ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಶ್ವ ಕ್ರಿಕೆಟ್ ಗೆ ಟೀಮ್ ಇಂಡಿಯಾ ಕ್ರಿಕೆಟ್ ಗುರು….!

admin by admin
January 20, 2021
in Newsbeat, Saaksha Special, Sports, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ವಿಶ್ವ ಕ್ರಿಕೆಟ್ ಗೆ ಟೀಮ್ ಇಂಡಿಯಾ ಕ್ರಿಕೆಟ್ ಗುರು….!

ಗೆಲುವು… ಯಾವತ್ತೂ ಹಾಗೇ ಸುಮ್ಮನೆ ಒಲಿದು ಬರುವುದಿಲ್ಲ. ಅಲ್ಲಿ ಅವಮಾನವಿರುತ್ತೆ. ನೋವಿರುತ್ತೆ.. ಹತಾಶೆ ಇರುತ್ತೆ. ಸೋಲಿರುತ್ತೆ.. ಟೀಕೆ ಟಿಪ್ಪಣಿಗಳಿರುತ್ತೆ.. ಹಿಯಾಳಿಕೆಯ ಮಾತುಗಳಿರುತ್ತೆ.. ಆದ್ರೆ ಇದನ್ನೆಲ್ಲಾ ಮೆಟ್ಟಿ ನಿಂತು ಮುಖದಲ್ಲಿ ಮಂದಾಹಾಸದ ನಗು ಬೀರಿದಾಗ ಆಗುವಂತಹ ಖುಷಿ ಇದೆಯಲ್ವಾ ಅದನ್ನು ಬಣ್ಣಿಸಲು ಸಾಧ್ಯವಿಲ್ಲ.

Related posts

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

June 23, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

June 23, 2026

ಹೌದು, ಆಸ್ಟ್ರೇಲಿಯಾದ ಬ್ರಿಸ್ಬೇನ್ ನ ಗಬ್ಬಾ ಮೈದಾನದಲ್ಲಿ ಟೀಮ್ ಇಂಡಿಯಾ ಹುಡುಗರಿಗೂ ಆಗಿದ್ದು ಕೂಡ ಇದೇ ಅನುಭವ. ರಹಾನೆ ಹುಡುಗರ ಗೆಲುವಿನ ಆಲಾಪಣೆಯನ್ನು ವರ್ಣಿಸಲು ಸಾಧ್ಯವಿಲ್ಲ. ಆಸ್ಟ್ರೇಲಿಯನ್ನರು ಕನಸಿನಲ್ಲೂ ಈ ರೀತಿಯ ಸೋಲು ಅನುಭವಿಸುತ್ತೇವೆ ಅಂತ ಅಲೋಚನೆ ಕೂಡ ಮಾಡಿರಲಿಕ್ಕಿಲ್ಲ. ಆದ್ರೆ ಟೀಮ್ ಇಂಡಿಯಾ ಹುಡುಗರು ಗೆಲುವಿಗಾಗಿ ಆರಾಧನೆ ಮಾಡಿದ್ರು.

Team India

ಮೊದಲ ಟೆಸ್ಟ್ ನ ಹೀನಾಯ ಸೋಲಿನ ಅಪಮಾನ.. ಎರಡನೇ ಟೆಸ್ಟ್ ನಲ್ಲಿ ಸೇಡು ತೀರಿಸಿಕೊಂಡ ಗೆಲುವು.. ಮೂರನೇ ಟೆಸ್ಟ್ ನಲ್ಲಿ ಸೋಲಲೇಬಾರದು ಅನ್ನೋ ಹಠ.. ಇದ್ರ ನಡುವೆ, ಮಾತಿನ ಚಕಮಕಿ, ಟೀಕೆ, ಆರೋಪ, ಕುತಂತ್ರ, ಗಾಯದ ನೋವು, ಅನುಭವದ ಕೊರತೆ, ಹೀಗೆ ಇನ್ನೇನೂ ಸರಣಿ ಕೈ ಜಾರಿ ಹೋಗುತ್ತೆ.. ಮತ್ತೊಂದು ಸರಣಿ ಸೋಲಿನ ಆತಂಕದಲ್ಲೇ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರಹಾನೆ ಬಳಗ ಕಣಕ್ಕಿಳಿದಿತ್ತು.
ಅದಕ್ಕೆ ತಕ್ಕಂತೆ ಮೊದಲ ಇನಿಂಗ್ಸ್ ನ ಹಿನ್ನೆಡೆ, ಗೆಲುವಿಗಾಗಿ ಕಠಿಣ ಸವಾಲು.. ಟೀಮ್ ಇಂಡಿಯಾ ಮುಂದೆ ಇದ್ದದ್ದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದೊಂದೇ ದಾರಿ.
ಅದಕ್ಕೆ ತಕ್ಕಂತೆ ಪ್ಲಾನ್ ಮಾಡಿಕೊಂಡು ಐದನೇ ದಿನ ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾಗೆ ಶುಬ್ಮನ್ ಗಿಲ್ ಗೆಲುವಿನ ಆಸೆ ಮೂಡುವಂತೆ ಬ್ಯಾಟಿಂಗ್ ಮಾಡಿದ್ದರು. ರೋಹಿತ್ ಶರ್ಮಾ ವಿಕೆಟ್ ಬೇಗನೇ ಕಳೆದುಕೊಂಡ್ರೂ ಚೇತೇಶ್ವರ ಪೂಜಾರ ಅಳೆದು ತೂಗಿ ಬ್ಯಾಟ್ ಮಾಡುತ್ತಾ ರನ್ ದಾಖಲಿಸಿದ್ರು. ರಹಾನೆ ಗೆಲುವಿಗಾಗಿ ಬ್ಯಾಟಿಂಗ್ ಮಾಡಲು ಹೋಗಿ ಬೇಗನೇ ಔಟಾದ್ರು.
ಆದ್ರೆ ರಿಷಬ್ ಪಂತ್ ಎಲ್ಲವನ್ನೂ ಉಲ್ಟಪಲ್ಟಾ ಮಾಡಿಬಿಟ್ಟಿದ್ದರು. ಒಂದೆರಡು ಜೀವದಾನ ಪಡೆದುಕೊಂಡ ಪಂತ್, ಆಸ್ಟ್ರೇಲಿಯನ್ನರ ಲೆಕ್ಕಚಾರಗಳನ್ನು ಬುಡಮೇಲು ಮಾಡಿದ್ರು. ವಾಷಿಂಗ್ಟನ್ ಸುಂದರ್ ಸಮಯೋಚಿತ ಆಟದಿಂದ ಆಸ್ಟ್ರೇಲಿಯನ್ನರು ಸೋಲಿನ ದವಡೆಗೂ ಸಿಲಕಿದ್ರು.

ಅಷ್ಟಕ್ಕೂ ಆಗಿದ್ದೇನು… ಆಸ್ಟ್ರೇಲಿಯನ್ನರು ಯಂಗ್ ಇಂಡಿಯಾವನ್ನು ಲಘುವಾಗಿ ಪರಿಗಣಿಸಿದ್ರು. ಸ್ಲೆಡ್ಜಿಂಗ್ ಮಾಡಿ ಟೀಮ್ ಇಂಡಿಯಾವನ್ನು ಸೋಲಿಸಬಹುದು ಎಂದು ಅಂದು ಕೊಂಡಿದ್ದ ಆಸ್ಟ್ರೇಲಿಯಾ ಆಟಗಾರರಿಗೆ ಟೀಮ್ ಇಂಡಿಯಾದ ಬಿಸಿ ರಕ್ತದ ಹುಡುಗರು ತಕ್ಕ ಉತ್ತರ ನೀಡಿದ್ರು.
ಹಾಗೇ ನೋಡಿದ್ರೆ, ಟೀಮ್ ಇಂಡಿಯಾದ ಟೆಸ್ಟ್ ತಂಡ ಅನುಭವಿ ತಂಡವಲ್ಲ. ಎಲ್ಲಾ ಹೊಸ ಹುಡುಗರು.. ರೋಹಿತ್ , ರಹಾನೆ, ಪೂಜಾರ ಬಿಟ್ರೆ ಅನುಭವಿ ಆಟಗಾರರೇ ಇಲ್ಲ. ಆದ್ರೆ ಸೋಲು, ಅವಮಾನಕ್ಕೆ ಸೇಡು ತೀರಿಸಿಕೊಳ್ಳಬೇಕು ಅನ್ನೋ ಹಠ, ಛಲ ಮಾತ್ರ ಪ್ರತಿ ಆಟಗಾರರಲ್ಲೂ ಇತ್ತು. ಇದೇ ಟೀಮ್ ಇಂಡಿಯಾದ ಗೆಲುವಿನ ಗುಟ್ಟು..
ರಹಾನೆ ಅನ್ನೋ ಕೂಲ್ ಕ್ಯಾಪ್ಟನ್ ನ ರಣತಂತ್ರದ ಜೊತೆ ಆತ್ಮವಿಶ್ವಾಸ ಮತ್ತು ಧೈರ್ಯವನ್ನು ಮೆಚ್ಚಲೇಬೇಕು. ಮಹಮ್ಮದ್ ಸಿರಾಜ್, ನಟರಾಜನ್, ಸೈನಿ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಥಾಕೂರ್ ನಂತಹ ಅನನುಭವಿ ಬೌಲರ್ ಗಳು, ಪಂತ್, ಗಿಲ್, ಮಯಾಂಕ್ ಅಗರ್ ವಾಲ್ ನಂತಹ ಯವ ಬ್ಯಾಟ್ಸ್ ಮೆನ್ ಗಳು, ರೋಹಿತ್ ಮತ್ತು ಪೂಜಾರ ಬ್ಯಾಟಿಂಗ್ ಅನುಭವವನ್ನು ನಂಬಿಕೊಂಡು ಆಸ್ಟ್ರೇಲಿಯಾ ವಿರುದ್ಧ ಗೆಲುವು ದಾಖಲಿಸಿದ್ದ ರೀತಿ ಮಾತ್ರ ಅನನ್ಯ.

Team India

ಟೀಮ್ ಇಂಡಿಯಾದ ಯಶಸ್ಸಿನ ಹಿಂದಿದೆ ಕನ್ನಡಿಗರ ಶ್ರಮ…!

ಅಂದ ಹಾಗೇ ಟೀಮ್ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ವಿಜಯ ಸಾಧಿಸಿರಬಹುದು. ಏಕದಿನ ಸರಣಿಯಲ್ಲಿ ಸೋಲು ಕಂಡ್ರೂ ಟಿ-ಟ್ವೆಂಟಿ ಮತ್ತು ಟೆಸ್ಟ್ ಸರಣಿಯ ಗೆಲುವಿನ ಹಿಂದೆ ಕನ್ನಡಿಗರ ಕೊಡುಗೆ ಅಪಾರ.
ನಿಜ, ಯಂಗ್ ಟೀಮ್ ಇಂಡಿಯಾ ಆಟಗಾರರ ಪ್ರತಿಭೆಯನ್ನು ಗುರುತಿಸಿ ಅದಕ್ಕೆ ಹೊಸ ಸ್ವರೂಪ ಕೊಟ್ಟಿದ್ದು ದಿ ಗ್ರೇಟ್ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್. ದ್ರಾವಿಡ್ ಗರಡಿಯಲ್ಲಿ ಪಳಗಿದ್ದ ಬಹುತೇಕ ಆಟಗಾರರು ಇಂದು ಟೀಮ್ ಇಂಡಿಯಾದಲ್ಲಿ ಮಿಂಚು ಹರಿಸುತ್ತಿದ್ದಾರೆ. ಗುರು ದ್ರಾವಿಡ್ ನ ಮಾರ್ಗದರ್ಶನ, ನಿಸ್ವಾರ್ಥ ಮನಸ್ಸು ಟೀಮ್ ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷ ಸುನೀಲ್ ಜೋಶಿಗೆ ವರದಾನವಾಗಿತ್ತು.
ಒಂದು ಕಾಲದಲ್ಲಿ ಟೀಮ್ ಇಂಡಿಯಾದ ಬೆಂಚ್ ಸ್ಟ್ರೆಂತ್ ತುಂಬಾನೇ ವೀಕ್ ಆಗಿರುತ್ತಿತ್ತು. ಕಾರಣ ಆಂತರಿಕ ಲಾಬಿ ಕೂಡ. ಆದ್ರೆ ಜೋಶಿ ಹಾಗೇ ಮಾಡಲಿಲ್ಲ. ಆಡುವ 11ರ ಬಳಗದಷ್ಟೇ ಪ್ರತಿಭಾನ್ವಿತ ಆಟಗಾರರನ್ನು ಬೆಂಚ್ ಸ್ಟ್ರೇಂತ್ ಮಾಡಿಕೊಂಡ್ರು. ಗಾಯದ ಸಮಸ್ಯೆ ಬಂದ್ರೂ ಅವರ ಸ್ಥಾನವನ್ನು ತುಂಬುವಂತಹ ಆಟಗಾರರನ್ನು ಆಯ್ಕೆ ಮಾಡಿದ್ರು. ಇದು ಅಂತಿಮವಾಗಿ ಫಲ ಕೊಟ್ಟಿತ್ತು.

ಹಾಗೇ ಒಂದು ಮಾತು.. ಸಾಮಾನ್ಯವಾಗಿ ಕ್ರಿಕೆಟ್ ಅನ್ನೋದು ಶ್ರೀಮಂತರ ಆಟ ಅನ್ನೋ ಮಾತಿದೆ. ಆದ್ರೆ ಅದೆಲ್ಲಾ ಸುಳ್ಳು ಅನ್ನೋದು ಕಾಲ ಕಾಲಕ್ಕೆ ಸಾಬೀತಾಗುತ್ತಿದೆ. ಟೀಮ್ ಇಂಡಿಯಾದಲ್ಲಿ ಆಡುವಂತಹ ಬಹುತೇಕ ಆಟಗಾರರು ಮಧ್ಯಮ ಹಾಗೂ ಬಡ ಕುಟುಂಬದಿಂದ ಬಂದವರು. ಕ್ರಿಕೆಟ್ ಆಡಿ ಶ್ರೀಮಂತರಾಗುತ್ತಿದ್ದಾರೆ. ಬಡತನದ ಬವನೆಯಲ್ಲಿ ಬದುಕು ಕಟ್ಟಿಕೊಂಡ ಹುಡುಗರು ಟೀಮ್ ಇಂಡಿಯಾ ಆಸ್ತಿಯಾಗುತ್ತಿದ್ದಾರೆ. ಒಂದೊಂದು ಅವಕಾಶಕ್ಕಾಗಿ ತಾಳ್ಮೆಯಿಂದ ಕಾದಿದ್ದಾರೆ. ಇದಕ್ಕೆ ಮುಖ್ಯ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್.
ಐಪಿಎಲ್ ಅನ್ನೋ ಚಿನ್ನದ ಮೊಟ್ಟೆ ಆಟಗಾರರಿಗೆ ದುಡ್ಡು ಮಾತ್ರ ಕೊಟ್ಟಿಲ್ಲ. ಹೆಸರು, ಜನಪ್ರಿಯತೆಗಿಂತ ಹೆಚ್ಚಾಗಿ ಪ್ರತಿಭೆಗೆ ಮನ್ನಣೆ ಕೊಟ್ಟಿದೆ. ಏಕದಿನ ಮತ್ತು ಟಿ-ಟ್ವೆಂಟಿ ಕ್ರಿಕೆಟ್ ನ ಸ್ವರೂಪವನ್ನು ಬದಲಾಯಿಸಿರುವ ಐಪಿಎಲ್ ಟೆಸ್ಟ್ ಕ್ರಿಕೆಟ್ ಗೂ ಹೊಸ ರೂಪವನ್ನು ಕೊಟ್ಟಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯನ್ನು ಗಮನಿಸಿದಾಗ ಟೆಸ್ಟ್ ಕ್ರಿಕೆಟ್ ಬೋರ್ ಅಂತ ಹೇಳುವ ಹಾಗಿಲ್ಲ. ಅಷ್ಟೊಂದು ರೋಚಕತೆಯನ್ನು ಉಳಿಸಿಕೊಳ್ಳುವಲ್ಲಿ ಸಫಲವಾಗಿದೆ.Team India

ಕಡೆಯದಾಗಿ, ಆಸ್ಟ್ರೇಲಿಯಾ ತಂಡವನ್ನು ಅವರದ್ದೇ ನೆಲದಲ್ಲಿ ಸೋಲಿಸುವುದು ಸುಲಭದ ಮಾತಲ್ಲ. ಆಸ್ಟ್ರೇಲಿಯನ್ನರ ತಂತ್ರಗಾರಿಕೆ, ಗೇಮ್ ಪ್ಲಾನ್ ಉಳಿದ ತಂಡಗಳಿಗಿಂತ ಭಿನ್ನವಾಗಿರುತ್ತೆ. ಗೆಲುವಿಗಾಗಿ ಅವರು ಏನು ಬೇಕಾದ್ರೂ ಮಾಡಲು ರೆಡಿ ಇರುತ್ತಾರೆ. ಆಕ್ರಮಣಕಾರಿ ಆಟದ ಜೊತೆ ಸ್ಲೆಡ್ಜಿಂಗ್ ಮಾಡುತ್ತಾ ಎದುರಾಳಿ ಆಟಗಾರರ ಏಕಾಗ್ರತೆಯನ್ನು ಭಂಗ ಮಾಡುತ್ತಾರೆ. ಬಾಡಿ ಲೈನ್ ಬೌಲಿಂಗ್ ಮಾಡುತ್ತಾ ಬ್ಯಾಟ್ಸ್ ಮೆನ್ ಗಳನ್ನು ದಂಗುಬಡಿಸುತ್ತಾರೆ. ಇಂತಹ ಅಪಾಯಕಾರಿ ತಂಡದ ಎದುರು ಕೆಚ್ಚೆದೆಯಿಂದ ನಿಂತು ಆಡುವಂತಹ ಟೀಮ್ ಇಂಡಿಯಾ ಆಟಗಾರರು 56 ಇಂಚಿಗೇನೂ ಕಮ್ಮಿ ಏನಿಲ್ಲ.

 ಒಟ್ಟಿನಲ್ಲಿ ಭಾರತ ಬದಲಾಗುತ್ತಿದೆ. ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್ ಗೆ ಗುರು ಎಂಬುದರಲ್ಲಿ ಎರಡು ಮಾತಿಲ್ಲ. ಅದು ದುಡ್ಡು, ಅಧಿಕಾರ ಮತ್ತು ಆಟದಲ್ಲಿ… ಎಲ್ಲದರಲ್ಲೂ ಮಾದರಿ..

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: AustraliaCricketteam india
ShareTweetSendShare
Join us on:

Related Posts

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

by Shwetha
June 23, 2026
0

ನೀಟ್ 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ವಿಧಿಸಲಾಗಿದ್ದ ತಾತ್ಕಾಲಿಕ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ, ಆ್ಯಪ್‌ನ ಮೆಸೇಜ್-ಎಡಿಟಿಂಗ್ ಸೌಲಭ್ಯದ ಮೇಲಿನ ನಿರ್ಬಂಧವನ್ನು ಜೂನ್...

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

by Shwetha
June 23, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ಹಿಂದಿನ ಅವಧಿಯಲ್ಲಿ 17 ಜನ ಕಾಂಗ್ರೆಸ್ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram