ಬೆಂಗಳೂರು: ಸಿಲಿಕಾನ್ ಸಿಟಿ ಹೊರವಲಯದ ಮಾಗಡಿ ರಸ್ತೆಯ ಟೋಲ್ ಬಳಿ ನಿರ್ಮಿಸಿದ್ದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ.

ಇದೇ ಸ್ಥಳದಲ್ಲಿ ವಿಷ್ಣು ಪ್ರತಿಮೆಯನ್ನು ಧ್ವಂಸ ಮಾಡಿರುವುದು ಇದು ಎರಡನೇ ಬಾರಿ. ಈ ಹಿಂದೆ ಪ್ರತಿಮೆಯನ್ನೇ ಸ್ಥಳದಿಂದ ಎತ್ತೊಯ್ಯಲಾಗಿತ್ತು.
ತಡರಾತ್ರಿ ವಿಷ್ಣುವರ್ಧನ್ರ 12 ಅಡಿ ಪ್ರತಿಮೆಯನ್ನು ಪ್ರತಿಮೆಯನ್ನು ಧ್ವಂಸ ಮಾಡಿ ಅವಮಾನ ಮಾಡಿರುವ ಕಿಡಿಗೇಡಿಗಳು ಮತ್ತೆ ತಮ್ಮ ವಿಕೃತಿ ಮೆರೆದಿದ್ದಾರೆ.
ಈ ಹಿಂದೆ ಟೋಲ್ಗೇಟ್ ಬಳಿ ಪ್ರತಿಮೆ ನಿರ್ಮಾಣ ಮಾಡುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಆಗಾಗ ಘರ್ಷಣೆ ನಡೆಯುತ್ತಿತ್ತು ಎನ್ನಲಾಗಿದೆ. ಪ್ರತಿಮೆಯನ್ನು ಒಂದು ವಾರದಲ್ಲಿ ಧ್ವಂಸ ಮಾಡುತ್ತೇವೆ ಎಂದು ಕೆಲ ಕಿಡಿಗೇಡಿಗಳು ಓಡಾಡಿಕೊಂಡಿದ್ದರಂತೆ. ಅವರೇ ಈ ಕೃತ್ಯ ನಡೆಸಿರಬಹುದು ಎಂದು ವಿಷ್ಣು ಅಭಿಮಾನಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಕೆಲ ದಿನಗಳ ಹಿಂದೆ ತೆಲುಗು ನಟ ವಿಜಯ್ ರಂಗರಾಜು, ವಿಷ್ಣುವರ್ಧನ್ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿ ಬಳಿಕ ಕ್ಷಮೆಯಾಚಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








