ಬೆಂಗಳೂರು: ದೇಶಕ್ಕೆ ಅನ್ನ ನೀಡುವ ಅನ್ನದಾತ ಸ್ವಾಭಿಮಾನಿಯೂ ಕೂಡ ಆಗಿದ್ದಾನೆ. ಐಟಿ ಬಿಟಿ, ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಬಳಿ ಗುರುತಿನ ಚೀಟಿಯಿರುತ್ತದೆ. ಇಂತಹ ಗುರುತಿನ ಚೀಟಿಯೇ ಇಂತಹ ವ್ಯಕ್ತಿ ಇಂತಲ್ಲಿ ಕೆಲಸ ಮಾಡುತ್ತಾನೆ. ಅವನ ವಿಳಾಸ ಇಂತಹದು ಎಂದು ಹೇಳಿ ಬಿಡುತ್ತದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಆದರೆ ಹೊಟ್ಟೆಗೆ ಅನ್ನ ನೀಡುವ ಜೀವದಾತನ ಬಳಿ ಇಂತಹ ಗುರುತಿನ ಚೀಟಿ ಇರದಿದ್ದರೆ ಹೇಗೆ? ಅಲ್ಲವೇ, ಹೌದು, ಈ ಪ್ರಶ್ನೆಗೆ ಈಗ ಉತ್ತರವೂ ದೊರಕಿದೆ.
ಅಂದ ಹಾಗೆ, ಕೃಷಿ ಇಲಾಖೆ ರೈತ ತಾನೊಬ್ಬ ಸ್ವಾಭಿಮಾನಿ ರೈತ ಎಂದು ಎದೆಯುಬ್ಬಿಸಿ ಹೇಳುವಂತಹ “ಸ್ವಾಭಿಮಾನಿ ರೈತ” ಹೆಸರಿನ ಗುರುತಿನ ಚೀಟಿಯನ್ನು ರೈತರಿಗೆ ನೀಡಲು ಸಜ್ಜಾಗಿದೆ.

ನಾಳೆ(ಜ.9ರಂದು) ರಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಮ್ಮ ಉಸ್ತುವಾರಿ ಜಿಲ್ಲೆ ಕೊಪ್ಪಳದಿಂದಲೇ ರೈತರಿಗೆ “ಸ್ವಾಭಿಮಾನಿ ರೈತ” ಎನ್ನುವ ಗುರುತಿನ ಚೀಟಿ ವಿತರಣೆಗೆ ಚಾಲನೆ ನೀಡುತ್ತಿದ್ದಾರೆ.
ತಂತ್ರಾಂಶದಲ್ಲಿ ನೋಂದಾಯಿಸಲ್ಪಟ್ಟಿರುವ ರೈತರಿಗೆ ಸ್ವಾಭಿಮಾನಿ ರೈತರ ಗುರುತಿನ ಚೀಟಿ ನೀಡಲಾಗುತ್ತಿದೆ.
“ಸ್ವಾಭಿಮಾನಿ ರೈತ” ಗುರುತಿನ ಚೀಟಿ ಎಂದರೇನು?
ರಾಜ್ಯದ ಇ-ಆಡಳಿತ ಇಲಾಖೆಯು ಎನ್.ಐ.ಸಿ ಮೂಲಕ ರಾಜ್ಯದ ರೈತರ ವಿವರಗಳನ್ನು ದಾಖಲಿಸಲು Fruits ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿದೆ. ಪ್ರತಿಯೊಬ್ಬ ರೈತರಿಗೆ ಒಂದು ಪ್ರತ್ಯೇಕ ಗುರುತಿನ ಸಂಖ್ಯೆಯನ್ನು ನೀಡುವುದು ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ನೋಂದಣಿಯ ಉದ್ದೇಶವಾಗಿದೆ. ಸದರಿ ಗುರುತಿನ ಸಂಖ್ಯೆಯ ಆಧಾರದಲ್ಲಿ ರೈತರು Fruits ತಂತ್ರಾಂಶ ಬಳಸುವ ಎಲ್ಲಾ ಇಲಾಖೆಗಳ ಸೌಲಭ್ಯಗಳನ್ನು ಪಡೆಯಬಹುದಾಗಿರುತ್ತದೆ.
ಗುರುತಿನ ಚೀಟಿ ವ್ಯಾಪ್ತಿ..
ಕೃಷಿ ಇಲಾಖೆ
ತೋಟಗಾರಿಕೆ ಇಲಾಖೆ
ರೇಷ್ಮೆ ಇಲಾಖೆ
ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆ
ರೈತರು ಪಡೆಯುವ ಈ ಎಲ್ಲಾ ಇಲಾಖೆಗಳ ಸೌಲಭ್ಯಗಳು ಅವರ ಗುರುತಿನ ಸಂಖ್ಯೆಗೆ ಎದುರಾಗಿ ದಾಖಲಾಗುತ್ತದೆ. Fruits ತಂತ್ರಾಂಶದಲ್ಲಿ ರೈತರ ನೋಂದಣಿಯು ಜೂನ್ 2018 ರಿಂದ ಪ್ರಾರಂಭವಾಗಿದೆ . ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗಳಲ್ಲಿ ರೈತರನ್ನು Fruits ತಂತ್ರಾಂಶದಲ್ಲಿ ನೋಂದಾಯಿಸಲಾಗುತ್ತಿದೆ. Fruits ತಂತ್ರಾಂಶದಲ್ಲಿ ರೈತರ ನೋಂದಾಣಿಗಾಗಿ ರೈತರ ಗುರುತು, ವಿಳಾಸ, ಭೂ ಹಿಡುವಳಿ, ಆಧಾರ್ ಗುರುತಿನ ಸಂಖ್ಯೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಈ ಎಲ್ಲಾ ಮಾಹಿತಿಯನ್ನು Fruits ನೋಂದಣಿ ಸಂಖ್ಯೆ ಆಧಾರಿತ ಗುರುತಿನ ಚೀಟಿಯನ್ನು ನೀಡಲು ಪ್ರಸ್ತಾಪಿಸಲಾಗಿದೆ.
ಹಿನ್ನಲೆ : . ಫ್ರೂಟ್ಸ್ ತಂತ್ರಾಂಶವನ್ನು ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳಲ್ಲಿ ಒಂದು ಬಾರಿ ಮಾತ್ರ ರೈತರ ನೋಂದಣಿ ಮಾಡಲು ಅಭಿವೃದ್ಧಿ ಪಡಿಸಲಾಗಿದೆ.
ಈ ತಂತ್ರಾಂಶದಲ್ಲಿ ಆಧಾರ್ ಕಾರ್ಡ್, ಪಹಣಿ (RTC), ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ರೈತರ ಜಾತಿ ಪ್ರಮಾಣ ಪತ್ರ, ಬ್ಯಾಂಕ್ ವಿವರ, photo ಇತ್ಯಾದಿ ದಾಖಲಾತಿಗಳನ್ನು ಪರಿಶೀಲಿಸಿ ರೈತರ ನೋಂದಣಿ ಮಾಡಲಾಗುತ್ತದೆ. ರೈತರ ಹಿಡುವಳಿ ವಿವರವನ್ನು ಕಂದಾಯ ಇಲಾಖೆಯ `ಭೂಮಿ’ ತಂತ್ರಾಂಶದಿಂದ ಪಡೆಯಲಾಗುತ್ತದೆ.

ಪ್ರತಿ ನೋಂದಾಯಿತ ರೈತರಿಗೂ ಪ್ರತ್ಯೇಕ ನೋಂದಣಿ ಸಂಖ್ಯೆ ನೀಡಲಾಗುತ್ತದೆ ಹಾಗೂ ಮಾಹಿತಿಯನ್ನು ತಂತ್ರಾಂಶದಲ್ಲಿ ದಾಖಲಿಸಲಾಗುತ್ತದೆ. ಇಲ್ಲಿಯವರೆಗೆ ರೈತರಿಗೆ ನೋಂದಣಿಯಾದ ನಂತರ ನೀಡಲು ಯಾವುದೇ ನಿರ್ದಿಷ್ಟ ಸ್ವೀಕೃತಿ / ದಾಖಲೆ ಪತ್ರವನ್ನು ನಿಗದಿಪಡಿಸಿರುವುದಿಲ್ಲ. ಯಾವುದೇ ದಾಖಲಾತಿಗಳು ಇಲ್ಲದೆ ನಂತರದ ದಿನಗಳಲ್ಲಿ ಇಲಾಖೆಗಳನ್ನು ಸೌಲಭ್ಯಗಳಿಗಾಗಿ ಸಂಪರ್ಕಿಸಿದಾಗ ನೋಂದಣಿ ಸಂಖ್ಯೆಯನ್ನು ರೈತರು ಬರೆದಿಟ್ಟುಕೊಂಡು, ನೆನಪಿನಲ್ಲಿಟ್ಟುಕೊಂಡು ಸರಿಯಾದ ಸಂಖ್ಯೆಯನ್ನು ನೀಡುವುದು ಕಷ್ಟ ಸಾಧ್ಯವಾಗುತ್ತದೆ. ಈ ಅನಾನುಕೂಲತೆಯನ್ನು ಪರಿಹರಿಸಲು, ವಿವಿಧ ದಾಖಲಾತಿಗಳನ್ನು , ಭೂ ಹಿಡುವಳಿ ವಿವರಗಳನ್ನು ಪರಿಶೀಲಿಸಿ ನೋಂದಾಯಿಸಿದ ರೈತರಿಗೆ Fruits ನೋಂದಣಿ ಸಂಖ್ಯೆ ಆಧಾರಿತ ಗುರುತಿನ ಚೀಟಿಯನ್ನು ನೀಡಲು ಪ್ರಸ್ತಾಪಿಸಲಾಗಿದೆ.
ಗುರುತಿನ ಚೀಟಿಯಿಂದೇನು ಲಾಭ?
ಇದರಿಂದ ರೈತರು ಬೆಳೆ ಸಾಲ, ಪಿಎಂ ಕಿಸಾನ್ ಮುಂತಾದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಕಚೇರಿಗಳಲ್ಲಿ ವ್ಯಯಿಸಬೇಕಾದ ಸಮಯವನ್ನು ಉಳಿಸಬಹುದು ಹಾಗೂ ರೈತರಿಗೆ ಇದು ಒಂದು ವ್ಯವಹಾರಿಕ ಗುರುತಿನ ಚೀಟಿಯಾಗುತ್ತದೆ.
ಯೋಜನೆಯ ಉದ್ದೇಶಗಳೇನು?
ವಿವಿಧ ದಾಖಲಾತಿಗಳನ್ನು ಭೂ ಹಿಡುವಳಿ ವಿವರಗಳನ್ನು ಪರಿಶೀಲಿಸಿ ರೈತರಿಗೆ Fruits ನೋಂದಣಿ ಸಂಖ್ಯೆ ಆಧಾರಿತ ಗುರುತಿನ ಚೀಟಿಯನ್ನು ನೀಡುವುದರಿಂದ ರೈತರು ಬೆಳೆಸಾಲ, ಪಿಎಂಕಿಸಾನ್ ಮುಂತಾದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಕಛೇರಿಗಳಲ್ಲಿ ವ್ಯಯಿಸಬೇಕಾದ ಸಮಯವನ್ನು ಉಳಿಸಬಹುದು ಹಾಗೂ ರೈತರಿಗೆ ಇದು ಒಂದು ವ್ಯಾವಹಾರಿಕ ಗುರುತಿನ ಚೀಟಿಯಾಗುತ್ತದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಈಗಾಗಲೇ “ಕೃಷಿ ಸಂಜೀವಿನಿ” ಸಸ್ಯ ಚಿಕಿತ್ಸಾ ಸಂಚಾರಿ ವಾಹನಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆಗೊಳಿಸಿದ್ದಾರೆ. ನಾಳೆ(ಶನಿವಾರ) ಸಹ ಕೊಪ್ಪಳಕ್ಕಾಗಿ ವಿಶೇಷವಾಗಿ 20 ಕೃಷಿ ಸಂಜೀವಿನಿ ವಾಹನಗಳನ್ನು ಪ್ರತ್ಯೇಕವಾಗಿ ಲೋಕಾರ್ಪಣೆಗೊಳಿಸುತ್ತಿದ್ದಾರೆ. ಇದೇ ವೇಳೆ ಸ್ವಾಭಿಮಾನಿ ರೈತ ಗುರುತಿನ ಚೀಟಿಯನ್ನೂ ಸಹ ಲೋಕಾರ್ಪಣೆಗೊಳಿಸುತ್ತಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








