‘ಕಿಚ್ಚ’ನಿಗೆ ಆಕ್ಷನ್ ಕಟ್ ಹೇಳುವ ಬಗ್ಗೆ ‘ಸಿಂಪಲ್ ಸ್ಟಾರ್’ ಹೇಳಿದ್ದು ಹೀಗೆ..!
ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಕಿಚ್ಚ ಸುದೀಪ್ ಹಾಗೂ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕಿಚ್ಚ ಸುದೀಪ್ ಸದ್ಯ ಬಹುನಿರೀಕ್ಷೆ ಪ್ಯಾಂಟಮ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಚಾರ್ಲಿ 777 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದಾದ ಬಳಿಕ ಕಿರಿಕ್ ಪಾರ್ಟಿ 2 ಸೇರಿ ಇನ್ನೂ ಹಲವು ಪ್ರಾಜೆಕ್ಟ್ ಗಳಲ್ಲಿ ಅವರು ನಿರತರಾಗಿದ್ದಾರೆ. ಇದರ ಬೆನ್ನಲ್ಲೇ ರಕ್ಷಿತ್ ಶೆಟ್ಟಿ ಹಾಗೂ ಸುದೀಪ್ ಕಾಂಬಿನೇಷನ್ ನ ಸಿನಿಮಾದ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ಚರ್ಚೆಗಳು ಜೋರಾಗಿವೆ.
`ಆಚಾರ್ಯ’ ಜೊತೆ ಸೇರಲು `ಧರ್ಮಸ್ಥಳಿ’ಗೆ ಬಂದೇ ಬಿಟ್ಟ `ಸಿದ್ದ’
ಹೌದು ಸುದೀಪ್ ಸಿನಿಮಾಗೆ ರಕ್ಷಿತ್ ಶೆಟ್ಟಿ ಆಕ್ಷನ್ ಕಟ್ ಹೇಳ್ತಾರೆ ಎನ್ನಲಾಗ್ತಿದೆ. ಇನ್ನೂ ಈ ಬಗ್ಗೆ ಸ್ವತಃ ರಕ್ಷಿತ್ ಶೆಟ್ಟಿ ಅವರೇ ಹೇಳಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದಿದ್ದ ರಕ್ಷಿತ್ ಶೆಟ್ಟಿ ಅವರು, ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. ಸುದೀಪ್ ಜೊತೆ ಸಿನಿಮಾ ಮಾಡಬೇಕು, ಈಗಾಗಲೇ ಅರ್ಧ ಸ್ಕ್ರಿಪ್ಟ್ ಮುಗಿದಿದೆ. ಇನ್ನು ಉಳಿದ ಭಾಗದ ಸ್ಕ್ರಿಪ್ಟ್ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ. ಇದ್ರಿಂದಾಗಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
‘ಸೋನು ಸೂದ್ ಟೇಲರಿಂಗ್ ಶಾಪ್’ … ಉಚಿತ ಸೇವೆ.. ‘ಪ್ಯಾಂಟ್ ಹೋಗಿ ಚಡ್ಡಿ ಆದ್ರೂ ಆಗಬಹುದು’..!
ಇತ್ತ ಚಾರ್ಲಿ ಬಿಟ್ರೆ ಕಿರಿಕ್ ಪಾರ್ಟಿ 2, ಸಪ್ತ ಸಾಗರದಾಚೆ, ಪುಣ್ಯಕೋಟಿ ಮತ್ತು ರಿಚ್ಚಿ ಸಿನಿಮಾಗಳು ರಕ್ಷಿತ್ ಕೈಲಿದ್ದು, ಇದಾದ ಬಳಿಕ ಸುದೀಪ್ ಜೊತೆಗಿನ ಸಿನಿಮಾ ಕೈಗೆತ್ತಿಕೊಳ್ಳುವುದಾಗಿ ಹೇಳಿದ್ದಾರೆ. ಇನ್ನು ಇದೇ ವೇಳೆ 777 ಚಾರ್ಲಿ ಸಿನಿಮಾದ ರಿಲೀಸ್ ಬಗ್ಗೆ ಮಾತನಾಡಿರುವ ರಕ್ಷಿತ್, ಈಗಾಗಲೇ ಮೊದಲ ಭಾಗದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯವಾಗಿದೆ. ಡಬ್ಬಿಂಗ್ ಸಹ ಮುಕ್ತಾಯವಾಗಿದೆ. ಲಾಕ್ ಡೌನ್ ಬಳಿಕ ಪ್ರಾರಂಭವಾದ ಚಿತ್ರೀಕರಣದ ಡಬ್ಬಿಂಗ್ ಭಾಗ ಬಾಕಿ ಇದೆ ಎಂದಿದ್ದಾರೆ. ಕೊನೆಯ ಹಂತದ ಚಿತ್ರೀಕರಣ ಅಂದರೆ 6 ದಿನಗಳ ಚಿತ್ರೀಕರಣ ಬಾಕಿ ಇದೆ. ಕಾಶ್ಮೀರದಲ್ಲಿ ಚಿತ್ರೀಕರಣ ಮಾಡಬೇಕಿದೆ ಮತ್ತೆ ಕಾಶ್ಮೀರಕ್ಕೆ ತೆರಳಬೇಕು ಎಂದು ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel