ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ಇಳಯದಳಪತಿ’ ವಿಜಯ್ ಮಾಸ್ಟರ್ ಸಿನ್ಮಾ ರಿವ್ಯೂವ್..!

Mahesh M Dhandu by Mahesh M Dhandu
January 14, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

‘ಇಳಯದಳಪತಿ’ ವಿಜಯ್ ಮಾಸ್ಟರ್ ಸಿನ್ಮಾ ರಿವ್ಯೂವ್..!

ವಿಭಿನ್ನ ಚಿತ್ರಗಳು ಹಾಗೂ ವಿಶಿಷ್ಟ ಅಭಿನಯದಿಂದ ಅನೇಕ ಅಭಿಮಾನಿಗಳನ್ನು ಸಂಪಾದಿಸಿರುವ ಕಾಲಿವುಡ್ ಸ್ಟಾರ್ ಹೀರೋ, ‘ಇಳಯದಳಪತಿ’ ವಿಜಯ್. ಕಳೆದ ಕೆಲವು ವರ್ಷಗಳಿಂದ ಬ್ಯಾಕ್ ಟು ಬ್ಯಾಕ್ ಸಕ್ಸಸ್ ನೊಂದಿಗೆ ಕಾಲಿವುಡ್ ನಲ್ಲಿ ಟಾಪ್ ಹೀರೋ ಆಗಿ ಗುರುತಿಸಿಕೊಂಡಿದ್ದಾರೆ.

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

ಸಾಲು ಸಾಲಾಗಿ ಚಿತ್ರಗಳನ್ನು ಘೋಷಿಸುತ್ತಾ ವಿಜಯ್ ಸಾಗುತ್ತಿದ್ದಾರೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಬುಧವಾರ ವಿಜಯ್ ‘ಮಾಸ್ಟರ್’ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

ಸಾಮಾನ್ಯವಾಗಿ ವಿಜಯ್ ಮೂವಿ ಎಂದರೆ ಅಭಿಮಾನಿಗಳ ಕ್ರೇಜ್ ಬೆಟ್ಟದಷ್ಟಿರುತ್ತದೆ. ಇದಲ್ಲದೇ ಈ ಚಿತ್ರದಲ್ಲಿ ವಿಜಯ್ ಸೇತುಪತಿ ಕೂಡ ವಿಜಯ್ ಜೊತೆ ತೆರೆ ಹಂಚಿಕೊಂಡಿದ್ದು ಕಾಲಿವುಡ್ ಇಂಡಸ್ಟ್ರಿಯಲ್ಲಿ, ಅಭಿಮಾನಿಗಳಲ್ಲೂ ನಿರೀಕ್ಷೆಗಳು ಹೆಚ್ಚಾಗಿದ್ದವು.

ಹಾಗಾದ್ರೆ ಮಾಸ್ಟರ್ ಗೆ ಅಭಿಮಾನಿಗಳು ಪಿಧಾ ಆದ್ರಾ..? ವಿಜಯ್ ತನ್ನ ಯಶಸ್ಸನ್ನು ಮುಂದುವರೆಸಿದ್ದಾರೆಯೇ.. ಇಲ್ಲವೇ..? ಮುಂದೆ ಓದಿ.

ಕಥೆ ವಿಚಾರಕ್ಕೆ ಬಂದ್ರೆ ಭವಾನಿ (ವಿಜಯ್ ಸೇತುಪತಿ) ಹೆಸರು ವಾಸಿ ರೌಡಿಶೀಟರ್. ಅವನು ಹೇಗಿದ್ದಾನೆ ಎಂಬುದರ ಬಗ್ಗೆ ಜನರಿಗೆ ಹೆಚ್ಚು ತಿಳಿದಿರುವುದಿಲ್ಲ. ಆದ್ರೆ ಅವನು ಎಂಥ ಕ್ರೂರಿ ಅನ್ನೋದು ಎಲ್ಲರಿಗೂ ಗೊತ್ತಿರುತ್ತೆ. ಲಾರಿಗಳಲ್ಲಿ ಮಾದಕ ಪದಾರ್ಥಗಳನ್ನು ಸರಬರಾಜು ಮಾಡುತ್ತಾ ರಾಜಕೀಯವಾಗಿ ಬೆಳೆಯೋದು ಭವಾನಿಯ ಆಸೆಯಾಗಿರುತ್ತೆ. ಅದರ ಭಾಗವಾಗಿಯೇ ಮೊದಲು, ಲಾರಿ ಯುನಿಯನ್ ಅಧ್ಯಕ್ಷನಾಗಲು ಬಯಸುತ್ತಾನೆ. ಅದರಂತೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪ್ರತಿಸ್ಪರ್ಧಿಗಳನ್ನು ಕೊಲ್ಲಲು ಪ್ಲಾನ್ ಮಾಡ್ತಾನೆ.

ಇನ್ನೊಂದು ಕಡೆ ಜೆಡಿ ( ವಿಜಯ್ ) ಯಾವುದೇ ನಿಯಮಗಳನ್ನು ಪಾಲಿಸದ ಕಾಲೇಜು ಪ್ರಾಧ್ಯಾಪಕ. ಮದ್ಯವ್ಯಸನಕ್ಕೆ ದಾಸರಾಗಿ, ಸಹ ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸುತ್ತಾನೆ. ಸಹೋದ್ಯೋಗಿಗಳಿಗೆ ಇಷ್ಟವಾಗದಿದ್ದರೂ ಜೆಡಿ ಅಂದ್ರೆ ವಿದ್ಯಾರ್ಥಿಗಳಿಗೆ ಹೀರೋ. ಜೆಡಿ ಸರ್ ಇಲ್ಲದೆ ಕಾಲೇಜಿನಲ್ಲಿ ಯಾವುದೇ ಕಾರ್ಯಕ್ರಮಗಳು ನಡೆಯೋದಿಲ್ಲ. ಜೆಡಿ ಸರ್ ಗಾಗಿ ವಿದ್ಯಾರ್ಥಿಗಳು ಏನು ಬೇಕಾದರೂ ಮಾಡಲು ಸಿದ್ಧರಿರುತ್ತಾರೆ. ಇಂತಹ ಜೆಡಿ ಕೆಲವು ಕಾರಣಗಳಿಗಾಗಿ ಆ ಊರಿನ ಬಾಲ ಅಪರಾಧಿಗಳಿಗೆ ಪಾಠ ಕಲಿಸಬೇಕಾಗುತ್ತದೆ.

master

ಮೊದಲು ಅರ್ಧ ಮನಸ್ಸಿನಿಂದಲೇ ಅಲ್ಲಿಗೆ ಹೋಗೋ ಜೆಡಿಗೆ ಅನಿರೀಕ್ಷಿತ ಘಟನೆವೊಂದು ಎದುರಾಗುತ್ತದೆ. ಈ ಕ್ರಮದಲ್ಲಿ, ಜೆಡಿ ಮತ್ತು ಭವಾನಿ ಮಧ್ಯೆ ಪರೋಕ್ಷವಾಗಿ ಯುದ್ಧ ಆರಂಭವಾಗುತ್ತದೆ. ಬಾಲ ಅಪರಾಧಿಗಳಿಗೂ ಮತ್ತು ಭವಾನಿಗೂ ಇರುವ ಸಂಬಂಧವೇನು..? ಮದ್ಯಕ್ಕೆ ದಾಸನಾಗಿದ್ದ ಜೆಡಿ ಸಡನ್ ಆಗಿ ಅದೆಲ್ಲಾ ಬಿಟ್ಟು, ಮಕ್ಕಳ ರಕ್ಷಣೆಗೆ ನಿಲ್ಲೋದ್ಯಾಕೆ..? sಭವಾನಿ ಕಟ್ಟಿದ ಸಾಮ್ರಾಜ್ಯವನ್ನು ಜೆಡಿ ಹೇಗೆ ಛಿದ್ರ ಮಾಡ್ತಾನೆ ಅನ್ನೋದೇ ಉಳಿದ ಕಥೆ.

ನಟರ ವಿಚಾರಕ್ಕೆ ಬಂದ್ರೆ ಅಶಿಸ್ತು ಕಾಲೇಜು ಪ್ರಾಧ್ಯಾಪಕರಾಗಿ ವಿಜಯ್, ಮಾಸ್ ಪ್ರೇಕ್ಷಕರನ್ನು ರಂಜಿಸುವಲ್ಲಿ ಸಫಲರಾಗಿದ್ದಾರೆ. ವಿಜಯ್ ಸೇತುಪತಿ ಈ ಹಿಂದೆಂದೂ ಕಂಡರಿಯದ ರೀತಿ ಚಿತ್ರದಲ್ಲಿ ನಮಗೆ ಕಾಣ್ತಾರೆ. ತನ್ನ ಬೆಳವಣಿಗೆಗಾಗಿ ಎಂತಹ ಅನ್ಯಾಯವಾದರೂ ಮಾಡೋ ಕ್ರೂರಿಯಾಗಿ ಅಧ್ಭುತವಾಗಿ ನಟಿಸಿದ್ದಾರೆ. ಈ ಚಿತ್ರವನ್ನು ನೋಡಿದ ಪ್ರತಿಯೊಬ್ಬರೂ ಭವಾನಿ ಪಾತ್ರವನ್ನು ಮರೆಯುವುದಿಲ್ಲ. ಚಾರು ಪಾತ್ರದಲ್ಲಿ ಮಾಳವಿಕಾ ಮೋಹನ್ ಮೋಡಿ ಮಾಡಿದ್ದಾರೆ. ಆಂಡ್ರಿಯಾ ಮತ್ತು ಶಾಂತನು ಭಾಗ್ಯರಾಜ್ ಅವರ ಪರಧಿಯಲ್ಲಿ ನಟಿಸಿದ್ದಾರೆ.

ವಿಶ್ಲೇಷಣೆ
‘ಖೈದಿ’ ಯಂತಹ ಬ್ಲಾಕ್ ಬಸ್ಟರ್ ಹಿಟ್ ನಂತರ, ಲೋಕೇಶ ಕನಕರಾಜ್ ನಿರ್ದೇಶನ ಮಾಡಿದ ಚಿತ್ರವಾಗಿದ್ದರಿಂದ ಮಾಸ್ಟರ್ ಸಿನಿಮಾ ಮೇಲೆ ಭಾರಿ ನಿರೀಕ್ಷೆಗಳಿದ್ದವು. ಆದ್ರೆ ಆ ನಿರೀಕ್ಷೆಗಳನ್ನು ನಿರ್ದೇಶಕ ಲೋಕೇಶ್ ಹುಸಿಗೊಳಿಸಿದ್ದಾರೆ ಅಂತಾನೆ ಹೇಳಬಹುದು. ವಿಜಯ್ ಯಂತಹ ಮಾಸ್ ಹೀರೋ ಜೊತೆ ಸಂದೇಶನಾತ್ಮಕ ಸಿನಿಮಾಗೆ ಕಮರ್ಷಿಯಲ್ ಮಸಾಲೆ ಪದಾರ್ಥಗಳನ್ನು ಸೇರಿಸಿ ಸಿನಿಮಾ ಮಾಡುವಲ್ಲಿ ನಿರ್ದೇಶಕರು ತಡವರಿಸಿದ್ದಾರೆ. ಮೊದಲ ಭಾಗದಲ್ಲಿ ಕಥೆ ಹೇಳದೆ ನಾಯಕ ಮತ್ತು ಖಳನಾಯಕನನ್ನು ಹೈಲೈಟ್ ಮಾಡಲಾಗಿದೆ. ಮಾದಕ ವ್ಯಸನಿಯಾಗಿದ್ದ ಪ್ರಾಧ್ಯಾಪಕನ ಮೇಲೆ ವಿದ್ಯಾರ್ಥಿಗಳು ಇಷ್ಟೊಂದು ಆಸಕ್ತಿ ಏಕೆ ಬೆಳೆಸಿಕೊಂಡಿದ್ದಾರೆ ಅನ್ನೋ ಬಲವಾದ ಕಾರಣಗಳನ್ನು ತೋರಿಸಿಲ್ಲ. ಹೋಗಲಿ ಮೂಲ ಕಥೆಯನ್ನು ದ್ವಿತೀಯಾರ್ಧದಲ್ಲಿ ತೋರಿಸಿದ್ದಾರಾ ಅಂತ ನೋಡಿದ್ರೆ ಅಲ್ಲೂ ಕೂಡ ಕೆಲವು ದೃಶ್ಯಗಳು ಬೂಮರ್ ಅನ್ನ ಎಳೆದಂತಿವೆ. ಇನ್ನು ಪ್ರತಿ ಬಾರಿ ನಾಯಕ ಹಿಂದೆ ತಿರುಗಿ ಹೆಜ್ಜೆ ಹಾಕುವುದು ಕೂಡ ಪ್ರೇಕ್ಷಕರಿಗೆ ಇಷ್ಟವಾಗುದಿಲ್ಲ. ನಾಯಕ ಮತ್ತು ಖಳನಾಯಕರ ನಡುವಿನ ಫೈಟ್ ಕೂಡ ಆಸಕ್ತಿಕರವಾಗಿಲ್ಲ.

ನಾಯಕ ಮತ್ತು ಖಳನಾಯಕ ಸ್ಟ್ರಾಂಗ್ ಆಗಿದ್ದಾರೆ, ಆದರೆ ಅವರು ಭೇಟಿ ಮಾಡಿದ ದೃಶ್ಯಗಳು ಅಷ್ಟೇನೂ ಆಕರ್ಷಕವಾಗಿಲ್ಲ. ಚೈಲ್ಡ್ ಕ್ರಿಮಿನಲ್ ಅಬ್ಸರ್ವೇಶನ್ ಹೋಮ್ ಹಿನ್ನೆಲೆಯಲ್ಲಿ ಕಥೆಯನ್ನು ತಯಾರಿಸುವ ರೀತಿ ಉತ್ತಮವಾಗಿದೆ. ಅನಿರುದ್ಧ್ ಅವರ ಹಾಡುಗಳು ಓಕೆ ಓಕೆ ಅನ್ನೋ ರೀತಿ ಇದೆ. ಆದ್ರೆ ಹಿನ್ನೆಲೆ ಸಂಗೀತ ಚಿಂದಿ. ಆಕ್ಷನ್ ದೃಶ್ಯಗಳು ಮಾಸ್ ಪ್ರೇಕ್ಷಕರಿಗೆ ಇಷ್ಟವಾಗುತ್ತವೆ. ಸಂಕ್ಷಿಪ್ತವಾಗಿ ಹೇಳುವುದಾದರೆ, ಈ ‘ಮಾಸ್ಟರ್’ ಹೇಳೋ ಪಾಠಗಳು ಪ್ರೇಕ್ಷಕರಿಗೆ ಇಷ್ಟವಾಗದೇ ಇರಬಹುದು.

ಪ್ಲಸ್ ಪಾಯಿಂಟ್ಸ್ :
ವಿಜಯ್, ವಿಜಯ್ ಸೇತುಪತಿ ನಟನೆ.
ಹಿನ್ನೆಲೆ ಸಂಗೀತ
ಕಥೆಯ ಹಿನ್ನೆಲೆ

ಮೈನಸ್ ಪಾಯಿಂಟ್ಗಳು
ಆಮೆಗತಿ ಸ್ಕ್ರೀನ್ ಪ್ಲೇ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Mastervijayvijay setupathi
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram