ಬೆಂಗಳೂರ: ರಾಜ್ಯ ಬಿಜೆಪಿ ಸರ್ಕಾರ ಅವಧಿ ಪೂರ್ಣಗೊಳಿಸಲಿದೆ. ಮುಂದಿನ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ. ಸಚಿವರು ಜನರ ಜೊತೆಗಿದ್ದು ಕೆಲಸ ಮಾಡಬೇಕು ಎಂದು ಬಿಜೆಪಿ ಚಾಣಾಕ್ಯ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ವಿಧಾನಸೌಧದಲ್ಲಿ ನಡೆದ ಪೊಲೀಸ್ ವಸತಿ ಗೃಹ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾ, ರಾಜ್ಯದ ಜೊತೆ ಕೇಂದ್ರ ಸರ್ಕಾರ ಇದೆ. ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸಂಪೂರ್ಣ ಸಹಕಾರ ನೀಡಲಿದೆ. ಕರ್ನಾಟಕದ ವಿಕಾಸಕ್ಕಾಗಿ ಕೇಂದ್ರ ಸಹಾಯ ಮಾಡಲಿದೆ ಎಂದರು.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಲಾಗಿದೆ. ಮುಂದಿನ ಸಲವೂ ಬಿಜೆಪಿಯೇ ಅಧಿಕಾರಕ್ಕೇ ಬರಲಿದೆ. ನಾವು ಜನರಿಗಾಗಿ ಕೆಲಸ ಮಾಡುವವರು. ಒಂದೂವರೆ ವರ್ಷ ಬಿಎಸ್ವೈ ಉತ್ತಮ ಕೆಲಸ ಮಾಡಿದ್ದಾರೆ. ನಾವೆಲ್ಲರೂ ಸಿಎಂ ಯಡಿಯೂರಪ್ಪ ಕೈ ಬಲಪಡಿಸಬೇಕು. ಮೂಲಸೌಕರ್ಯಕ್ಕೆ ಭಾರತ ಸರ್ಕಾರ ಆದ್ಯತೆ ಕೊಡುತ್ತಿದೆ. ರಾಜ್ಯ ಸರ್ಕಾರಕ್ಕೆ ಕೇಂದ್ರ ಎಲ್ಲಾ ಸಹಕಾರ ನೀಡಲಿದೆ ಎಂದು ಅಮಿತ್ ಶಾ ಬಿಎಸ್ವೈಗೆ ಶಹಬ್ಬಾಸ್ಗಿರಿ ಕೊಡುವ ಮೂಲಕ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ.
ಕೊರೊನಾದಿಂದ ಈ ಸಂಕ್ರಮಣ ಮುಕ್ತಿ ನೀಡಿದೆ. ಎರಡು ವ್ಯಾಕ್ಸಿನ್ ದೇಶದಲ್ಲೇ ತಯಾರಿಸಲಾಗಿದೆ. ಇನ್ನು ಐದಾರು ವ್ಯಾಕ್ಸಿನ್ ಸಂಶೋಧನೆ ನಡೆದಿದೆ ಎಂದು ಅಮಿತ್ ಶಾ ತಿಳಿಸಿದರು.
ವಕ್ರದೋಷದವರಿಂದ ವಕ್ರದೃಷ್ಟಿ..
ವಕ್ರದೋಷ ಇದ್ದವರು ಲಸಿಕೆ ವಿಚಾರದಲ್ಲೂ ವಕ್ರದೃಷ್ಟಿ ಬೀರುತ್ತಿದ್ದಾರೆ. ದೇಶದಲ್ಲಿ ವ್ಯಾಕ್ಸಿನ್ ನೀಡಲು ಆರಂಭವಾಗಿದೆ. ಇಡೀ ಜಗತ್ತಿನಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಬೇರೆ ದೇಶಗಳ ಜೊತೆ ತುಲನಾತ್ಮಕವಾಗಿ ನೋಡಬೇಕು. ಬೇರೆ ದೇಶಗಳಿಗಿಂತ ಭಾರತ ಅತ್ಯುತ್ತಮವಾಗಿ ಲಸಿಕೆ ಹಂಚಿಕೆ ನಿರ್ವಹಣೆ ಮಾಡಿದೆ. ಹೀಗಾಗಿ ಕೋವಿಡ್ ವಿರುದ್ಧ ಪ್ರಬಲ ಹೋರಾಟ ಮಾಡಿದ್ದೇವೆ ಎಂದು ಅಮಿತ್ ಶಾ ಹೇಳಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಮೋದಿ ಅವರ ನೀತಿಗಳಿಂದ ಕೋವಿಡ್ ವಿರುದ್ಧ ಸಮರ್ಥ ಹೋರಾಟ ನಡೆಸಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಲಾಕ್ಡೌನ್ ಹೇರಲಾಯ್ತು, ಜನ ಪಾಲಿಸಿದರು. ಗಂಟೆ ಬಾರಿಸಲು ಕರೆ ನೀಡಿದರು. ಜನರು ಮೋದಿ ಕರೆಯನ್ನು ಪಾಲಿಸಿದರು. ದೀಪ ಹಚ್ಚಿ ಗೌರವ ಸಲ್ಲಿಸಿದರು. ಜನತೆ ಮೋದಿಯ ಎಲ್ಲ ಕರೆಗಳನ್ನು ಪಾಲಿಸಿದರು. ಈ ಕಾರಣದಿಂದ ಕೋವಿಡ್ ವಿರುದ್ಧ ಹೋರಾಡಲು ಸಾಧ್ಯವಾಯ್ತು. ಕರ್ನಾಟಕದ ಪೊಲೀಸರು ಸಾಕಷ್ಟು ಕೆಲಸ ಮಾಡಿದ್ದಾರೆ. ಕೋವಿಡ್ ನಲ್ಲಿ ಪೊಲೀಸರು ಮಾಡಿದ ಕಾರ್ಯ ಶ್ಲಾಘನೀಯ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








