡು ಬಂದರೆ ಅಂತಹ ವಿದ್ಯಾರ್ಥಿಯನ್ನು ಪರೀಕ್ಷೆ ಮತ್ತು ಸಮಾಲೋಚನೆಗೆ ಸಮೀಪದ ಆಸ್ಪತ್ರೆಗೆ ಕಳಿಸಬೇಕು. ಶಾಲೆಗಳಲ್ಲಿ ಮಧ್ಯಾಹ್ನ ಉಪಹಾರದ ಬದಲಿಗೆ ಆಹಾರ ಧಾನ್ಯಗಳ ವಿತರಣೆ ಮುಂದುವರೆಸಬೇಕು. ಶಾಲಾ ಪರಿಸರದಲ್ಲಿ ಆಹಾರ ಸೇವನೆಗೆ ಅವಕಾಶವಿರಬಾರದು. ಶಾಲಾರಂಭಕ್ಕೂ ಮುನ್ನ ಡಿಸೆಂಬರ್ ಮಾಸದಲ್ಲಿ ಶಾಲಾಡಳಿತಗಳು/ ಶಾಲಾ ಮೇಲುಸ್ತುವಾರಿ ಸಮಿತಿಗಳು ಪೋಷಕರು, ಮಕ್ಕಳು ಸೇರಿದಂತೆ ಇನ್ನಿತರೆ ಶೈಕ್ಷಣಿಕ ಪಾಲುದಾರರನ್ನು ಸಭೆ ನಡೆಸಿ ಶಾಲೆಗಳ ಪುನರಾರಂಭ ಕುರಿತು ವಿಶ್ವಾಸ ಮೂಡಿಸುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕೋವಿಡ್ ಲಕ್ಷಣಗಳಿದ್ದರೆ ಪ್ರತ್ಯೇಕ ಕೊಠಡಿ
ಕೋವಿಡ್ ಲಕ್ಷಣಗಳಿದ್ದು, ತುರ್ತು ವೈದ್ಯಕೀಯ ಪರೀಕ್ಷೆ ಅಗತ್ಯವಿರುವ ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾ ಸಿಬ್ಬಂದಿಗೆ ಕೋವಿಡ್ ಪರೀಕ್ಷೆಗೆ ಮೊದಲ ಪ್ರಾಶಸ್ತ್ಯ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಕೋವಿಡ್ ಲಕ್ಷಣಗಳು ಕಂಡು ಬಂದ ಶಿಕ್ಷಕರು/ ಸಿಬ್ಬಂದಿ/ ಮಕ್ಕಳು ತಕ್ಷಣವೇ ಪ್ರತ್ಯೇಕ ಕೊಠಡಿಗೆ ತೆರಳಿ ಪ್ರತ್ಯೇಕವಾಗಬೇಕು.
ಸಮೀಪದ ಆಸ್ಪತ್ರೆಯಲ್ಲಿ ಪರೀಕ್ಷೆ ಮತ್ತು ಕ್ವಾರಂಟೈನ್‍ಗೊಳಗಾಗಿ ಚಿಕಿತ್ಸೆ ಪಡೆಯಬೇಕಿದೆ. ಕೋವಿಡ್ ಪಾಸಿಟಿವ್ ಕಂಡು ಬಂದ ಅಭ್ಯರ್ಥಿಗಳಿದ್ದ ಕೊಠಡಿಯನ್ನು ಸ್ಯಾನಿಟೈಸ್ ಮಾಡಿ ಮುಂದಿನ ದಿನ ಬಳಸಬೇಕು. ಸೀಲ್‍ಡೌನ್ ಮಾಡುವ ಅಗತ್ಯವಿಲ್ಲ ಎಂದು ಸಮಿತಿ ತಿಳಿಸಿದೆ.
2020ರ ಆಗಸ್ಟ್ 11ರಂದು ಸರ್ಕಾರ ಬಿಡುಗಡೆ ಮಾಡಿದ ಪರಿಷ್ಕøತ ಡಿಸ್ಚಾರ್ಜ್ ನೀತಿಯನ್ವಯ ಕೋವಿಡ್ ಪಾಸಿಟಿವ್ ಬಂದವರು ಗೃಹ ಪ್ರತ್ಯೇಕತೆ/ ಗೃಹ ಆರೈಕೆ/ ಕೋವಿಡ್ ಆರೈಕೆ ಕೇಂದ್ರಗಳಲ್ಲಿ 10 ದಿನಗಳ ಆರೈಕೆಗೊಳಗಾಗಿ ಮುಂದಿನ 7 ದಿನಗಳು ಮನೆಯಲ್ಲಿ ಪ್ರತ್ಯೇಕತೆಯಲ್ಲಿರಬೇಕು. ಅವರು ಮತ್ತೊಮ್ಮೆ ಕೋವಿಡ್ ಪರೀಕ್ಷೆಗೊಳಗಾಬೇಕಾದ ಅಗತ್ಯವಿಲ್ಲ. ಈ 17 ದಿನಗಳ ನಂತರ ಮತ್ತೆ ಶಾಲೆಗೆ ಸೇರಲು ಸಮಿತಿ ಸಲಹೆಯಂತೆ ವೈದ್ಯರು ನೀಡುವ ಫಿಟ್‍ನೆಸ್ ಸರ್ಟಿಫಿಕೆಟ್ ಸಾಕಾಗುತ್ತದೆ ಎಂದು ಅವರು ಹೇಳಿದರು.

