ನನ್ನ ಮತ್ತು ಶ್ರೀರಾಮುಲು ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ವೈದ್ಯಕೀಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಸಚಿವ ಸಂಪುಟ ರಚನೆ ಆದ ಬಳಿಕ ಸಚಿವ ಶ್ರೀರಾಮುಲು ಮತ್ತು ಸಚಿವ ಸುಧಾಕರ್ ನಡುವೆ ಶೀತಲ ಸಮರ ನಡೆಯುತ್ತಿದೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಕೇಳಿ ಬಂದಿದ್ದವು. ಈ ಮಾತುಗಳಿಗೆ ಮತ್ತಷ್ಟು ಪುಷ್ಠಿ ನೀಡುವಂತಹ ಘಟನೆ ಶುಕ್ರವಾರ ನಡೆದಿದೆ. ಪ್ರತಿನಿತ್ಯ ಹೆಲ್ತ್ ಬುಲೆಟಿನ್ ಓದಬೇಕು. ಆ ಜವಾಬ್ದಾರಿ ಶ್ರೀ ರಾಮುಲು ಸುಧಾಕರ್ ಬದಲಾಗಿ, ಸಿಎಂ ಯಡಿಯೂರಪ್ಪ ಮತ್ತು ಸಚಿವ ಸುರೇಶ ಅವರಿಗೆ ನೀಡಿದ್ದರು. ಆದರೆ ಶೀತಲ ಸಮರದ ವಿಷಯವನ್ನು ಸುಧಾಕರ್ ಅಲ್ಲಗಳೆದರು. ಇಂತಹ ಪರಿಸ್ಥಿತಿಯಲ್ಲಿ ಸಿಟ್ಟಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳ ಅಲ್ಲ. ನಮಗೆ ಜವಾಬ್ದಾರಿ ಇದೆ. ಸುಳ್ಳು ಸುದ್ದಿ ನೀಚ ರಾಜಕೀಯದ ಷಡ್ಯಂತ್ರವಾಗಿದೆ. ನನ್ನ ಮತ್ತು ಶ್ರೀರಾಮುಲು ಅವರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆ ಗೆ ಪರಿಹಾರ ಹುಡುಕುತ್ತಿದ್ದೇವೆ.ನಾವಿಬ್ಬರು ಅಣ್ಣ- ತಮ್ಮರಂತೆ ಇದ್ದೇವೆ ಎಂದು ಸಚಿವ ಸುಧಾಕರ ಟ್ವೀಟ್ ಮಾಡಿದ್ದಾರೆ.
fifa worldcup2026-ವಿಶ್ವ ಫುಟ್ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು
ಸಿಆರ್ & ಎಲ್ಎಂ..! ವಿಶ್ವ ಫುಟ್ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...








