ಕೋರನಾ ನಿಯಂತ್ರಿಸುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದ ಬೆಂಬಲ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮೇರೆಗೆ ಬೆಂಗಳೂರಿನ ಕೆ. ಆರ್ ಮಾರುಕಟ್ಟೆಯಲ್ಲಿರುವ ಜಾಮಿಯಾ ಮಸೀದಿಯಲ್ಲಿ ಮುಸ್ಲಿಂ ಮುಖಂಡರು ಧರ್ಮಗುರುಗಳ ಜೊತೆ ಸಭೆ ನಡೆಸಿ, ಸರ್ಕಾರದ ಕಾರ್ಯಗಳಿಗೆ ಬೆಂಬಲ ಸೂಚಿಸುವ ನಿರ್ಧಾರ ಕೈಗೊಂಡಿದ್ದಾರೆ.
ಕೊರೊನಾ ತಪಾಸಣೆಗೆ ಸಹಕರಿಸುವಂತೆ ಎಲ್ಲ ಮಸಿದಿಗಳ ಮೂಲಕ ಮುಸ್ಲಿಂ ಸಮಾಜದ ಜನರಿಗೆ ಜಾಗೃತಿ ಮೂಡಿಸುವುದು ಹಾಗೂ ಸರ್ಕಾರದ ಸೂಚನೆಯಂತೆ ಮಸೀದಿಗಳಲ್ಲಿ ನಮಾಜ್ ಮಾಡದೇ ಮನೆಗಳಲ್ಲಿಯೇ ನಮಾಜ್ ಮಾಡುವಂತೆ ಸಮಾಜದ ಜನರಿಗೆ ಮಾಹಿತಿ ನೀಡಲು ಮುಸ್ಲಿಂ ಧರ್ಮಗುರುಗಳ ಜೊತೆಯಲ್ಲಿ ನಡೆದ ನಾಯಕರ ಸಭೆಯಲ್ಲಿ ನಿರ್ಣಯಿಸಲಾಗಿದೆ.
ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!
ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....








