ಬೆಂಗಳೂರು: ಹೆಮ್ಮಾರಿ ಕೊರೊನಾಗೆ ಲಸಿಕೆ ನೀಡಲು ಗ್ರೀನ್ ಸಿಗ್ನಲ್ ಕೊಡುತ್ತಿದ್ದಂತೆ ಶೀಘ್ರವೇ ರಾಜ್ಯದಲ್ಲೂ ಲಸಿಕೆ ಅಭಿಯಾನ ಆರಂಭವಾಗುತ್ತಿದ್ದೆ. ಈ ಹಿನ್ನೆಲೆಯಲ್ಲಿ ರಾಜ್ಯದ 263 ಕಡೆಗಳಲ್ಲಿ ಇಂದು ಲಸಿಕೆ ವಿತರಣೆಯ ತಾಲೀಮು(ಡ್ರೈ ರನ್) ನಡೆಯಲಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕಳೆದ ವಾರ ಕೇವಲ ನಾಲ್ಕು ಜಿಲ್ಲೆಗಳಲ್ಲಿ ಆಯ್ದ ಕಡೆ ಮಾತ್ರ ಲಸಿಕೆ ವಿತರಣೆ ಸಂಬಂಧ ಡ್ರೈ ರನ್ ಮಾಡಲಾಗಿತ್ತು. ಇಂದು ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಮೂರು ಕಡೆ ಲಸಿಕೆ ವಿತರಣೆಯ ತಾಲೀಮು ನಡೆಯಬೇಕಿತ್ತು. ಆದರೆ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಏಳು ಕಡೆ ಲಸಿಕೆ ವಿತರಣೆತ ಅಣಕು ಪ್ರದರ್ಶನ ನಡೆಯಲಿದೆ.
24 ಜಿಲ್ಲಾಸ್ಪತ್ರೆ, 20 ಮೆಡಿಕಲ್ ಕಾಲೇಜು, 43 ತಾಲೂಕು ಆಸ್ಪತ್ರೆ, 31 ಸಮುದಾಯ ಆರೋಗ್ಯ ಕೇಂದ್ರ, 87 ಪ್ರಾಥಮಿಕ ಆರೋಗ್ಯ ಕೇಂದ್ರ, 30 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 28 ಖಾಸಗಿ ಆರೋಗ್ಯ ಕೇಂದ್ರ ಸೇರಿಕೊಂಡು 263 ಪ್ರದೇಶಗಳಲ್ಲಿ ಲಸಿಕೆಯ ವಿತರಣೆ ನಡೆಯಲಿದೆ.
ಕೇಂದ್ರ ಸರ್ಕಾರದಿಂದ ಕೊರೊನಾ ಲಸಿಕೆ ವಿತರಣೆಗೆಂದು 24 ಲಕ್ಷ ಸಿರಿಂಜುಗಳನ್ನು ಕಳಿಸಿಕೊಟ್ಟಿದೆ. ಇವುಗಳನ್ನು ಎಲ್ಲ ಜಿಲ್ಲೆಗಳಿಗೆ ಕಳುಹಿಸಿಕೊಡಲಾಗಿದೆ. ರಾಜ್ಯದಲ್ಲಿ 10 ವಾಕ್-ಇನ್ ಕೂಲರ್, 4 ವಾಕ್-ಇನ್ ಫ್ರೀಜರ್, 3,201 ಐಎಲ್ ಆರ್, 3039 ಡೀಪ್ ಫ್ರೀಜರ್, 3,312 ಕೋಲ್ಡ್ ಬಾಕ್ಸ್, 46,591 ಲಸಿಕೆ ಕ್ಯಾರಿಯರ್, 2,25,749 ಐಸ್ ಪ್ಯಾಕ್ ಲಭ್ಯವಿದೆ. ಕೇಂದ್ರ ಸರ್ಕಾರವು 225 ಲೀಟರ್ ಸಾಮರ್ಥ್ಯ ದ 64 ಐಎಲ್ ಆರ್ ಗಳನ್ನು ಕಳುಹಿಸಿಕೊಟ್ಟಿದೆ. ಇನ್ನೂ 2 ವಾಕ್-ಇನ್ ಕೂಲರ್, 1 ವಾಕ್-ಇನ್ ಫ್ರೀಜರ್ ಕಳುಹಿಸಿಕೊಡುವುದಾಗಿ ಕೇಂದ್ರ ತಿಳಿಸಿದೆ ಎಂದು ಆರೋಗ್ಯ ಸಚಿವ ಸುಧಾಕಾರ್ ತಿಳಿಸಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 6.30 ಲಕ್ಷ ಸಿಬ್ಬಂದಿ ಲಸಿಕೆ ವಿತರಣೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇನ್ನೂ ಕೂಡ ನೋಂದಣಿ ಮಾಡಿಸುವುದಾದರೆ ಬರಬಹುದು. 1 ಕೋಟಿ ಲಸಿಕೆಗಳನ್ನು ಕೇಂದ್ರ ಸರ್ಕಾರ ನಾನಾ ರಾಜ್ಯಗಳಿಗೆ ನೀಡಲಿದೆ. ಪೊಲೀಸರು, ಆರೋಗ್ಯ ಸಿಬ್ಬಂದಿ, ರಕ್ಷಣಾ ಸಿಬ್ಬಂದಿ, ಕೊರೊನಾ ನಿಯಂತ್ರಣದಲ್ಲಿ ಕಾರ್ಯ ಪ್ರವೃತ್ತರಾಗಿರುವವರಿಗೆ ಲಸಿಕೆ ಮೊದಲಿಗೆ ದೊರೆಯಲಿದೆ ಎಂದು ಸುಧಾಕರ್ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel