ನವದೆಹಲಿ: ಸದ್ಯ ದೇಶದಲ್ಲಿ ಕೊರೊನಾಸುರನ ರೌದ್ರನರ್ತನ ಜೋರಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2000 ರ ಗಡಿ ದಾಟಿದ್ದು ಒಟ್ಟು 50ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಮಹಾಮಾರಿಯ ಹೊಡೆತಕ್ಕೆ ಭಾರತ ತತ್ತರಿಸಿ ಹೋಗುತ್ತಿದ್ದು, ಭಾರತದ ನೆರವಿಗೆ ವಿಶ್ವಬ್ಯಾಂಕ್ ಮುಂದಾಗಿದೆ. ಕೊರೊನಾ ವಿರುದ್ಧ ಹೋರಾಡಲು ಭಾರತಕ್ಕೆ ಒಟ್ಟು ಒಂದು ಬಿಲಿಯನ್ ಡಾಲರ್ ಅಂದ್ರೆ 7634 ಕೋಟಿ ರೂಪಾಯಿ ನೀಡಲು ವಿಶ್ವಬ್ಯಾಂಕ್ ಮುಂದಾಗಿದೆ. ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ವೈದ್ಯಕೀಯ ಸಲಕರಣೆ, ಸ್ಕ್ರೀನಿಂಗ್, ಸೋಂಕಿತರ ಪತ್ತೆ ಹಾಗೂ ಪ್ರಯೋಗಾಲಯಗಳ ನಿರ್ಮಾಣ ಸೇರಿದಂತೆ ಹಲವು ಮೂಲ ಸೌಕರ್ಯಗಳಿಗಾಗಿ ವಿಶ್ವಬ್ಯಾಂಕ್ ಸಹಾಯಕ್ಕೆ ಮುಂದಾಗಿದೆ.
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ
ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...








