ಕೋರನಾ ನಿಯಂತ್ರಿಸುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದ ಬೆಂಬಲ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮೇರೆಗೆ ಬೆಂಗಳೂರಿನ ಕೆ. ಆರ್ ಮಾರುಕಟ್ಟೆಯಲ್ಲಿರುವ ಜಾಮಿಯಾ ಮಸೀದಿಯಲ್ಲಿ ಮುಸ್ಲಿಂ ಮುಖಂಡರು ಧರ್ಮಗುರುಗಳ ಜೊತೆ ಸಭೆ ನಡೆಸಿ, ಸರ್ಕಾರದ ಕಾರ್ಯಗಳಿಗೆ ಬೆಂಬಲ ಸೂಚಿಸುವ ನಿರ್ಧಾರ ಕೈಗೊಂಡಿದ್ದಾರೆ.
ಕೊರೊನಾ ತಪಾಸಣೆಗೆ ಸಹಕರಿಸುವಂತೆ ಎಲ್ಲ ಮಸಿದಿಗಳ ಮೂಲಕ ಮುಸ್ಲಿಂ ಸಮಾಜದ ಜನರಿಗೆ ಜಾಗೃತಿ ಮೂಡಿಸುವುದು ಹಾಗೂ ಸರ್ಕಾರದ ಸೂಚನೆಯಂತೆ ಮಸೀದಿಗಳಲ್ಲಿ ನಮಾಜ್ ಮಾಡದೇ ಮನೆಗಳಲ್ಲಿಯೇ ನಮಾಜ್ ಮಾಡುವಂತೆ ಸಮಾಜದ ಜನರಿಗೆ ಮಾಹಿತಿ ನೀಡಲು ಮುಸ್ಲಿಂ ಧರ್ಮಗುರುಗಳ ಜೊತೆಯಲ್ಲಿ ನಡೆದ ನಾಯಕರ ಸಭೆಯಲ್ಲಿ ನಿರ್ಣಯಿಸಲಾಗಿದೆ.
ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ
ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...








