ನವದೆಹಲಿ: ಸದ್ಯ ದೇಶದಲ್ಲಿ ಕೊರೊನಾಸುರನ ರೌದ್ರನರ್ತನ ಜೋರಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2000 ರ ಗಡಿ ದಾಟಿದ್ದು ಒಟ್ಟು 50ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಮಹಾಮಾರಿಯ ಹೊಡೆತಕ್ಕೆ ಭಾರತ ತತ್ತರಿಸಿ ಹೋಗುತ್ತಿದ್ದು, ಭಾರತದ ನೆರವಿಗೆ ವಿಶ್ವಬ್ಯಾಂಕ್ ಮುಂದಾಗಿದೆ. ಕೊರೊನಾ ವಿರುದ್ಧ ಹೋರಾಡಲು ಭಾರತಕ್ಕೆ ಒಟ್ಟು ಒಂದು ಬಿಲಿಯನ್ ಡಾಲರ್ ಅಂದ್ರೆ 7634 ಕೋಟಿ ರೂಪಾಯಿ ನೀಡಲು ವಿಶ್ವಬ್ಯಾಂಕ್ ಮುಂದಾಗಿದೆ. ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ವೈದ್ಯಕೀಯ ಸಲಕರಣೆ, ಸ್ಕ್ರೀನಿಂಗ್, ಸೋಂಕಿತರ ಪತ್ತೆ ಹಾಗೂ ಪ್ರಯೋಗಾಲಯಗಳ ನಿರ್ಮಾಣ ಸೇರಿದಂತೆ ಹಲವು ಮೂಲ ಸೌಕರ್ಯಗಳಿಗಾಗಿ ವಿಶ್ವಬ್ಯಾಂಕ್ ಸಹಾಯಕ್ಕೆ ಮುಂದಾಗಿದೆ.
ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...








