ಬೆಂಗಳೂರು: ದುಪ್ಪಟ್ಟು ಹಣದ ಆಮಿಷಕ್ಕೆ ಒಳಗಾಗಿ ಐಎಂಎನಲ್ಲಿ ಹಣ ಹೂಡಿಕೆ ಮಾಡಿ ಕಂಗಾಲಾಗಿರುವ ಹೂಡಿಕೆದಾರರಿಗೆ ವಿಶೇಷ ನ್ಯಾಯಾಲಯ ಸಮಾಧಾನಕಾರ ಸುದ್ದಿ ನೀಡಿದೆ.
ಎಂಎಎನ್ನಲ್ಲಿ ಹೂಡಿದ್ದ ಹಣ ವಾಪಸ್ ಪಡೆಯಲು ಹೂಡಿಕೆದಾರರು ಅರ್ಜಿ ಸಲ್ಲಿಸಬೇಕು. ಜನವರಿ 3ರವರೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ಐಎಂಎ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿರುವವರು ಬ್ಯಾಂಕ್ ಖಾತೆ, ಆಧಾರ್ ನಂಬರ್ ಅಥವಾ ಐಎಂಎ ಸಂಸ್ಥೆ ನೀಡಿರುವ ಗುರುತಿನ ಚೀಟಿ ಇಲ್ಲದೆಯೂ ಹಣವನ್ನು ವಾಪಸ್ ಪಡೆಯಲು ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.
ಸೆಕ್ಷನ್ 7(3) ಅನ್ವಯ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮದ ಪ್ರಕಾರ ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿದ್ದರೆ ನಂತರ ಯಾವುದೇ ಯಾವುದೇ ಕ್ಲೇಮ್ಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಸರ್ಕಾರ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಅರ್ಜಿದಾರರು ಕಾಲ್ಸೆಂಟರ್ ನಂಬರ್ 080, 46885959ಗೆ ಸಂಪರ್ಕಿಸಬಹುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಐಎಂಎ ಮಾನಿಟರಿ ಕಂಪನಿ ಸ್ಥಾಪಿಸಿದ್ದ ಮನ್ಸೂರ್ ಖಾನ್, ಹಣ ದ್ವಿಗುಣ ಮಾಡಿಕೊಡುವುದಾಗಿ ಸಾವಿರಾರು ಗ್ರಾಹಕರಿಂದ ಸಾವಿರ ಕೋಟಿಗೂ ಮಿಕ್ಕಿ ಹಣ ಸಂಗ್ರಹ ಮಾಡಿ ವಂಚಿಸಿದ್ದ. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದೆ. ಸಿಬಿಐ ಅಧಿಕಾರಿಗಳು ವಂಚಕ ಮನ್ಸೂರ್ ಖಾನ್ ಸೇರಿದಂತೆ ಹಲವರನ್ನು ಜೈಲಿಗೆ ಅಟ್ಟಿದ್ದರೆ, ಮಾಜಿ ಸಚಿವ ರೋಷನ್ ಬೇಗ್ರನ್ನೂ ಜೈಲು ಕಂಬಿ ಹಿಂದೆ ಕಳಿಸಿದ್ದಾರೆ.
ಎಂಎಂಎ ಕಂಪನಿ ಹೆಸರಿನಲ್ಲಿರುವ 400 ಕೋಟಿಗೂ ಮಿಕ್ಕಿದ ಸ್ಥಿರಾಸ್ಥಿ ಹಾಗೂ ಚರಾಸ್ಥಿಗಳನ್ನು ಸರ್ಕಾರ ಜಪ್ತಿ ಮಾಡಿತ್ತು. ಇದೀಗ ನ್ಯಾಯಾಲಯದ ಮೂಲಕ ವಂಚನೆಗೊಳಗಾದವರಿಗೆ ಹಣ ವಾಪಸ್ ನೀಡುವ ಕೆಲಸ ನಡೆಯುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel