ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಏನಿದು ಕೊರೊನಾ ಹೊಸ ಅಲೆ : ಕೊರೊನಾ part 2 – no conclusion

Namratha Rao by Namratha Rao
December 22, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಏನಿದು ಕೊರೊನಾ ಹೊಸ ಅಲೆ : ಕೊರೊನಾ part 2 – no conclusion

ಕಳೆದ ವರ್ಷ ಚೀನಾದಿಂದ ಭಾರತ ಸೇರಿದಂತೆ ಇಡೀ ವಿಶ್ವಕ್ಕೆ ವ್ಯಾಪಿಸಿ ಲಕ್ಷಾಂತರ ಮಂದಿಯ ಜೀವ ತೆಗೆದ ಕೊರೊನಾ ಮಹಾಮಾರಿಯ ಅಟ್ಟಹಾಸ ಇನ್ನೇನು ಕಮ್ಮಿ ಆಗ್ತಿದೆ ಅನ್ನೋ ಅಷ್ಟರಲ್ಲೇ ಸುಮಾನಿಯಂತೆ ಮತ್ತೊಂದು ಅಲೆ ಅಬ್ಬರಿಸಲು ಆರಂಭವಾಗಿದೆ. ಹೌದು ಇನ್ನೇನು ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗ್ತಿದೆ ಅಂತ ನಿಟ್ಟುಸಿರು ಬಿಡುತ್ತಿದ್ದ ಜನರಿಗೆ ದೊಡ್ಡ ಆಘಾತ ಎದುರಾಗಿದೆ. ಭಾರತದಲ್ಲೂ  ಈಗಾಗಲೇ ನಡುಕ ಶುರುವಾಗಿದೆ.

Related posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

March 13, 2026
ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

March 13, 2026

ಯಾಕಂದ್ರೆ ಈಗಾಗಲೇ ಕೊರೊನಾ  ಉಗ್ರಸ್ವರೂಪ ತಾಳಿದೆ. ಬ್ರಿಟನ್ ನಲ್ಲಿ ಹೊಸ ಸ್ವರೂಪದ ಕೋವಿಡ್ 19 ವೈರಸ್ ಕಾಣಿಸಿಕೊಂಡಿದೆ. ಅನೇಕರಲ್ಲಿ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ಐರೋಪ್ಯ ರಾಷ್ಟ್ರಗಳಲ್ಲಿ ಆತಂಕ ಶುರುವಾಗಿದೆ. ಇಟಲಿಯಲ್ಲೂ ಕೆಲವರಲ್ಲಿ ಸೋಂಕು ಪತ್ತೆಯಾಗಿದೆ. ಕೇವಲ ಬ್ರಿಟನ್ ಅಷ್ಟೇ ಅಲ್ಲ ಯುರೋಪ್, ಭಾರತ ಸೇರಿ ಅನೇಕ ರಾಷ್ಟ್ರಗಳಿಗೆ  ಇದೀಗ ಭಯ ಶುರುವಾಗಿದೆ. ಯಾಕಂದ್ರೆ ಈ ಹೊಸ ಸ್ವರೂಪದ ಕೊರೊನಾ ಸೋಂಕು ಈಗಾಗಲೇ ಬ್ರಿಟನ್ ಗಡಿ ದಾಟಿ ಅನೇಕ ದೇಶಗಳಿಗೂ ಪಸರಿಸಿದೆ.New variant coronavirus UK

ಲಂಡನ್ ಕೊರೊನಾ ಭೀತಿ ಹಿನ್ನೆಲೆ: ಕಟ್ಟೆಚ್ಚರಕ್ಕೆ ಸಿಎಂ ಬಿಎಸ್‍ವೈ ಸೂಚನೆ..!

ಇನ್ನೂ ಭಾರತಕ್ಕೆ ಬ್ರಿಟನ್ ​ನಿಂದ ಬಂದವರ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಕಲೆ ಹಾಕುತ್ತಿದೆ. ಇತ್ತ  ರಾಜ್ಯಕ್ಕೆ ಮತ್ತೊಂದು ದೊಡ್ಡ ಸಂಕಷ್ಟ ಎದುರಾಗಿದೆ.  ಯಾಕಂದ್ರೆ ಬ್ರಿಟನ್ ನಿಂದ  ಏರ್​ ಇಂಡಿಯಾ ವಿಮಾನದಲ್ಲಿ 246 ಜನ ಕರ್ನಾಟಕಕ್ಕೆ ಬಂದಿದ್ದಾರೆ. ಬ್ರಿಟೀಷ್ ಏರ್​ವೇಸ್​​ ವಿಮಾನದಲ್ಲಿ 291 ಜನ ಬಂದಿದ್ದಾರೆ. ಇವರಲ್ಲಿ ಯಾರಿಗೂ ರೋಗದ ಲಕ್ಷಣ ಇರಲಿಲ್ಲ. ಆದ್ರೆ ಏರ್​ ಇಂಡಿಯಾದಲ್ಲಿ ಬಂದಂತಹ 89 ಜನರ ಬಳಿ ಕೊರೋನಾ ನೆಗೆಟಿವ್ ರಿಪೋರ್ಟ್ ಇರಲಿಲ್ಲ. ಬ್ರಿಟೀಷ್ ಏರ್​ವೇಸ್​ನಲ್ಲಿ ಬಂದ 49 ಜನರ ಬಳಿ ನೆಗೆಟಿವ್ ರಿಪೋರ್ಟ್ ಇರಲಿಲ್ಲ. ಒಟ್ಟಾರೆಯಾಗಿ 138 ಜನ ಕೊರೋನಾ ನೆಗೆಟಿವ್ ರಿಪೋರ್ಟ್​ ಇಲ್ಲದೆ ಬೆಂಗಳೂರಿಗೆ ಬಂದಿದ್ದಾರೆ. ಸದ್ಯ ಭಾರತೀಯ   ಕೇಂದ್ರ ಆರೋಗ್ಯ ಇಲಾಖೆ ಇಂಗ್ಲೆಂಡ್ ನಿಂದ ಭಾರತಕ್ಕೆ ಕಾಲಿಟ್ಟಿರುವವರ ಶೋಧಾಚರಣೆಯಲ್ಲಿ ತೊಡಗಿದೆ.  ಅವರನ್ನ ಪತ್ತೆ ಹಚ್ಚಿದ ಬಳಿಕ ಅವರಿಗೆ RT-PCR ಪರೀಕ್ಷೆಗಳನ್ನ ನಡೆಸಿ ಒಂದು ವಾರಗಳ ಕಾಲ ಹೋಂ ಕ್ವಾರಂಟೈನ್​ಗೆ ಒಳಪಡಿಸಲಾಗುತ್ತೆ.  ಬ್ರಿಟನ್​ನಿಂದ ಬೇರೆ ದೇಶಕ್ಕೆ ಬಂದು ಅಲ್ಲಿಂದ ಭಾರತಕ್ಕೆ ಬರುವ ಪ್ರಯಾಣಿಕರ ಮೇಲೂ ನಿಗಾ ಇಡಲಾಗುತ್ತೆ, ಪರೀಕ್ಷೆ ನಡೆಸಲಾಗುತ್ತೆ. ರೋಗದ ಲಕ್ಷಣಗಳಿದ್ದೂ ಬೇರೆ ದೇಶದಿಂದ ಬರುವ ಪ್ರಯಾಣಿಕರನ್ನ ಕೂಡ ಪರೀಕ್ಷೆ ನಡೆಸಿ ಕ್ವಾರಂಟೈನ್​ಗೆ ಒಳಪಡಿಸಲಾಗುತ್ತೆ. ಇನ್ನೂ ಕಳೆದ 14 ದಿನಗಳಲ್ಲಿ ಬ್ರಿಟನ್​ನಿಂದ ರಾಜ್ಯಕ್ಕೆ ಬಂದವರು ದಯವಿಟ್ಟು RT-PCR ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.corona test

ಲಂಡನ್ ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳ ಸೇವೆ ಸ್ಥಗಿತ..!

ಇನ್ನೂ ಭಯಾನಕ ವಿಚಾರವೆಂದ್ರೆ  ಬ್ರಿಟನ್​ನಿಂದ ಚೆನ್ನೈಗೆ ಪ್ರಯಾಣ ಬೆಳೆಸಿದ್ದ ವ್ಯಕ್ತಿಗೆ ಈ ಹೊಸ ಸೋಂಕು ತಗುಲಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ಬ್ರಿಟನ್​ನಲ್ಲಿ ಈ ಹೊಸ ಕೋವಿಡ್​ ಸೋಂಕು ಮಿತಿಮೀರಿದ್ದು ಅಲ್ಲಿಯ ಜನ ಅಕ್ಷರಶಃ ನಲುಗಿ ಹೋಗಿದ್ದಾರೆ. ಇನ್ನೂ ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಸೌದಿ ಅರೆಬಿಯಾ, ರಷ್ಯಾ, ಭಾರತ ಸೇರಿದಂತೆ ಯೂರೋಪ್ ನ ಹಲವು ರಾಷ್ಟ್ರಗಳು  ಬ್ರಿಟನ್  ವಿಮಾನ ಹಾರಾಟವನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿವೆ. ಭಾರತದಿಂದ ಬ್ರಿಟನ್ ಗೆ ತೆರಳುವ ವಿಮಾನ ಸಂಚಾರವನ್ನೂ ಕೂಡಾ ಬಂದ್ ಮಾಡಲಾಗಿದೆ. ಇತ್ತ ಜರ್ಮನಿ ಸೇರಿದಂತೆ ಹಲವು ರಾಷ್ಟ್ರಗಳು ತಮ್ಮ ದೇಶದ ಗಡಿಭಾಗಗಳನ್ನು ಬಂದ್ ಮಾಡಿವೆ. ಹೊಸ ಸ್ವರೂಪದ ಕೊರೊನಾವೈರಸ್ ಕಾಣಿಸಿಕೊಂಡಿದ್ದನ್ನು ಅಧಿಕೃತವಾಗಿ ಘೋಷಿಸುತ್ತಿದ್ದಂತೆ ಜರ್ಮನಿ, ಇಟಲಿ, ಬೆಲ್ಜಿಯಂ, ಡೆನ್ಮಾರ್ಕ್, ಬಲ್ಗೇರಿಯಾ, ದಿ ಐರಿಷ್ ಗಣರಾಜ್ಯ, ಟರ್ಕಿ ಮತ್ತು ಕೆನಡಾ, ಫ್ರಾನ್ಸ್‌ ರಾಷ್ಟ್ರಗಳು ಎಲ್ಲ ಗಡಿಭಾಗಗಳನ್ನು ಬಂದ್‌ ಮಾಡಿವೆ. ಇದರ ಜತೆಗೆ ಹಾಂಗ್‌ಕಾಂಗ್‌, ಇಸ್ರೇಲ್, ಇರಾನ್, ಕ್ರೊವೇಶಿಯಾ, ಅರ್ಜೆಂಟೀನಾ, ಚಿಲಿ, ಮೊರಾಕ್ಕೊ ಮತ್ತು ಕುವೈತ್ ರಾಷ್ಟ್ರಗಳಲ್ಲಿ ಬ್ರಿಟನ್‌ಗೆ ಪ್ರಯಾಣಕ್ಕೆ ನಿರ್ಬಂಧ ವಿಧಿಸಿವೆ.

ಏನಿದು ದೇಶದಲ್ಲಿ ಆತಂಕಕ್ಕೆ ಕಾರಣವಾಗಿರುವ ಹೊಸ ಶಿಗೆಲ್ಲಾ ಸೋಂಕು? ಇದರ ಲಕ್ಷಣಗಳೇನು?ಇದು ಹೇಗೆ ಹರಡುತ್ತದೆ?

ಇತ್ತ ಬ್ರಿಟನ್ ನಲ್ಲಿ ಕಠಿಣ ಲಾಕ್ ಡೌನ್ ಜಾರಿ ಮಾಡಲಾಗಿದೆ. ಇನ್ನೂ ಭಾರತದಲ್ಲಿಯೂ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗ್ತಿದೆ. ಅದ್ರಲ್ಲೂ ಈಗಾಗಲೇ ಮಹಾಮಾರಿಯ ಹೊಡೆತಕ್ಕೆ ಅತಿ ಹೆಚ್ಚು ತೊಂದರೆ ಅನುಭವಿಸುತ್ತಿರುವ ಮಹಾರಾಷ್ಟ್ರದಲ್ಲಿ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.   ಅಲ್ಲದೇ ಯುರೋಪ್ ಮತ್ತು ಮಿಡಲ್ ಈಸ್ಟ್ ರಾಷ್ಟ್ರಗಳಿಂದ ಮಹಾರಾಷ್ಟ್ರಕ್ಕೆ ಬರುವ ಪ್ರಯಾಣಿಕರು 14 ದಿನಗಳ ಕಾಲ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್​​ಗೆ ಒಳಪಡಬೇಕಾಗಿದೆ. ಈ ದೇಶಗಳನ್ನ ಹೊರತುಪಡಿಸಿ ಉಳಿದ ದೇಶಗಳಿಂದ ಬರುವ ಪ್ರಯಾಣಿಕರು ಹೋಂ ಕ್ವಾರಂಟೈನ್​ಗೆ ಒಳಗಾಗಬೇಕಿದೆ.

ಸಮಸ್ಯೆಗಳನ್ನು ಪರಿಹರಿಸಲು ಭಾರತದೊಂದಿಗೆ ಮಾತುಕತೆ ಪ್ರಗತಿಯಲ್ಲಿದೆ – ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ

ಒಟ್ಟಾರೆ ಇನ್ನೇನು ಕೊರೊನಾ  ಆರ್ಭಟ ನಿಲ್ಲಲಿದೆ ಅನ್ನೋ ವಿಶ್ವಾಸದಲ್ಲಿದ್ದ ದೇಶ ಹಾಗೂ ರಾಜ್ಯದ ಜನತೆಗೆ ಇದೀಗ ಕೊರೊನಾ ಹೊಸ  ತಳಿಯ ಭೀತಿ ಎದುರಾಗಿದೆ. ರಾಜ್ಯದಲ್ಲಿ 200 ಕ್ಕೂ ಹೆಚ್ಚು ಜನರು ಬ್ರಿಟನ್ ನಿಂದ ಆಗಮಿಸಿರೋದು ಜನರಲ್ಲಿ ಮತ್ತೆ ನಡುಕ ಸೃಷ್ಟಿಮಾಡಿದೆ. ಇನ್ನೂ ಈ ಸೋಂಕಿನ ಹೊಸ ತಳಿ ಶೇ 70 ರಷ್ಟು ವೇಗವಾಗಿ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ ಎನ್ನಲಾಗ್ತಿದೆ.

ಬಾಲಕನಿಂದಲೇ ಬಾಲಕನ ಮೇಲೆ ಸತತ 4 ವರ್ಷಗಳ ಕಾಲ ಲೈಂಗಿನ ದೌರ್ಜನ್ಯ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: britancovid 19 virusEnglandindia
ShareTweetSendShare
Join us on:

Related Posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

by Shwetha
March 13, 2026
0

ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

by Shwetha
March 13, 2026
0

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

by Shwetha
March 13, 2026
0

ಕುಂಭಮೇಳದಲ್ಲಿ ಕಾಣಿಸಿಕೊಂಡು ರಾತ್ರೋರಾತ್ರಿ ಜನಪ್ರಿಯತೆ ಗಳಿಸಿ, ಬಳಿಕ ಆಲ್ಬಮ್ ಹಾಡುಗಳು ಹಾಗೂ ಸಿನಿಮಾ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದ ಉದಯೋನ್ಮುಖ ನಟಿ ಮೊನಾಲಿಸಾ ಭೋಸ್ಲೆ ಇದೀಗ ತಮ್ಮ ದಿಟ್ಟ ನಿರ್ಧಾರದ...

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

by Shwetha
March 13, 2026
0

ಸಮಾನತೆಯ ಹರಿಕಾರ, ಕಾಯಕಯೋಗಿ ಬಸವಣ್ಣ ಹಾಗೂ ಅಪ್ರತಿಮ ಶಿವಶರಣೆ ಅಕ್ಕಮಹಾದೇವಿಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳುಮಟ್ಟದ ಹಾಗೂ ವಿಕೃತ ಪೋಸ್ಟ್ ಹಾಕಿರುವ ಘಟನೆ ಇಡೀ ನಾಡಿನಾದ್ಯಂತ...

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

by Shwetha
March 13, 2026
0

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ಶಿಕ್ಷಕರ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಒಂದು ಅಚ್ಚರಿಯ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram