ADVERTISEMENT
Monday, May 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪರಿಷತ್ ಗದ್ದಲ | ನೂತನ ಉಪಸಭಾಪತಿ ಪ್ರಾಣೇಶ್ ಹಲವರಿಗೆ ನಿರ್ಬಂಧಕ್ಕೆ ಶಿಫಾರಸು..!

Kariyappa N by Kariyappa N
January 29, 2021
in Newsbeat, Politics, Samagra karnataka, ರಾಜ್ಯ
council
Share on FacebookShare on TwitterShare on WhatsappShare on Telegram

ಬೆಂಗಳೂರು: ಕಳೆದ ಡಿಸೆಂಬರ್ 15ರಂದು ವಿಧಾನಪರಿಷತ್‍ನಲ್ಲಿ ನಡೆದ ಗಲಾಟೆ, ಉಪಸಭಾಪತಿಗಳನ್ನು ಎಳೆದಾಡಿ ನೂಕಾಟಕ್ಕೆ ಸಂಬಂಧಿಸಿದಂತೆ ನೂತನ ಉಪಸಭಾಪತಿಯಾಗಿ ಆಯ್ಕೆಯಾಗಿರುವ ಪ್ರಾಣೇಶ್ ಸೇರಿದಂತೆ ಹಲವು ಸದಸ್ಯರನ್ನು ಕಲಾಪದಿಂದ ನಿರ್ಬಂಧಿಸುವಂತೆ ಶಿಫಾರಸು ಮಾಡಿರುವುದು ಮತ್ತೆ ರಾಜಕೀಯ ಸಂಘರ್ಷಕ್ಕೆ ಎಡೆಮಾಡಿಕೊಡುವ ಸಾಧ್ಯತೆ ಇದೆ.
ಡಿ.15ರ ಘಟನೆಗೆ ಸಂಬಂಧಿಸಿದಂತೆ ಜೆಡಿಎಸ್‍ನ ಮರಿತಿಬ್ಬೇಗೌಡ ನೇತೃತ್ವದ ಸದನ ಸಮಿತಿಯ ಮಧ್ಯಂತರ ವರದಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರಿಗೆ ಶಿಫಾರಸು ಮಾಡಿದೆ.


ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮೀ ನಿಯಮಗಳ ಪ್ರಕಾರ ಜವಾಬ್ದಾರಿ ನಿರ್ವಹಿಸಿಲ್ಲ. ಹೀಗಾಗಿ ಅಂತಿಮ ವರದಿ ಬರುವವರೆಗೂ ಪರಿಷತ್ ಕಾರ್ಯದರ್ಶಿಯಾಗಿ ಮುಂದುವರೆಯದಂತೆ ಸಮಿತಿ ಶಿಫಾರಸು ಮಾಡಿದೆ. ಜತೆಗೆ ಆಡಳಿತಾತ್ಮಕ ಕರ್ತವ್ಯ ನಿರ್ಲಕ್ಷ್ಯದ ಬಗ್ಗೆ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಈ ಬಗ್ಗೆ ಇಲಖಾವಾರು ತನಿಖೆ ನಡೆಸುವಂತೆ ಶಿಫಾರಸು ಮಾಡಲಾಗಿದೆ.
ಉಪಸಭಾಪತಿ ಪೀಠದ ಮೇಲೆ ಕುಳಿತಿದ್ದ ಎಸ್.ಎಲ್. ಧರ್ಮೇಗೌಡ ಅವರು ಮೃತಪಟ್ಟಿರುವುದರಿಂದ ಅವರ ಮೇಲಿನ ವಿಚಾರಣೆಯನ್ನು ಕೈಬಿಡಲಾಗಿದೆ. ಆದರೆ, ಕಾನೂನುಬಾಹಿರವಾಗಿ ಉಪಸಭಾಪತಿಗಳನ್ನು ಸಭಾಪತಿ ಪೀಠದ ಮೇಲೆ ಕೂರಲು ಪ್ರೇರೇಪಿಸಿದ ಸಚಿವರಾದ ಜೆ.ಸಿ. ಮಾಧುಸ್ವಾಮಿ, ಡಿಸಿಎಂ ಅಶ್ವತ್ಥ ನಾರಾಯಣ ಅವರು ಸರ್ಕಾರದ ಯಾವುದೇ ಜವಾಬ್ದಾರಿಯಲ್ಲಿ ಮುಂದುವರಿಯಬಾರದು ಎಂದು ಸಮಿತಿ ವರದಿಯಲ್ಲಿ ಹೇಳಿದೆ.

Related posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

May 25, 2026
ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

May 25, 2026

ನೂತನ ಉಪಸಭಾಪತಿಗೂ ನಿರ್ಬಂಧ..!
ಜೊತೆಗೆ, ಸಭಾಪತಿಗಳ ಆಗಮನ ಪ್ರವೇಶ ದ್ವಾರ ಮುಚ್ಚಿ ಸಭಾಪತಿ ಬರುವುದನ್ನು ತಡೆದಿದ್ದ ಸದಸ್ಯರಾದ ಎಂ.ಕೆ. ಪ್ರಾಣೇಶ್, ವೈ.ಎ. ನಾರಾಣಸ್ವಾಮಿ, ಅರುಣ್ ಶಹಾಪುರ ಅವರರನ್ನು ಮುಂದಿನ ಎರಡು ಅಧಿವೇಶನದ ಕಲಾಪದಲ್ಲಿ ಭಾಗವಹಿಸದಂತೆ ನಿಬರ್ಂಧಿಸಲು ಶಿಫಾರಸು ಮಾಡಲಾಗಿದೆ.
ಈ ನಡುವೆ, ಎಂ.ಕೆ. ಪ್ರಾಣೇಶ್ ವಿಧಾನಪರಿಷತ್‍ನ ಉಪಸಭಾಪತಿಯಾಗಿ ಆಯ್ಕೆಯಾಗಿದ್ದು, ಸಮಿತಿಯ ಶಿಫಾರಸು ಯಾವ ರೀತಿ ಪರಿಣಾಮ ಬೀರಲಿದೆ ಎಂಬುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಜತೆಗೆ ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಘರ್ಷಕ್ಕೂ ಎಡೆ ಮಾಡಿಕೊಡುವ ಸಾಧ್ಯತೆ ಇದೆ.
ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ಮುನ್ನ ಆಡಳಿತ ಪಕ್ಷದವರ ಅಧ್ಯಕ್ಷರ ಪೀಠದಲ್ಲಿ ಕುಳಿತ ಚಂದ್ರಶೇಖರ ಪಾಟೀಲ್ ಅವರನ್ನು ಮುಂದಿನ ಒಂದು ಅಧಿವೇಶನದ ಕಲಾಪಕ್ಕೆ ನಿಬರ್ಂಧಿಸಲು ಶಿಫಾರಸು ಮಾಡಲಾಗಿದೆ.

council
ಉಪಸಭಾಪತಿಯನ್ನು ಪೀಠದಿಂದ ಬಲವಂತವಾಗಿ ಇಳಿಸಿದ ನಜೀರ್ ಅಹ್ಮದ್, ಎಂ. ನಾರಾಯಣಸ್ವಾಮಿ, ಶ್ರೀನಿವಾಸ್ ಮಾನೆ, ಪ್ರಕಾಶ್ ರಾಥೋಡ್ ಅವರ ಕೃತ್ಯವೂ ಸಾಬೀತಾಗಿರುವುದಾಗಿ ಸಮಿತಿ ಹೇಳಿದೆ. ಈ ಮೂವರನ್ನು ಮುಂದಿನ ಒಂದು ಅಧಿವೇಶನದ ಕಲಾಪದಲ್ಲಿ ಭಾಗವಹಿಸದಂತೆ ನಿಬರ್ಂಧಿಸಲು ಶಿಫಾರಸು ಮಾಡಲಾಗಿದೆ.
ಬಸವರಾಜ್ ಹೊರಟ್ಟಿ, ಕೆ.ಟಿ. ಶ್ರೀಕಂಠೇಗೌಡ ಮತ್ತು ಗೋವಿಂದರಾಜ್ ನಿಯಮಬಾಹಿರವಾಗಿ ಉಪಸಭಾಪತಿಯನ್ನು ಅಧ್ಯಕ್ಷರ ಪೀಠದ ಮೇಲೆ ಕೂರಿಸಿ ನಿಯಮಬಾಹಿರವಾಗಿ ಸದನ ನಡೆಸಲು ಯತ್ನಿಸಿದರು. ಉಪಸಭಾಪತಿಯನ್ನು ಕೆಳಗಿಳಿಸಿದ ನಂತರ ಅಶ್ವತ್ಥನಾರಾಯಣ ಜೊತೆ ಸೇರಿ ಶ್ರೀಕಂಠೇಗೌಡ ಮತ್ತು ಗೋವಿಂದರಾಜ್ ಮತ್ತೆ ಕೂರಿಸಲು ಯತ್ನಿಸಿರುವುದು ಸರ್ಕಾರಿ ಮತ್ತು ಖಾಸಗಿ ದೃಶ್ಯ ಮಾಧ್ಯಮಗಳ ಸಿಡಿಯಲ್ಲಿ ದೃಢಪಟ್ಟಿದೆ. ಈ ಮೂವರನ್ನು ಎರಡು ಅಧಿವೇಶನದ ಕಲಾಪಕ್ಕೆ ನಿಬರ್ಂಧಿಸಲು ಸಮಿತಿ ಶಿಫಾರಸು ಮಾಡಿದೆ.
ಒಟ್ಟಾರೆ, ಸಮಿತಿಯ ಶಿಫಾರಸನ್ನು ಸಭಾಪತಿಗಳು ಪಾಲಿಸಲು ಮುಂದಾಗುತ್ತಾರಾ.. ಅಷ್ಟರೊಳಗೆ ಹೊಸ ಸಭಾಪತಿಗಳ ಆಯ್ಕೆ ನಡೆದು ಸಮಿತಿಯ ಶಿಫಾರಸುಗಳು ಕಸದ ಬುಟ್ಟಿಗೆ ಸೇರುತ್ತವಾ ಎಂಬುದನ್ನು ಕಾದು ನೋಡಬೇಕಿದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: dec.15 uproarkarnataka legislative councilMadhuswamipraneshrecommendation
ShareTweetSendShare
Join us on:

Related Posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

by Shwetha
May 25, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಅತ್ಯಂತ ಸಂತಸದ ಸುದ್ದಿಯೊಂದು ಸಿಗುವ ಲಕ್ಷಣಗಳು ದಟ್ಟವಾಗಿವೆ. ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಕೇಂದ್ರ ಸರ್ಕಾರದ ಮಾದರಿಯಲ್ಲಿ...

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

by Shwetha
May 25, 2026
0

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶಾದ್ಯಂತ ಖಾಲಿ ಇರುವ...

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

by Shwetha
May 25, 2026
0

ಬೆಂಗಳೂರು: ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ ಆರ್ಗನೈಸೇಶನ್ (EPFO) ತನ್ನ ಕೋಟ್ಯಂತರ ಚಂದಾದಾರರಿಗೆ ಅತ್ಯಂತ ಸುಲಭ ಮತ್ತು ಡಿಜಿಟಲ್ ಸ್ನೇಹಿ ಸೇವೆಯನ್ನು ಒದಗಿಸಲು ಮುಂದಾಗಿದೆ. ಇನ್ಮುಂದೆ ನಿಮ್ಮ ಪಿಎಫ್...

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

by Shwetha
May 25, 2026
0

ತಿರುವನಂತಪುರಂ: ಕೇರಳ ಸರ್ಕಾರವು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಯಾಗಿದ್ದ ರತನ್ ಯು ಕೇಳ್ಕರ್ ಅವರನ್ನು ಪ್ರಮುಖ ಸರ್ಕಾರಿ ಹುದ್ದೆಗೆ ನೇಮಕ ಮಾಡಿರುವುದು ಈಗ ದೊಡ್ಡ ರಾಜಕೀಯ ಗದ್ದಲಕ್ಕೆ...

ಕಾಂಗ್ರೆಸ್ ಎಂದರೆ ಆಧುನಿಕ ಮುಸ್ಲಿಂ ಲೀಗ್: ಸತ್ತವರಿಂದಲೂ ಲೂಟಿ ಮಾಡುತ್ತಿದೆ ದರೋಡೆಕೋರ ಸರ್ಕಾರ : ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ಅಸ್ತಿತ್ವಕ್ಕೇ ಸಂಚಕಾರ ತಂದಿದೆಯೇ ಕಾಕ್ರೋಚ್ ಜನತಾ ಪಾರ್ಟಿ? : ಪ್ರಲ್ಹಾದ್ ಜೋಶಿ

by Shwetha
May 25, 2026
0

ಹುಬ್ಬಳ್ಳಿ: ಕಾಕ್ರೋಚ್ ಜನತಾ ಪಾರ್ಟಿ ಎಂಬ ವಿವಾದಾತ್ಮಕ ಹೆಸರಿನ ವಿಚಾರವಾಗಿ ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈ ಹೊಸ ಬೆಳವಣಿಗೆಯಿಂದ ಬಿಜೆಪಿ ವಿಚಲಿತವಾಗಿದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram