ಬೆಂಗಳೂರು : ಬ್ಯಾಟರಾಯನಪುರದ ಸಾರಾಯಿ ಪಾಳ್ಯದ ಸಾದಿಕ್ ಲೇಔಟ್ ನಲ್ಲಿ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ವಿಚಾರವಾಗಿ ಮಾಜಿ ಸಚಿವ ಜಮೀರ್ ಖಾನ್ ಪ್ರತಿಕ್ರಿಯೆ ನೀಡಿದ್ದು, ಘಟನೆಯನ್ನು ಸಮರ್ಥನೆ ಮಾಡಿಕೊಳ್ಳುವ ರೀತಿಯಲ್ಲಿ ಮಾತನಾಡಿದ್ದಾರೆ.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಮುಖಂಡರ ಸಭೆ ನಡೆಯಿತು. ಈ ಸಭೆಯಲ್ಲಿ ಪಾಲ್ಗೊಂಡ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಜಮೀರ್ ಅಹಮದ್ ಖಾನ್, ಕೊರೊನಾ ಹಿನ್ನೆಲೆಯಲ್ಲಿ ಆರೋಗ್ಯ ಮಾಹಿತಿ ಪಡೆಯಲು ಆಶಾ ಕಾರ್ಯಕರ್ತರು ಹಾಗೂ ನರ್ಸ್ ತೆರಳಿದ್ದ ವೇಳೆ ಬಡಾವಣೆಯ ಜನತೆ ಸರಿಯಾಗಿ ಮಾಹಿತಿ ಇಲ್ಲದೇ, ತಮ್ಮ ಕುಟುಂಬದವರಿಗೆ ಮಾಹಿತಿ ಕೊಟ್ಟಿದ್ದಾರೆ. ಹೀಗಾಗಿ ಅಲ್ಲಿನವರು ಸಿಎಎ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆಂದು ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ್ದಾರೆಂದು ಹೇಳಿದ್ದಾರೆ.
ಅಲ್ಲದೇ, ಹೆಲ್ತ್ ಸರ್ವೇ ಮಾಡಲು ಹೋಗಿದ್ದ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸರ್ವೇ ಮಾಡಲು ಹೇಳಿದ್ದು ಯಾರು..? ಎಂದು ಪ್ರಶ್ನಿಸಿದ ಅವರು ಸರ್ಕಾರದ ಅನುಮತಿ ಪಡೆದು ಹೋಗಬೇಕಿತ್ತು ಎಂದಿದ್ದಾರೆ.
ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...