ಕೋವಿಡ್-19 ಈಗಲೇ ಮುಗಿಯುತ್ತದೆ ಎಂಬುದು ಯಾರಿಗೂ ಗೊತ್ತಿಲ್ಲ. ಅಂದ ಹಾಗೆಯೇ ಇದರ ಮಧ್ಯೆಯೇ ಎಲ್ಲ ವಾಣಿಜ್ಯ ಚಟುವಟಿಕೆಗಳು ಮುಂದುವರೆದಿವೆ. ಶಾಲೆಗಳು ಮಾತ್ರವೇ ತೆರೆಯಲಾಗಿಲ್ಲ. ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗದ ಕಾರಣ ಹಲವಾರು ಸಾಮಾಜಿಕ ಸಮಸ್ಯೆಗಳು ಉದ್ಭವವಾಗಿವೆ. ಸಮಾಜದ ಹಲವು ಪ್ರಮುಖರ ಜೊತೆ, ವಿಧಾನಪರಿಷತ್ ಸದಸ್ಯರು, ಎಸ್‍ಡಿಎಂಸಿಗಳು, ಶಾಲಾ ಸಂಘಟನೆಗಳು ಸೇರಿದಂತೆ ಸಮಾಜದ ವಿವಿಧ ಸ್ತರಗಳ ವ್ಯಕ್ತಿಗಳ/ಸಮುದಾಯಗಳ ಜೊತೆ ಸಮಾಲೋಚನಾ ಸಭೆಗಳನ್ನು ನಡೆಸಿದಾಗ ಮಕ್ಕಳನ್ನು ಯಾವುದಾದರೂ ಮಾದರಿಯಲ್ಲಿ ಕಲಿಕೆಯಲ್ಲಿ ತೊಡಗಿಸಬೇಕೆಂಬ ಒಕ್ಕೊರಲ ಅಭಿಪ್ರಾಯಗಳು ವ್ಯಕ್ತವಾಗಿವೆ ಎಂದೂ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಆನ್‍ಲೈನ್ ಶಿಕ್ಷಣ ಮುಂದುವರೆಯಲಿದೆ
ಗ್ರಾಮೀಣ ಭಾಗದ ಅವಕಾಶ ವಂಚಿತ ಮಕ್ಕಳ ಕಲಿಕೆ ನಿರಂತರವಾಗಿರಬೇಕೆಂಬ ಉದ್ದೇಶದಿಂದ ನಾವು ಕಳೆದ ಆಗಸ್ಟ್ 10ರಿಂದ ನಾವು ವಿದ್ಯಾಗಮ ಕಾರ್ಯಕ್ರಮವನ್ನು ರಾಜ್ಯಾದ್ಯಂತ ನಡೆಸಿದೆವು. ನಾವು ಕೋವಿಡ್ ನಂತರದ ತುರ್ತು ಸಂದರ್ಭದಲ್ಲಿ ತಜ್ಞ ಸಮಿತಿಯನ್ನು ರಚಿಸಿ ಆನ್‍ಲೈನ್ ಶಿಕ್ಷಣವನ್ನು ನಿಯಂತ್ರಿಸಲು ರೂಪುರೇಷೆಗಳನ್ನು ಪ್ರಕಟಿಸಿದ ಹಿನ್ನೆಲೆಯಲ್ಲಿಯೇ ನಮ್ಮ ಗ್ರಾಮೀಣ ಮಕ್ಕಳಿಗೆ ಉಪಯುಕ್ತವಾಗಲೆಂದು ಅವರ ಲಭ್ಯ ಸೌಲಭ್ಯಗಳ ಆಧಾರದಲ್ಲಿ ಕಲಿಕೆ ಮುಂದುವರೆಯಲೆಂದು ನಾವು ವಿದ್ಯಾಗಮವನ್ನು ಪ್ರಾರಂಭಿಸಿದ್ದೆವು.
ಹಲವು ಕಾರಣಗಳಿಗಾಗಿ ಅದು ಸ್ಥಗಿತವಾಗಿತ್ತು. ಇತ್ತೀಚಿಗೆ ರಾಜ್ಯದ ಉಚ್ಚ ನ್ಯಾಯಾಲಯವೂ ಸಹ ವಿದ್ಯಾಗಮವನ್ನು ಪ್ರಾರಂಭಿಸಲು ಹಲವು ಸಲಹೆಗಳೊಂದಿಗೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ನಾವು ಮಕ್ಕಳ ಕಲಿಕೆಗೆ ಈ ಕಾರ್ಯಕ್ರಮವನ್ನು ಪುನರಾರಂಭಿಸುತ್ತಿದ್ದೇವೆ. ವಿದ್ಯಾಗಮವನ್ನು ಇದೇ ನಿಯಮಗಳ ಅನುಸಾರವಾಗಿ ಮುಂದುವರೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಆನ್‍ಲೈನ್ ಕಲಿಕೆ, ಸಂವೇದಾ ಕಾರ್ಯಕ್ರಮ, ಯೂ-ಟ್ಯೂಬ್ ಕಲಿಕೆಗಳೂ ಮುಂದುವರೆಯಲಿದೆ. ಮಕ್ಕಳು ತರಗತಿಗೆ ಹಾಜರಾಗುವುದು ಅವರವರ ವಿವೇಚನೆ ಬಿಟ್ಟಿದೆ. ಅದರಲ್ಲಿ ಕಡ್ಡಾಯವೇನಿಲ್ಲ. ವಿದ್ಯಾರ್ಥಿ ಹಾಗೂ  ಪೋಷಕರು ತರಗತಿಗೆ ಹಾಜರಾಗಲು ಸ್ವತಂತ್ರರಾಗಿದ್ದು, ಒಂದು ವೇಳೆ ತರಗತಿಗೆ ಹಾಜರಾಗಲು ಇಷ್ಟಪಡದಿದ್ದಲ್ಲಿ ಪರ್ಯಾಯ ಬೋಧನಾ ಕ್ರಮಗಳನ್ನು ಅವರು ಅನುಸರಣೆ ಮಾಡಲು ಅವಕಾಶವಿದೆ. ಆದರೆ ಪ್ರತಿ ವಿದ್ಯಾರ್ಥಿ ಮುಂದಿನ ತರಗತಿಗೆ ತೇರ್ಗಡೆ ಹೊಂದುವುದಕ್ಕೆ ಅನುಕೂಲವಾಗಲು ಶಾಲೆಗೆ ದಾಖಲಾಗುವುದು ಕಡ್ಡಾಯವಾಗಿದೆ ಎಂದು ಅವರು ವಿವರಿಸಿದರು.

ಪಠ್ಯ ಕ್ರಮ ನಿಗದಿ
10 ಮತ್ತು 12ನೇ ತರಗತಿಗಳಿಗೆ ಮಂಡಳಿಯ ಪರೀಕ್ಷೆಗಳನ್ನು ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಗಳನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ. ಪಿಯು ತರಗತಿಗಳಿಗೆ ಸಂಬಂಧಿಸಿದಂತೆ ಈ ಶೈಕ್ಷಣಿಕ ವರ್ಷದ ಉಳಿಯುವ ಅವಧಿಗೆ ಬೋಧಿಸಬಹುದಾದ ಪಠ್ಯ ವಸ್ತುಗಳನ್ನು ಎನ್‍ಸಿಇಆರ್‍ಟಿ ಮಾರ್ಗದರ್ಶಿ ಸೂತ್ರಗಳನ್ವಯ ಈಗಾಗಲೇ ಅಂತಿಮಗೊಳಿಸಲಾಗಿದೆ. ಉಳಿದ ತರಗತಿಗಳ ಪಠ್ಯವಸ್ತುಗಳ ಕುರಿತಂತೆ ಖಚಿತ ನಿರ್ಧಾರವನ್ನು ಸಭೆಯ ಆಧಾರದಲ್ಲಿ ಮುಂದಿನ ವಾರದಲ್ಲಿ ತೆಗೆದುಕೊಳ್ಳಲಾಗುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಯಾವುದೇ ತರಗತಿಯ ವಿದ್ಯಾರ್ಥಿಗೆ ಕಲಿಕೆ ಹೊರೆಯಾಗದಂತೆ, ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಕಲಿಯುವ ಪರಿಸರವನ್ನು ನಾವು ಸೃಷ್ಟಿಸಿಕೊಡಲಿದ್ದೇವೆ. ಮಕ್ಕಳ ಹಿತದೃಷ್ಟಿಯಿಂದ ಶಾಲಾರಂಭದ ಸಂಗತಿಯಲ್ಲಿ ಸರ್ಕಾರದ ಎಲ್ಲ ಇಲಾಖೆಗಳು ಸಹಕಾರ ನೀಡಲು ಮುಂದಾಗಿವೆ.
ಆರೋಗ್ಯ ಇಲಾಖೆ, ಸಾರಿಗೆ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ಪೌರಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ಕೈಜೋಡಿಸುತ್ತಿವೆ. ಆಯಾ ಪ್ರದೇಶಗಳ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳು ತರಗತಿ ಕೊಠಡಿಗಳ ಸ್ಯಾನಿಟೈಜೇಶನ್ ಕೈಗೊಳ್ಳಲಿವೆ. ಸ್ಥಳೀಯ ಆರೋಗ್ಯ ಘಟಕಗಳು ಮಕ್ಕಳ ಆರೋಗ್ಯ ಪರೀಕ್ಷೆಗೆ ಸಹಕರಿಸಲಿವೆ ಎಂದು ಸಚಿವ ಸುರೇಶ್ ಕುಮಾರ್ ವಿವರಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 2nd PU classesBeginning of sslccorona guidlineskarnatakavidyagama classes
ShareTweetSendShare
Join us on:

Related Posts

60,000 ಖಾಲಿ ಹುದ್ದೆಗಳ ಭರ್ತಿ: ಉದ್ಯೋಗ ಹೋರಾಟದ ಬಳಿಕ ಸರ್ಕಾರ ಸಿದ್ಧತೆ

60,000 ಖಾಲಿ ಹುದ್ದೆಗಳ ಭರ್ತಿ: ಉದ್ಯೋಗ ಹೋರಾಟದ ಬಳಿಕ ಸರ್ಕಾರ ಸಿದ್ಧತೆ

by Shwetha
February 27, 2026
0

ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ. ಒಟ್ಟು ಸುಮಾರು 60,000 ಖಾಲಿ ಸರ್ಕಾರಿ ಹುದ್ದೆಗಳ...

ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಸರ್ಕಾರದ ಮಹತ್ವದ ನಿರ್ಧಾರ

ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಸರ್ಕಾರದ ಮಹತ್ವದ ನಿರ್ಧಾರ

by Shwetha
February 27, 2026
0

ಪಾಸ್‌ಪೋರ್ಟ್ ಪೊಲೀಸ್ ಪರಿಶೀಲನೆ ವೇಳೆ ಸಾರ್ವಜನಿಕರಿಗೆ ಕಿರುಕುಳ ನೀಡುವುದು ಹಾಗೂ ಲಂಚದ ಬೇಡಿಕೆ ಇಡುವ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪಾಸ್‌ಪೋರ್ಟ್...

ಇನ್ಮುಂದೆ ಕಚೇರಿ ಅಲೆದಾಟಕ್ಕೆ ಬ್ರೇಕ್ ಮನೆಯಲ್ಲೇ ಕುಳಿತು 10 ನಿಮಿಷದಲ್ಲಿ ಪಡೆಯಿರಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಇನ್ಮುಂದೆ ಕಚೇರಿ ಅಲೆದಾಟಕ್ಕೆ ಬ್ರೇಕ್ ಮನೆಯಲ್ಲೇ ಕುಳಿತು 10 ನಿಮಿಷದಲ್ಲಿ ಪಡೆಯಿರಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ

by Shwetha
February 27, 2026
0

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ (Caste and Income Certificate)...

ಸಿದ್ದರಾಮಯ್ಯ-ಡಿಕೆಶಿ ಜಗಳದಲ್ಲೇ ಸರ್ಕಾರ ಬಲಿ: ದಲಿತ ಸಿಎಂ ಕನಸು ನನಸಾಗಲ್ಲ, ಬೊಕ್ಕಸ ಬರಿದಾಗಿದೆ ಎಂದು ಗುಡುಗಿದ ಯತ್ನಾಳ್

ಸಿದ್ದರಾಮಯ್ಯ-ಡಿಕೆಶಿ ಜಗಳದಲ್ಲೇ ಸರ್ಕಾರ ಬಲಿ: ದಲಿತ ಸಿಎಂ ಕನಸು ನನಸಾಗಲ್ಲ, ಬೊಕ್ಕಸ ಬರಿದಾಗಿದೆ ಎಂದು ಗುಡುಗಿದ ಯತ್ನಾಳ್

by Shwetha
February 27, 2026
0

ರಾಯಚೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಶೀತಲ ಸಮರ...

ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ಸುಳ್ಳೇ? ಗೂಗಲ್ ಬೇಬಿಯಂತೆ ವರ್ತಿಸಬೇಡಿ ಎಂದು ಪ್ರಿಯಾಂಕ್ ಖರ್ಗೆಗೆ ಛಲವಾದಿ ನಾರಾಯಣಸ್ವಾಮಿ ತಿರುಗೇಟು

ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ಸುಳ್ಳೇ? ಗೂಗಲ್ ಬೇಬಿಯಂತೆ ವರ್ತಿಸಬೇಡಿ ಎಂದು ಪ್ರಿಯಾಂಕ್ ಖರ್ಗೆಗೆ ಛಲವಾದಿ ನಾರಾಯಣಸ್ವಾಮಿ ತಿರುಗೇಟು

by Shwetha
February 27, 2026
0

ಮಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇತಿಹಾಸದ ವಿಚಾರಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram