ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೀಮ್ ಇಂಡಿಯಾದ ಬೆಸ್ಟ್ ಆಲ್ ರೌಂಡರ್ ರವೀಂದ್ರ ಜಡೇಜಾ..?

admin by admin
December 30, 2020
in Newsbeat, Sports, ಕ್ರೀಡೆ
ravindra jadeja team india saakshatv
Share on FacebookShare on TwitterShare on WhatsappShare on Telegram

Related posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026
ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

March 21, 2026

ಟೀಮ್ ಇಂಡಿಯಾದ ಬೆಸ್ಟ್ ಆಲ್ ರೌಂಡರ್ ರವೀಂದ್ರ ಜಡೇಜಾ..?

ravindra jadeja team india saakshatvಸರ್ ರವೀಂದ್ರ ಜಡೇಜಾ.. ಟೀಮ್ ಇಂಡಿಯಾದ ಪ್ರೀತಿಯ ಜಡ್ಡು.. ವಿಶ್ವ ಕ್ರಿಕೆಟ್ ನ ಪ್ರತಿಭಾನ್ವಿತ ಆಲ್ ರೌಂಡರ್.
ಅಂದ ಹಾಗೇ, ರವೀಂದ್ರ ಜಡೇಜಾ ಉತ್ತಮವಾಗಿ ಬ್ಯಾಟ್ ಬೀಸುತ್ತಾರೆ.. ಅತ್ಯುತ್ತಮ ಮಟ್ಟದ ಸ್ಪಿನ್ ಬೌಲರ್ ಕೂಡ ಹೌದು.
ಆದ್ರೆ ರವೀಂದ್ರ ಜಡೇಜಾ ಹೆಚ್ಚು ಗಮನ ಸೆಳೆದಿರುವುದು ತನ್ನ ಚುರುಕಿನ ಫೀಲ್ಡಿಂಗ್ ಮೂಲಕ. ಮೈದಾನದಲ್ಲಿ ಮಿಂಚಿನಂತೆ ಓಡಾಡಿಕೊಂಡು ಫೀಲ್ಡಿಂಗ್ ಮಾಡುವ ರವೀಂದ್ರ ಜಡೇಜಾ ತನ್ನ ಆಲ್ ರೌಂಡ್ ಆಟದ ಮೂಲಕ ಟೀಮ್ ಇಂಡಿಯಾದ ಅವಿಭಾಜ್ಯ ಅಂಗವಾಗಿದ್ದಾರೆ.
19 ವಯೋಮಿತಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪ್ರತಿಭೆಯಾಗಿರುವ ರವೀಂದ್ರ ಜಡೇಜಾ, ವಿರಾಟ್ ಕೊಹ್ಲಿಯವರ ಒಡನಾಡಿ. ವಿರಾಟ್ ನಾಯಕತ್ವದಲ್ಲಿ 19 ವಯೋಮಿತಿ ವಿಶ್ವಕಪ್ ಗೆದ್ದಾಗ ರವೀಂದ್ರ ಜಡೇಜಾ ಅವರ ಕೊಡುಗೆ ಕೂಡ ಅಪಾರ.
ಹೀಗಾಗಿ ವಿರಾಟ್ ನಂತೆ ರವೀಂದ್ರ ಜಡೇಜಾ ಕೂಡ ಬಲೂ ಬೇಗನೇ ಟೀಮ್ ಇಂಡಿಯಾವನ್ನು ಸೇರಿಕೊಂಡ್ರು. 2009ರಲ್ಲಿ ಏಕದಿನ ಮತ್ತು ಟಿ-ಟ್ವೆಂಟಿ ತಂಡಕ್ಕೆ ಎಂಟ್ರಿಯಾದ್ರು.
ಇನ್ನು 2012ರಲ್ಲಿ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ರವೀಂದ್ರ ಜಡೇಜಾ ಆರಂಭದ ದಿನಗಳಲ್ಲಿ ಟೆಸ್ಟ್ ಪಂದ್ಯಗಳಿಗೆ ಬಂದು ಹೋಗುವ ಅತಿಥಿಯಾಗಿದ್ದರು. 11ರ ಬಳಗದಲ್ಲಿ ಅವಕಾಶ ಸಿಗದಿದ್ರೂ ಅನೇಕ ಬಾರಿ ಬದಲಿ ಆಟಗಾರನಾಗಿ ಮೈದಾನದಲ್ಲಿ ಕಾಣಿಸಿಕೊಂಡ್ರು.
ravindra jadeja team india saakshatvಆದ್ರೆ ರವೀಂದ್ರ ಜಡೇಜಾ ಸಿಕ್ಕ ಅವಕಾಶವನ್ನು ಸರಿಯಾಗಿಯೇ ಬಳಸಿಕೊಂಡ್ರು. ಇದೀಗ ರವೀಂದ್ರ ಜಡೇಜಾ ಟೀಮ್ ಇಂಡಿಯಾದ ಕೋಚ್ ರವಿಶಾಸ್ತ್ರಿಯವರ ಮೆಚ್ಚುಗೆಗೂ ಪಾತ್ರರಾಗಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ನಿಂದ ರವೀಂದ್ರ ಜಡೇಜಾ ವಂಚಿತರಾಗಿದ್ದರು. ಆದ್ರೆ ಎರಡನೇ ಟೆಸ್ಟ್ ನಲ್ಲಿ ತಂಡದಲ್ಲಿ ಕಾಣಿಸಿಕೊಂಡ್ರು. 50ನೇ ಟೆಸ್ಟ್ ಪಂದ್ಯವನ್ನು ಆಡಿದ್ದ ರವೀಂದ್ರ ಜಡೇಜಾ ಈ ಪಂದ್ಯವನ್ನು ಸದಾ ನೆನಪಿನಲ್ಲಿಯುವಂತೆ ಮಾಡಿದ್ದರು.
ಸಂಕಷ್ಟದ ಸಮಯದಲ್ಲಿ ನಾಯಕ ರಹಾನೆ ಜೊತೆ ಶತಕದ ಜೊತೆಯಾಟವನ್ನು ಆಡಿದ್ದ ರವೀಂದ್ರ ಜಡೇಜಾ ಆಕರ್ಷಕ ಅರ್ಧಶತಕವನ್ನು ಸಿಡಿಸಿದ್ರು. ಇನ್ನು ಬೌಲಿಂಗ್ ನಲ್ಲಿ ಮೂರು ವಿಕೆಟ್ ಕಬಳಿಸಿ ತಂಡಕ್ಕೆ ಬ್ರೇಕ್ ನೀಡಿದ್ದರು. ಹಾಗೇ ಎರಡು ಅತ್ಯುತ್ತಮ ಕ್ಯಾಚ್ ಗಳನ್ನು ಕೂಡ ಹಿಡಿದಿದ್ದರು.
50 ಟೆಸ್ಟ್ ಪಂದ್ಯಗಳಲ್ಲಿ ರವೀಂದ್ರ ಜಡೇಜಾ , 1926 ರನ್ ಗಳಿಸಿದ್ದಾರೆ. ಇದ್ರಲ್ಲಿ ಒಂದು ಶತಕ ಹಾಗೂ 15 ಅರ್ಧತಕಗಳಿವೆ. ಹಾಗೇ 216 ವಿಕೆಟ್ ಗಳನ್ನು ಪಡೆದಿದ್ದಾರೆ. ಅಲ್ಲದೆ 168 ಏಕದಿನ ಮತ್ತು 50 ಟಿ-ಟ್ವೆಂಟಿ ಪಂದ್ಯಗಳನ್ನು ಆಡಿದ್ದಾರೆ.
ಇನ್ನು ಮಧ್ಯಮ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ ಯಾವುದೇ ಕ್ರಮಾಂಕದಲ್ಲೂ ಬ್ಯಾಟಿಂಗ್ ಮಾಡಲು ಕೂಡ ಸಿದ್ಧರಾಗಿರುತ್ತಾರೆ. ಐದು, ಆರು ಮತ್ತು ಏಳನೇ ಕ್ರಮಾಂಕದಲ್ಲೂ ಬ್ಯಾಟಿಂಗ್ ಮಾಡಿ ತಂಡಕ್ಕೆ ಆಧಾರವಾಗುಂತಹ ಸಾಮಥ್ರ್ಯವನ್ನು ಹೊಂದಿದ್ದಾರೆ.
ಒಟ್ಟಿನಲ್ಲಿ ರವೀಂದ್ರ ಜಡೇಜಾ ಎಳೆ ಮರೆಯ ಕಾಯಿಯಂತಿದ್ದರು. ಆದ್ರೆ ಎದೆಗುಂದಲಿಲ್ಲ. ತನ್ನ ಪ್ರತಿಭೆಗೆ ಒಂದಲ್ಲ ಒಂದು ದಿನ ಅವಕಾಶ ಸಿಗುತ್ತೆ ಎಂಬ ನಂಬಿಕೆಯಲ್ಲಿದ್ದರು. ಅದನ್ನು ಸರಿಯಾಗಿಯೇ ಬಳಸಿಕೊಂಡು ಸೈಲೆಂಟಾಗಿಯೇ ಟೀಮ್ ಇಂಡಿಯಾದ ಅತ್ಯುತ್ತಮ ಆಲ್ ರೌಂಡರ್ ಆಗಿ ರೂಪುಗೊಳ್ಳುತ್ತಿದ್ದಾರೆ.

Tags: #saakshatvAjinkya RahanebcciICCMahendra Singh DhoniRavi Shastriravindra jadejateam indiatest cricketvirat kohli
ShareTweetSendShare
Join us on:

Related Posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

by Shwetha
March 21, 2026
0

ಬೆಂಗಳೂರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕೇವಲ ತನ್ನ ಪಕ್ಷದ ಹೈಕಮಾಂಡ್‌ಗೆ ಹಣ ಒದಗಿಸುವ ಮೂಲವನ್ನಾಗಿ ಮಾಡಿಕೊಂಡಿದೆ ಎಂದು ದಿವಂಗತ ಕೇಂದ್ರ ಸಚಿವ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram