ಹಾಪ್ ಕಾಮ್ಸ್ ಗಳ ಮೂಲಕ ಪ್ರತಿ ದಿನ 100 ಟನ್ ಗಳಷ್ಟು ಮಾರಾಟವಾಗುತ್ತಿದೆ. ರೈತರಿಂದ ನೇರವಾಗಿ ರೈತ್ಪೋನ್ನಗಳನ್ನು ಆಯ್ದಾ ಭಾಗಗಳಲ್ಲಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ಹಾಪ್ ಕಾಮ್ಸ್ ಸಹದೊಂದಿಗೆ ತೋಟಗಾರಿಕಾ ಇಲಾಖೆಯಿಂದ ಮತ್ತು ಮೊಬೈಲ್ ವ್ಯಾನ್ ಗಳ ಮೂಲಕ ಮನೆಮನೆಗೆ ಹಣ್ಣು ತರಕಾರಿ ಮಾರಾಟ ಮಾಡಲಾಗುವುದು.ಇಲಾಖೆಯ ರೈತ ಉತ್ಪಾದಕಾ ಸಂಸ್ಥೆಗಳ ಮೂಲಕ ಹಣ್ಣು ತರಕಾರಿ ಮಾರಾಟ ಮಾಡಲಾಗುವುದು. ಇದಕ್ಕೆ ಯಾವುದೇ ರೀತಿಯಲ್ಲಿ ತೊಂದರೆ ಆಗಬಾರದು. ಹಾಗಾಗಿ ಹಿರಿಯ ಅಧಿಕಾರಿಗಳು ಜಿಲ್ಲೆಗಳ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿ ಇರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್
ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನದ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಮರ ಸಾರಿದ ಬೆನ್ನಲ್ಲೇ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಷ್ಟೇ...








