ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಾಡಿನ ಗಿರಿಜನರ ಸಂಘರ್ಷದ ಬದುಕಿನ ಸಾಕ್ಷಿಯಿದು; ಇವರ ಅಳಲು ಕೇಳುವವರಾರು?

Shwetha by Shwetha
December 23, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
citizen journalism episode 1
Share on FacebookShare on TwitterShare on WhatsappShare on Telegram

ಕಾಡಿನ ಗಿರಿಜನರ ಸಂಘರ್ಷದ ಬದುಕಿನ ಸಾಕ್ಷಿಯಿದು; ಇವರ ಅಳಲು ಕೇಳುವವರಾರು? citizen journalism episode 1

ಕಾರ್ಲೆ… ಇದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಅತೀ ಮೂಲೆಯಲ್ಲಿರುವ ಒಂದು ಪುಟ್ಟ ಹಳ್ಳಿ. ಕಳಸದಿಂದ ಸರಿಸುಮಾರು ಹದಿನೈದು ಕಿಲೋಮೀಟರ್ ದೂರವಿರುವ ಇದು ಕುದುರೆಮುಖ ರಾಷ್ಟ್ರೀಯ ಉದ್ಯಾನದ ಅಂಚಿನ ಪ್ರದೇಶ. ಸುಮಾರು ಇಪ್ಪತ್ತು ಇಪ್ಪತ್ತೈದು ಗಿರಿಜನ ಕುಟುಂಬಗಳು ಇಲ್ಲಿ ವಾಸವಾಗಿವೆ. ಇಲ್ಲೊಂದು ದೊಡ್ಡ ಹಳ್ಳ ಹರಿಯುತ್ತದೆ. ಈ ಚಿತ್ರದಲ್ಲಿ ಕಾಣಿಸುವ ಮರದ ಸಂಕವೇ ಆ ಹಳ್ಳ ದಾಟಲು ಇವರ ಮಳೆಗಾಲದ ಸೇತುವೆ!. ಅದರಲ್ಲೇ ವೃದ್ಧರು, ಹೆಂಗಸರು, ಮಕ್ಕಳು ಎಲ್ಲರೂ ಎಲ್ಲರೂ ಜಡಿ ಮಳೆಯಲ್ಲಿ ದಾಟಬೇಕು. ಯಾರಿಗಾದರೂ ಅನಾರೋಗ್ಯವಾದರೆ ಅವರನ್ನು ಆ ದೇವರೇ ಕಾಪಾಡಬೇಕು.. citizen journalism episode 1
citizen journalism episode 1

Related posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

April 3, 2026
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026

ಈ ಹಳ್ಳ ದಾಟಲು ಇದ್ದ ಸಣ್ಣ ಸೇತುವೆ 2019ರ ಮಹಾಮಳೆಯಲ್ಲಿ ಕೊಚ್ಚಿ ಹೋಗಿದೆ. ನಂತರ ಎಲ್ಲಾ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಇಲ್ಲಿನ ಜನ ಮನವಿ ಕೊಟ್ಟು ಕೊಟ್ಟು ಸುಸ್ತಾಗಿದ್ದಾರೆ. ಕಾಡಂಚಿನ ಈ ಜನರ ಕಷ್ಟ ಕೇಳುವವರೇ ಇಲ್ಲ. ಊರಿಗೆ ಸರಿಯಾದ ರಸ್ತೆ ಸೇರಿದಂತೆ ಯಾವುದೇ ಮೂಲಸೌಕರ್ಯಗಳೆಲ್ಲಾ ದೂರದ ಮಾತು ಬಿಡಿ. ನಿನ್ನೆ ನಾವು ಈ ಊರಿಗೆ ಹೋದಾಗ ಗ್ರಾಮ ಪಂಚಾಯತ್ ಚುನಾವಣೆಯ ಮತಯಾಚನೆಗೆ ಎರಡು ಪಿಕಪ್, ಎರಡು ಜೀಪುಗಳಲ್ಲಿ ಭರ್ತಿ ಜನ ಬಂದಿದ್ದರು. ಇನ್ನವರನ್ನು ಈ ಊರು ನೋಡುವುದು ಮುಂದಿನ ಚುನಾವಣೆಗೇ. ಅಧಿಕಾರಿಗಳೆಲ್ಲಾ ಈ ಕಡೆ ತಲೆಹಾಕುವುದಿಲ್ಲ ಬಿಡಿ. ಅರಣ್ಯ ಇಲಾಖೆಯವರು ಒಮೊಮ್ಮೆ ಬರುತ್ತಾರೆಂದು ಊರವರು ಹೇಳಿದರೂ, ಅವರು ಮತ್ತು ಹಳ್ಳಿಯವರ ನಡುವೆ ಸಂಬಂಧ ಸೌಹಾರ್ದಯುತವಾಗಿಲ್ಲ ಅಂತ ಅಲ್ಲಿನ ಕೆಂಪೇಗೌಡರ ಮಾತಿನಲ್ಲೇ ಸ್ಪಷ್ಟವಾಗಿ ಪ್ರತಿಧ್ವನಿಸುತಿತ್ತು.

ಇದು ಕೇವಲ ‘ಕಾರ್ಲೆ’ಯೊಂದರ ಕಥೆಯಲ್ಲ. ನಿರೂಪಣೆಯಲ್ಲಿ ಅಲ್ಪಸ್ವಲ್ಪ ಬದಲಾವಣೆ ಮಾಡಿಕೊಳ್ಳುತ್ತಾ ಹೋದರೆ ಪಶ್ಚಿಮ ಘಟ್ಟದ ತಪ್ಪಲಿನ ಬಹುಪಾಲು ಕಾಡಂಚಿನ ಪ್ರದೇಶಗಳ ಕಥೆಯೂ ಇದೇನೇ. ಬಹುಶಃ ಜನಸ್ನೇಹಿ ಸರ್ಕಾರವೊಂದು ಇದ್ದಿದ್ದರೆ, ಅಧಿಕಾರಿಗಳು ಸೂಕ್ಷ್ಮ ಸಂವೇದನೆಯವರಾಗಿದ್ದರೆ ಹೀಗೆಲ್ಲಾ ಆಗುತ್ತಿರಲಿಲ್ಲ. ಮಳೆಗಾಲದಲ್ಲಿ ತುಂಬಿ ಹರಿಯುವ ಹಳ್ಳವೊಂದನ್ನು ದಾಟಲು ಯಕಃಶ್ಚಿತ್ ಸೇತುವೆ ಮಾಡಲಾಗದ ವ್ಯವಸ್ಥೆಗೆ, ಅದಕ್ಕೆ ನೂರು ಕುಂಟು ನೆಪ ಹೇಳುವ ಸರ್ಕಾರಿ ನೌಕರರಿಗೆ, ಇಲ್ಲದೇ ಹೋದ ನಿಯಮ-ಮಾರ್ಗಸೂಚಿ ಅಂತ ಅಡ್ಡಗಾಲು ಹಾಕುವ ಅಧಿಕಾರಿಗಳಿಗೆ, ಬರೇ ಭರವಸೆಯಲ್ಲೇ ಕಾಲ ಕಳೆಯುವ ಜನಪ್ರತಿನಿಧಿಗಳಿಗೆ ನನ್ನ ಸ್ಪಷ್ಟ ಧಿಕ್ಕಾರವಿದೆ.
citizen journalism episode 1

ಇಲ್ಲಿನ ಜನರೇನು ಚತುಷ್ಪಥ ಹೆದ್ದಾರಿ, ಸುರಂಗ ಮಾರ್ಗ, ರೈಲ್ವೇ, ರೂಪ್ ವೇ. ಏನು ಏನೂ ಕೇಳುತ್ತಿಲ್ಲ. ಅವರಿಗೆ ನಿಮ್ಮ ಅಭಿವೃದ್ಧಿಯ ತೆವಲು ಹತ್ತಿಲ್ಲ. ಹಿಂಗಿದ್ದೆಲ್ಲಾ ಹಡಬೆ ಕೆಲಸ ಮಾಡೋಕೆ ದುಡ್ಡಿರುವವರಿಗೆ ಯಕಃಶ್ಚಿತ್ ಸೇತುವೆ ಮಾಡುವುದಕ್ಕೆ ಅನುದಾನವಿಲ್ಲ. ಥತ್, ನಾಚಿಕೆಗೇಡು. ‘ಅವರದೂ ಒಂದು ಬದುಕಿದೆ’ ಎಂದು ಯಾರಿಗೂ ಏಕೆ ಅರ್ಥವಾಗುತ್ತಿಲ್ಲ?

–ನಾಗರಾಜ ಕೂವೆ
ಪರಿಸರ ಹೋರಾಟಗಾರರು ಮತ್ತು ಬರಹಗಾರರು

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Chikkamagalurucitizen journalism episode 1Moodigere
ShareTweetSendShare
Join us on:

Related Posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಮುಖಭಂಗವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಉದ್ವಿಗ್ನತೆಯ ನಡುವೆ ಶಾಂತಿ ದಲ್ಲಾಳಿಯಂತೆ ವರ್ತಿಸಲು ಮುಂದಾದ ಪಾಕಿಸ್ತಾನಕ್ಕೆ ಪಶ್ಚಿಮ ಏಷ್ಯಾದ ಪ್ರಬಲ ರಾಷ್ಟ್ರ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram