ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಟ್ರಂಪ್ ಬೆಂಬಲಿಗರ ದಾಂಧಲೆ : ಘಟನೆ ಖಂಡಿಸಿದ ಮೋದಿ, ಒಬಾಮಾ, ಬಿಡೆನ್, ಗೂಗಲ್..!

Namratha Rao by Namratha Rao
January 7, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬಿಡೆನ್ ವಿರುದ್ಧ ಹೀನಾಯವಾಗಿ ಸೋಲನುಭವಿಸಿರುವ ಡೊನಾಲ್ಡ್ ಟ್ರಂಪ್ ಅವರು ಆರಂಭದಿಂದಲೂ ಸೋಲೊಪ್ಪಿಕೊಳ್ಳೊಲು ತಯಾರಿಲ್ಲ. ಅಧಿಕಾರ ಉಳಿಸಿಕೊಳ್ಳಲು ಇದ್ದ ಬದ್ದ ಪ್ರಯತ್ನಗಳನ್ನೆಲ್ಲಾ ಮಾಡಿ ಕೊನೆಗೆ ನ್ಯಾಯಾಲಯದಲ್ಲೂ ಸೋಲು ಕಂಡರು. ಇದೀಗ ಮತ್ತೊಂದು ಪ್ರಯತ್ನ ಮಾಡಿ ಇಡೀ ವಿಶ್ವದ ಮುಂದೆಯೇ ಚಿಕ್ಕವರಾಗಿದ್ದಾರೆ ವಿಶ್ವದ ದೊಡ್ಡಣ್ಣನ ಅಧ್ಯಕ್ಷ ಟ್ರಂಪ್ ಅವರು… ಹೌದು ಟ್ರಂಪ್ ಬೆಂಬಲಿಗರ ಹಿಂಸಾಚಾರಕ್ಕೆ ಸದ್ಯ ಅಮೆರಿಕಾ ಬೆಚಚ್ಚಿ ಬಿದ್ದಿದೆ. ಟ್ರಂಪ್ ಬೆಂಬಲಿಗರು ಅಮೆರಿಕದ ಕ್ಯಾಪಿಟಲ್ ಬಿಲ್ಡಿಂಗ್ ಗೆ ಮುತ್ತಿಗೆ ಹಾಕಿ ಪೊಲೀಸರೊಂದಿಗೆ ಸಂಘರ್ಷಕ್ಕೆ ಇಳಿದಿದ್ದಾರೆ. ಘಟನೆಯಲ್ಲಿ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಈ ಘಟನೆ ಇಡೀ ಅಮೆರಿಕಾವನ್ನೇ ಬೆಚ್ಚಿ ಬೀಳಿಸಿದೆ.

ಅಮೆರಿಕಾದಲ್ಲಿ ಭುಗಿಲೆದ್ದ ಹಿಂಸಾಚಾರ : ಅಧಿಕಾರ ಉಳಿಸಿಕೊಳ್ಳಲು ಟ್ರಂಪ್ ವಿಫಲ ಪ್ರಯತ್ನ : ಸಂಘರ್ಷದಲ್ಲಿ ನಾಲ್ವರು ಬಲಿ

ಇಡೀ ಜಗತ್ತೇ ವಿಶ್ವದ ದೊಡ್ಡಣ್ಣನತ್ತ ನೋಡುವಂತಾಗಿದೆ. ಇತ್ತ ಘಟನೆ ಹಿನ್ನೆಲೆ ವಾಷಿಂಗ್ಟನ್ ನಲ್ಲಿ 15 ದಿನಗಳವರೆಗೆ ಎಮರ್ಜೆನ್ಸಿ ವಿಸ್ತರಿಸಲಾಗಿದೆ. ಡೊನಾಲ್ಡ್ ಟ್ರಂಪ್ ಅವರಿಗೆ ನಿಷ್ಠರಾಗಿರುವ ಪ್ರತಿಭಟನಾಕಾರರು ಹಿಂಸಾಚಾರಕ್ಕಿಳಿದಿದ್ದು, ಬುಧವಾರ ಯುಎಸ್ ಕ್ಯಾಪಿಟಲ್ ಗೆ ನುಗ್ಗಿ ಚುನಾಯಿತ ಪ್ರತಿನಿಧಿಗಳಿಗೆ ತಲೆಮರೆಸಿಕೊಳ್ಳುವಂತೆ ಬಲವಂತ ಮಾಡಿದ್ದಾರೆ. ಮತ ಎಣಿಕೆ ಕೇಂದ್ರಕ್ಕೆ ನುಗ್ಗಿ ಗಲಾಟೆ ಮಾಡಿದ್ದಾರೆ. ಅಮೆರಿಕ ಅಧ್ಯಕ್ಷ ಚುನಾವಣೆಯನ್ನು ರದ್ದುಗೊಳಿಸಲು ಹಿಂಸಾಚಾರಕ್ಕಿಳಿದಿದ್ದು, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂದು ಕಳೆದ ಎರಡು ತಿಂಗಳಿಂದ ಆಧಾರ ರಹಿತ ಆರೋಪ ಮಾಡುತ್ತಾ ಬಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಇದೀಗ ಅಮೆರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಅವರೇ ತಿರುಗಿ ಬಿದ್ದಿದ್ದು, ಟ್ರಂಪ್‌ಗೆ ಭಾರಿ ಹಿನ್ನಡೆಯಾಗಿದೆ.

Related posts

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

July 9, 2026
ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಫುಟ್‌ಪಾತ್ ತೆರವು ಬಳಿಕ GBAಯಿಂದ ವಿಶೇಷ ಸ್ವಚ್ಛತಾ ಅಭಿಯಾನ

July 9, 2026

ರಾಷ್ಟ್ರಗೀತೆ ಹಾಡುವ ವೇಳೆ ಕಣ್ಣೀರಾಕಿದ ಸಿರಾಜ್

ಇತ್ತ ಟ್ರಂಪ್ ಬೆಂಬಲಿಗರ ವರ್ತನೆಯನ್ನ ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ, ಚುನಾಯಿತ ಅಧ್ಯಯಕ್ಷ ಜೋ ಬಿಡೆನ್, ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ , ಬ್ರಿಟನ್ ಪ್ರಧಾನಿ ಸೇರಿದಂತೆ ಹಲವರು ತೀವ್ರವಾಗಿ ಖಂಡಿಸಿದ್ದಾರೆ. ಇತ್ತ ಡೆಮಾಕ್ರೆಟಿಕ್ ಪಕ್ಷದ ಕೆಲ ನಾಯಕರು ಇದೀಗ ಟ್ರಂಪ್ ವಿರುದ್ಧ ತಿರುಗಿಬಿದ್ದಿದ್ದಾರೆ. ಮತ್ತೊಂದೆಡೆ ಟ್ರಂಪ್​ರನ್ನ ಅವಧಿಗೂ ಮುನ್ನವೇ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಬಗ್ಗೆ ಟ್ರಂಪ್ ಸಂಪುಟ ಸದಸ್ಯರು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗ್ತಿದೆ. ಇತ್ತ ಒಬಾಮಾ ಅವರು ಈ ವಿರುದ್ಧ ಕಿಡಿ ಕಾರಿದ್ದು, ಅಮೆರಿಕಾದಲ್ಲಿ ಹಿಂಸಾಚಾರಕ್ಕೆ ಡೊನಾಲ್ಡ್ ಟ್ರಂಪ್ ಅವರೇ  ಕಾರಣ ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕದ ಹಿಂಸಾಚಾರಕ್ಕೆ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ರಿಪಬ್ಲಿಕನ್ನರು ಕಾರಣ. ಈ ಘಟನೆಯನ್ನು ನಮ್ಮ ದೇಶಕ್ಕೆ ಅತಿ ದೊಡ್ಡ ಅಗೌರವ ಹಾಗೂ ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ಹೊರಹಾಕಿದ್ದಾರೆ.

ನಟ ಸೋನು ಸೂದ್ ವಿರುದ್ಧ ದೂರು

ಇತ್ತ ಕ್ಯಾಪಿಟಲ್ ಬಿಲ್ಡಿಂಗ್ ​ಗೆ ಮುತ್ತಿಗೆ ಹಾಕಿದ್ದು ಅಮೆರಿಕಾದ ಕರಾಳ ದಿನ ಎಂದು ಅಮೆರಿಕಾ ಚುನಾಯಿತ ಅಧ್ಯಕ್ಷರಾದ ಜೋ ಬಿಡೆನ್ ಕಿಡಿಕಾರಿದ್ದಾರೆ. ಅಮೆರಿಕಾದ ಜನರಂತೆಯೇ ಇಡೀ ವಿಶ್ವವೇ ಇದನ್ನು ನೋಡುತ್ತಿದೆ. ಈ ಘಟನೆ ನನಗೆ ಶಾಕ್ ನೀಡಿದ್ದು, ಬೇಸರ ತಂದಿದೆ. ನಮ್ಮ ಪ್ರಜಾಪ್ರಭುತ್ವದಲ್ಲಿ ಹಿಂದೆಂದೂ ಕಂಡಿರದ ದಾಳಿಯಾಗಿದೆ. ಪ್ರಜಾಪ್ರಭುತ್ವದ ಭರವಸೆಯ ಬೆಳಕಾಗಿದ್ದ ವ್ಯವಸ್ಥೆಯಲ್ಲಿ ಕತ್ತಲು ಆವರಿಸಿದೆ. ಯುದ್ಧ ಮತ್ತು ಕಲಹಗಳನ್ನು ಅಮೆರಿಕಾ ಹೆಚ್ಚು ಸಹಿಸಿಕೊಂಡಿದೆ. ನಾವು ಇದನ್ನೂ ಸಹಿಸಿಕೊಳ್ಳುತ್ತೇವೆ ಮತ್ತು ಮೇಲುಗೈ ಸಾಧಿಸುತ್ತೇವೆ ಎಂದಿದ್ದಾರೆ. ಇನ್ನೂ ಅಮೆರಿಕದ ಸಂಸತ್​ ಮೇಲೆ ನಡೆದಿರುವ ದಾಳಿ ಕಾನೂನು ಬಾಹೀರ ಮತ್ತು ಹಿಂಸಾಚಾರ ಎಂಬುದು ಪ್ರಜಾಪ್ರಭುತ್ವದ ವಿರೋಧಿ ನಿಲುವು. ಹೀಗಾಗಿ ಈ ನಿಲುವನ್ನು ನಾವು ಖಂಡಿಸುತ್ತೇವೆ ಎಂದು ಅಲ್ಪಾಬೆಟ್​ ಮತ್ತು ಗೂಗಲ್ ಮುಖ್ಯ ಕಾರ್ಯನಿರ್ವಾಹಕ ಸುಂದರ್​ ಪಿಚೈ ಅಭಿಪ್ರಾಯಪಟ್ಟಿದ್ದಾರೆ.

ಇನ್ನೂ ಮೋದಿ ಸಹ ಈ ಕುರಿತಾಗಿ ಪ್ರತಿಕ್ರಿಯಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿ ನೋಡಿ ಬೇಸರವಾಗಿದೆ. ಅಧಿಕಾರದ ಹಸ್ತಾಂತರವೂ ಕ್ರಮಬದ್ಧ ಮತ್ತು ಶಾಂತಿಯುತವಾಗಿ ಮುಂದುವರಿಯಬೇಕು. ಕಾನೂನುಬಾಹಿರ ಪ್ರತಿಭಟನೆಗಳ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಮಟ್ಟಹಾಕಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.
Pm modi

ಒಟ್ಟಾರೆ ಸೋಲಪ್ಪಲು ತಯಾರಿಲ್ಲದ ಡೊನಾಲ್ಡ್ ಟ್ರಂಪ್ ಅವರ ಕುಮ್ಮಕ್ಕೇ ಹಿಂಸಾಚಾರಕ್ಕೆ ಕಾರಣ ಅನ್ನೋ ವಾದ ವಿವಾದಗಳು, ಚರ್ಚೆಗಳು ಎಲ್ಲೆಡೆ ಆರಂಭವಾಗಿದ್ದು, ಟ್ರಂಪ್ ಬೆಂಬಲಿಗರ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಅಸಹಜ ಹಿಂಸಾಚಾರದಿಂದಾಗಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಇಂತಹ ಘಟನೆಯಿಂದಾಗಿ ಅಮೆರಿಕಾಗೆ ಅಗೌರವ ತರಲಾಗಿದ್ದು, ಇಡೀ ವಿಶ್ವವೇ ಬೆಚ್ಚಿ ಬೀಳುವಂತಾಗಿದೆ.

 

 

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: americaamerica voilencebarak obamaDonald TrumpJoe bidenModi
ShareTweetSendShare
Join us on:

Related Posts

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

by Shwetha
July 9, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುತ್ತಿದ್ದಾರೆ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಫುಟ್‌ಪಾತ್ ತೆರವು ಬಳಿಕ GBAಯಿಂದ ವಿಶೇಷ ಸ್ವಚ್ಛತಾ ಅಭಿಯಾನ

by Shwetha
July 9, 2026
0

ಬೆಂಗಳೂರು ನಗರದಲ್ಲಿ ಫುಟ್‌ಪಾತ್‌ ತೆರವು ಕಾರ್ಯಾಚರಣೆಯ ಬೆನ್ನಲ್ಲೇ, GBA ನಗರವ್ಯಾಪಿ ವಿಶೇಷ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಸಜ್ಜಾಗಿದೆ. ಈ ಅಭಿಯಾನದಡಿ ರಸ್ತೆಬದಿಯ ಕಟ್ಟಡ ನಿರ್ಮಾಣ ತ್ಯಾಜ್ಯ ಹಾಗೂ...

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

by Shwetha
July 9, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ರಾಜ್ಯ ಸರ್ಕಾರದ ನಡುವಿನ ಸೈದ್ಧಾಂತಿಕ ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು...

ಅಭಿವೃದ್ಧಿ ಶೂನ್ಯ, ಭ್ರಷ್ಟಾಚಾರವೇ ಸಾಧನೆ: ರಾಜ್ಯವನ್ನು ಕುಡುಕರ ತಾಣವಾಗಿಸಲು ಹೊರಟಿದೆ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ : ಬಿ ವೈ ವಿಜಯೇಂದ್ರ ಆಕ್ರೋಶ

‘ನನ್ನನ್ನೇ ಅಪರಾಧಿಯನ್ನಾಗಿ ಬಿಂಬಿಸಲು ಪಕ್ಷದವರೇ ಯತ್ನಿಸಿದ್ದಾರೆ’: ಬಿ.ವೈ. ವಿಜಯೇಂದ್ರ

by Shwetha
July 9, 2026
0

ಬಿ.ವೈ. ವಿಜಯೇಂದ್ರ ಅವರು, MLC ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣದ ಕುರಿತು ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, MLC...

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

by Shwetha
July 9, 2026
0

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯವೈಖರಿ ಮತ್ತು ಅವರ ಇತ್ತೀಚಿನ ಸರಣಿ ಸಭೆಗಳ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ನೀಡಿರುವ ಹೇಳಿಕೆ ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram