ಮೋದಿ ಸರ್ಕಾರದ ದಾಳಿಯಿಂದ ತಮಿಳು ಸಂಸ್ಕೃತಿಯ ರಕ್ಷಣೆಗೆ ನಾವು ಬದ್ಧ : ರಾಹುಲ್ ಗಾಂಧಿ
ನವದೆಹಲಿ: ಇಂದಿನಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮಿಳುನಾಡಿನಲ್ಲಿ 3 ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳುನಾಡು ಸಂಸ್ಕೃತಿಯನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.
ಈ ದೇಶ ಕಂಡ ಅಪ್ರತಿಮ ಮಹಾ ದಂಡನಾಯಕ ನೇತಾಜಿ ಸುಭಾಷ್ ಬೋಸ್ ಜನ್ಮಜಯಂತಿ ನಿಜವಾದ ಪರಾಕ್ರಮ್ ದಿವಸವಲ್ಲದೇ ಇನ್ನೇನು!
ಇನ್ನೂ ವಿಧಾನಸೌಧದಲ್ಲಿ ವಿಧಾನಸಭಾ ಚುನಾವಣೆ ಸಮೀಪದಲ್ಲೇ ಇರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ತಮಿಳುನಾಡು ಭೇಟಿ ಕುತೂಹಲ ಮೂಡಿಸಿದೆ. ಅಲ್ಲದೇ ಇತ್ತೀಚೆಗಷ್ಟೇ ‘ಪೊಂಗಲ್’ ಹಬ್ಬದ ಪ್ರಯುಕ್ತ ನಡೆದ ‘ಜಲ್ಲಿಕಟ್ಟು’ ಗ್ರಾಮೀಣ ಕ್ರೀಡೆಯಲ್ಲೂ ಭಾಗವಹಿಸುವ ಮೂಲಕ ರಾಗಾ ಗಮನ ಸೆಳೆದಿದ್ದರು. ಈ ಮೂಲಕ ಇದೇ ತಿಂಗಳಲ್ಲೇ 2ನೇ ಬಾರಿಗೆ ತಮಿಳುನಾಡು ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈ ಕುರಿತು ವಿಶೇಷ ವಿಡಿಯೊವನ್ನು ಹಂಚಿದ್ದಾರೆ.
https://twitter.com/RahulGandhi/status/1352805853527564289
ತಮಿಳುನಾಡಿಗೆ ಮತ್ತೊಮ್ಮೆ ಹಿಂತಿರುಗಲು ನನಗೆ ಸಂತಸವಾಗುತ್ತಿದೆ. ಕೊಂಗು ನಾಡಿನ ನನ್ನ ತಮಿಳು ಸಹೋದರ ಹಾಗೂ ಸಹೋದರಿಯೊಂದಿಗೆ ಸಮಯ ಕಳೆಯಲಿದ್ದೇನೆ. ನಾವೆಲ್ಲರೂ ಒಟ್ಟಾಗಿ, ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳರ ವಿಶಿಷ್ಟ ಸಂಸ್ಕೃತಿಯನ್ನು ರಕ್ಷಿಸಲಿದ್ದೇವೆ ಎಂದು ಟ್ವೀಟ್ ಮಾಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








