ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟಾಪ್ 10 ರಾಜ್ಯ ಸುದ್ದಿಗಳು : ಇತ್ತೀಚಿನ ಪ್ರಮುಖ ಸುದ್ದಿಗಳು

Namratha Rao by Namratha Rao
January 29, 2021
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಎಸ್‍ಎಸ್‍ಎಲ್‍ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಜೂನ್ 14ರಿಂದ 25ರವರೆಗೆ ಪರೀಕ್ಷೆ

ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟ
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಜೂನ್ 14ರಿಂದ 25ರವರೆಗೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.
ಪರೀಕ್ಷಾ ವೇಳಾಪಟ್ಟಿ ಇಂತಿದೆ..

14 – ಕನ್ನಡ
16 – ಗಣಿತ
18 – ಇಂಗ್ಲಿಷ್
23 – ಹಿಂದಿ
21 – ವಿಜ್ಞಾನ
25 – ಸಮಾಜ ವಿಜ್ಞಾನ

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಬೆಂಗಳೂರು ಅಂತಾರಾಷ್ಟ್ರೀಯ ಏರ್ ಪೋರ್ಟ್ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ..!

ಬೆಂಗಳೂರು : 2021 ಏರೋ ಇಂಡಿಯಾ ಏರ್ ಶೋ ಹಿನ್ನೆಲೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಲಿದೆ. ಈ ಕುರಿತು ಕೆಐಎಬಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಫೆಬ್ರವರಿ 3 ರಿಂದ 5 ರವರೆಗೆ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಯಲಿದೆ. ಹೀಗಾಗಿ ಏರ್ ಶೋಗೆ ಬೆಂಬಲಿಸಿ ಪೂರ್ವಾಭ್ಯಾಸ ತಾಲೀಮಿಗೆ ಸಹಕಾರ ನೀಡುವ ಉದ್ದೇಶದಿಂದ ಕೆಐಎಬಿ ವಿಮಾನಗಳ ಹಾರಾಟದಲ್ಲಿ ಬದಲಾವಣೆ ಆಗಲಿದೆ.

ಕಪ್ಪು ಬಣ್ಣಕ್ಕೆ ತಿರುಗಿದ ಫಲ್ಗುಣಿ ನದಿ

ಮಂಗಳೂರು : ಜನರ ಬೇಜವಾಬ್ದಾರಿ, ಸ್ಥಳೀಯ ಆಡಳಿತದ ನಿರ್ಲಕ್ಷ್ಯದ ಪರಿಣಾಮ ಫಲ್ಗುಣಿ ನದಿಯು ಕಲುಷಿತಗೊಂಡಿದ್ದು, ಕಪ್ಪು ಬಣ್ಣಕ್ಕೆ ತಿರುಗಿದೆ. ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು, ಕಾರಮೊಗರು, ಏತಮೊಗರು ಮುಂತಾದ ಕಡೆಗಳಲ್ಲಿ ನೀರು ಕಪ್ಪು ಬಣ್ಣಕ್ಕೆ ತಿರುಗಿದೆ. ಇದಲ್ಲದೆ ಫಲ್ಗುಣಿ ನದಿ ತಟದಲ್ಲಿರುವ ಗೋಳಿದಡಿಗುತ್ತಿನ ಮುಹಾಕಾಲೇಶ್ವರ ದೇವರ ಉಜೈನಿ ತೀರ್ಥಬಾವಿಯ ನೀರು ಕೂಡ ಕಪ್ಪು ಬಣ್ಣಕ್ಕೆ ತಿರುಗಿದೆ. ಇದರಿಂದ ಸ್ಥಳೀಯರು ಆತಂಕಗೊಂಡಿದ್ದು, ಕಲುಷಿತ ರಾಸಾಯನಿಕಯುಕ್ತ ನೀರು ಬಂದು ಫಲ್ಗುಣಿ ನದಿಯನ್ನು ಸೇರುವುದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು ಮಾತ್ರವಲ್ಲ, ಹಳದಿ ಬಣ್ಣದ ನೊರೆ ಕಂಡು ಬರುತ್ತಿದೆ.

ಚಪ್ಪಲಿಯಲ್ಲಿ ಬಡಿದಾಡಿಕೊಂಡ ಬೆಸ್ಕಾಂ ಅಧಿಕಾರಿ-ಸಿಬ್ಬಂದಿ

ರಾಮನಗರ: ಕ್ಷುಲ್ಲಕ ಕಾರಣಕ್ಕೆ ಬೆಸ್ಕಾಂ ಅಧಿಕಾರಿ ಹಾಗೂ ಸಿಬ್ಬಂದಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಘಟನೆ ರಾಮನಗರ ಜಿಲ್ಲೆ ಮಾಗಡಿಯಲ್ಲಿ ನಡೆದಿದೆ.
ಮಾಗಡಿ ತಾಲೂಕು ಬೆಸ್ಕಾಂ ಸಹಾಯಕ ಲೆಕ್ಕಾಧಿಕಾರಿ ಮಲವೇಗೌಡ ಹಾಗೂ ಮೀಟರ್ ರೀಡರ್ ಎಂ.ಆರ್.ಮಹಾದೇವಯ್ಯ ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಮಲವೇಗೌಡ ಅವರು ಸಿಬ್ಬಂದಿ ಮಹಾದೇವಯ್ಯಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಜತೆಗೆ ಅವಾಚ್ಯ ಶಬ್ದಗಳಿಂದ ಪರಸ್ಪರ ನಿಂದಿಸಿಕೊಂಡಿದ್ದಾರೆ.

ಬಿ.ಇಡಿ ಕೋರ್ಸ್ ಗೆ ಅರ್ಜಿ ಸಲ್ಲಿಸುವವರಿಗೆ ಸಿಹಿ ಸುದ್ದಿ

ಬೆಂಗಳೂರು : ಬಿ.ಇಡಿ ಕೋರ್ಸ್ ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜನವರಿ 31ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕುರಿತು ಪ್ರಕಟನೆ ಹೊರಡಿಸಲಾಗಿದ್ದು, 2020- 21ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸ್ ನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಇಲಾಖೆ ವೆಬ್ ಸೈಟ್ ನಲ್ಲಿ ಜನವರಿ 13 ರಿಂದ 26ರ ವರೆಗೆ ಆಹ್ವಾನಿಸಲಾಗಿತ್ತು. ಹಲವಾರು ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ಆನ್ ಲೈನ್ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಜನವರಿ 31ರ ವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ವೆಬ್ ಸೈಟ್ www.schooleducation.kar.nic.in ನಲ್ಲಿ ಪ್ರಕಟಿಸಲಾದ ಅಧಿಸೂಚನೆಯಲ್ಲಿ ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಇದರೊಂದಿಗೆ ಜಿಲ್ಲಾವಾರು ಬಿ.ಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿ ಹಾಗೂ ಇತರೆ ಸೂಚನೆಗಳನ್ನು ನೀಡಲಾಗಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಅದನ್ನು ಓದಿ ನಂತರ ಆನ್ ಲೈನ್ ಅರ್ಜಿ ಭರ್ತಿ ಮಾಡುವಂತೆ ಇಲಾಖೆ ಸೂಚಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: major news updatesSSLC examsState News
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram