ಶಿವಮೊಗ್ಗ: ಸದ್ಯದಲ್ಲೇ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಜೊತೆ ಸಭೆ ಕರೆಯಸಲಾಗುವುದು. ಕಾನೂನು ಬಾಹಿರವಾಗಿ ಎಲ್ಲೆಲ್ಲಿ ಕ್ವಾರಿಗಳು, ಕ್ರಷರ್ಗಳನ್ನು ನಡೆಸುತ್ತಿದ್ದಾರೋ ಅವುಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲು ಸೂಚನೆ ನೀಡುವುದಾಗಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರಗೇಶ್ ನಿರಾಣಿ ಭರವಸೆ ನೀಡಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಶಿವಮೊಗ್ಗದ ಹುಣಸೋಡು ಕಲ್ಲುಗಣಿಗಾರಿಕೆ ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಮುರುಗೇಶ್ ನಿರಾಣಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಇದಕ್ಕಾಗಿ ತನಿಖಾ ಸಮಿತಿಯನ್ನು ಶೀಘ್ರದಲ್ಲೇ ರಚನೆ ಮಾಡುತ್ತೇವೆ ಎಂದರು

ಹುಣಸೋಡು ಕಲ್ಲುಗಣಿಗಾರಿಕೆ ಸ್ಫೋಟಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ತನಿಖಾ ಸಮಿತಿ ರಚಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಅವರು ಎಷ್ಟೇ ಪ್ರಭಾವಿಗಳೇ ಇರಲಿ, ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಲು ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಕಾನೂನು ಬಾಹಿರವಾಗಿ ಎಲ್ಲೆಲ್ಲಿ ಅಕ್ರಮ ಕ್ವಾರಿಗಳು ನಡೆಯುತ್ತವೆ ಎಂಬುದನ್ನು ಶೀಘ್ರ ಪತ್ತೆಹಚ್ಚಿ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಭವಿಷ್ಯದಲ್ಲಿ ಇಂತಹ ಘಟನೆ ನಡೆಯದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ನಿರಾಣಿ ಹೇಳಿದರು.

ನನ್ನ ಅಧಿಕಾರ ಅವಧಿಯಲ್ಲಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಇಲ್ಲವೆ ಕಾನೂನು ಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಸಲು ಅವಕಾಶ ಕೊಡುವುದಿಲ್ಲ. ಸರ್ಕಾರದಿಂದ ಅನುಮತಿ ಪಡೆಯದಿದ್ದರೆ ಅಂತವರ ಮೇಲೆ ಕಾನೂನಿನಡಿ ಕ್ರಮ ಕೈಗೊಳ್ಳುತ್ತೆವೆ ಎಂದು ಎಚ್ಚರಿಸಿದರು.
ಈ ಘಟನೆ ಹೇಗೆ ನಡೆಯಿತು ? ರಾಜ್ಯಕ್ಕೆ ಜಿಲೆಟಿನ್ ಕಡ್ಡಿಗಳು ಎಲ್ಲಿಂದ ಬಂದವು? ಇದರ ಹಿಂದೆ ಯಾರಿದ್ದಾರೆ ? ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡಲಾಗುವುದು. ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದರು.
ಲೈಸೆನ್ಸ್ ಪಡೆದು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದರೆ ಜಿಲ್ಲಾಧಿಕಾರಿಗಲಿಂದ ಅನುಮತಿ ಪಡೆಯಬೇಕು. ಸ್ಫೋಟಕ್ಕೆ ಬಳಸುವವ ರಾಸಾಯನಿಕ ವಸ್ತುಗಳನ್ನು ಪರಿಶೀಲಿಸಿದ ಬಳಿಕ ಗುತ್ತಿಗೆ ನೀಡಲಾಗುವುದು. ಇದನ್ನು ತರುವುದಕ್ಕಾಗಿ ಪ್ರತ್ಯೇಕ ವಾಹನ, ಸಂಗ್ರಹಿಸಡಲು ಸ್ಥಳ ಪ್ರತಿಯೊಂದಕ್ಕೂ ನಿಯಮಗಳಿವೆ.
ಇದನ್ನು ಇಲ್ಲಿಯವರು ಪಾಲನೆ ಮಾಡಿದ್ದಾರೆ ಎಂಬುದನ್ನು ಪರಿಶೀಲನೆ ಮಾಡುತ್ತೇವೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಕೆಲವು ಸಂದರ್ಭಗಳಲ್ಲಿ ಅಭಿವೃದ್ದಿ ಕಾರ್ಯಗಳಿಗಾಗಿ ಕಲ್ಲು ಗಣಿಗಾರಿಕೆ ಅಗತ್ಯವಾಗಿರುತ್ತದೆ. ಅಧಿಕಾರಿಗಳು ಪರಿಶೀಲನೆ ಮಾಡಿ ಅನುಮತಿ ನೀಡಿರುತ್ತಾರೆ. ಈಗ ಎಲ್ಲೆಲ್ಲಿ ಅನಧಿಕೃತವಾಗಿ ಇಂತಹ ಚಟುವಟಿಕೆಗಳನ್ನು ನಡೆಸಿರುತ್ತಾರೋ ಅವುಗಲ ವಿರುದ್ಧ ಕ್ರಮ ಕೈಗೊಳ್ಳಲು ನೋಟಿಸ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಈವರೆಗೂ ಘಟನೆಯಲ್ಲಿ 5 ಮಂದಿ ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
5 ಲಕ್ಷ ಪರಿಹಾರ ಘೋಷಣೆ
ಶಿವಮೊಗ್ಗದ ಹುಣಸೋಡು ಸ್ಪೋಟದಲ್ಲಿ ಮೃತಪಟ್ಟ ಕುಟುಂಬಗಳಿಗೆ ಸಿಎಂ ಯಡಿಯೂರಪ್ಪ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯಿಂದಲೂ ಪರಿಹಾರ ನೀಡುವ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಸದ್ಯದಲ್ಲೇ ಅಧಿಕಾರಿಗಳ ಸಭೆ ಕರೆದು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಮುರುಗೇಶ್ ನಿರಾzಣಿ ಆಶ್ವಾಸನೆ ನೀಡಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇಂತಹ ಘಟನೆ ನಡೆದಿದ್ದು ನೋವಿನ ಸಂಗತಿ. ಮೃತರ ಕುಟುಂಬಗಳಿಗೆ ಸಾಂತ್ವಾನ ಹೇಳಲು ನಮ್ಮ ಬಳಿ ಪದೇಗಳೇ ಇಲ್ಲದಂತಾಗಿದೆ. ನೋವು ಭರಿಸುವ ಶಕ್ತಿ ಆ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








