ಮಲ್ಯ ವಿರುದ್ಧ ದಿವಾಳಿತನದ ಆದೇಶಕ್ಕೆ ಒತ್ತಾಯ: ಲಂಡನ್ ಹೈಕೋರ್ಟ್ಗೆ ಅರ್ಜಿ
ಲಂಡನ್ : ಮದ್ಯದ ದೊರೆ ವಿಜಯ್ ಮಲ್ಯ ವಿರುದ್ಧ ದಿವಾಳಿತನದ ಆದೇಶ ಹೊರಡಿಸುವಂತೆ ಕೋರಿ ಲಂಡನ್ ಹೈಕೋರ್ಟ್ಗೆ ಎಸ್ಬಿಐ ಸಮ್ಮುಖದ ಭಾರತೀಯ ಬ್ಯಾಂಕ್ ಗಳ ಒಕ್ಕೂಟ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ಲಂಡನ್ ಚೀಫ್ ಇನ್ಸಾಲ್ವೆನ್ಸಿಯಸ್ ಆಂಡ್ ಕಂಪನೀಸ್ ನ್ಯಾಯಾಲಯವು ಶುಕ್ರವಾರ ಇದರ ವಿಚಾರಣೆ ನಡೆಸಿದೆ. ಎರಡೂ ಕಡೆ ವಾದಗಳನ್ನು ಆಲಿಸಿರುವ ಲಂಡನ್ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.
ಲಂಡನ್ ಹೈಕೋರ್ಟ್ ನ್ಯಾಯಾಧೀಶ ಮೈಕಲ್ ಬ್ರಿಗ್ಸ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದರು. ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಾದ ದೀಪಕ್ ವರ್ಮಾ ಹಾಗೂ ಗೋಪಾಲ ಗೌಡ ಅವರು ಕ್ರಮವಾಗಿ ಮಲ್ಯ ಹಾಗೂ ಬ್ಯಾಂಕ್ಗಳ ಒಕ್ಕೂಟದ ಪರ ಭಾರತೀಯ ಕಾನೂನಿನ ಪರಿಣಿತರಾಗಿ ವಿಚಾರಣೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ನ್ಯಾಯಾಧೀಶರು ಅರ್ಜಿದಾರರು ಹಾಗೂ ಪ್ರತಿವಾದಿಗಳ ವಾದ ಆಲಿಸಿದರು.
ನನಸಾಗುತ್ತಿದೆ ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷೆಯ ಕನಸಿನ ಬುಲೆಟ್ ರೈಲು
ಸಾಲಗಾರರಿಂದ ಸಾಲ ಹಿಂಪಡೆಯಲು ಕಠಿಣ ಕ್ರಮ ಕೈಗೊಳ್ಳುವ ಹಕ್ಕು ಸಹ ಬ್ಯಾಂಕ್ ಗಿದೆ ಎಂದು ಬ್ಯಾಂಕ್ಗಳ ಒಕ್ಕೂಟದ ಪರ ಬ್ಯಾರಿಸ್ಟರ್ ಮಾರ್ಸಿಯಾ ಶೆಕರ್ಡೆಮಿಯಾನ್ ಅವರು ವಾದಿಸಿದರು. ಮಲ್ಯ ಪರ ವಾದ ಮಂಡಿಸಿದ ಬ್ಯಾರಿಸ್ಟರ್ ಫಿಲಿಪ್ ಮಾರ್ಷಲ್ ಇದನ್ನು ವಿರೋಧಿಸಿದರು. ಈ ವೇಳೆ ವಾದಗಳು ತಾರಕ್ಕೇರಿತು. ಆಗ ಮಧ್ಯಪ್ರವೇಶಿಸಿದ ನ್ಯಾಯಾಧೀಶ ಬ್ರಿಕ್ಸ್ ಅವರು ಅಸಮಂಜಸ ಪ್ರಶ್ನೆಗಳನ್ನು ಕೇಳುವ ಮೂಲಕ ವಿಚಾರಣೆಯ ದಿಕ್ಕು ತಪ್ಪಿಸಬಾರದು ಎಂದು ಉಭಯ ಬ್ಯಾರಿಸ್ಟರ್ಗಳಿಗೆ ಸೂಚಿಸಿ ವಿಚಾರಣೆಯನ್ನು ಮುಂದೂಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel







